Homeಮುಖಪುಟಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು...

ಹೊಸ ವಿಧಿವಿಜ್ಞಾನ ವರದಿ ಬಹಿರಂಗ; ರೋನಾ ವಿಲ್ಸನ್ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ: ವರದಿ

- Advertisement -
- Advertisement -

ಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿತ್ತು. ಅವರಲ್ಲಿ ರೋನಾ ವಿಲ್ಸನ್ ಕೂಡ ಒಬ್ಬರು. ಈ ಪ್ರಕರಣದ ಬಗ್ಗೆ ವಾಶಿಂಗ್ಟನ್‌ ಪೋಸ್ಟ್‌‌ ಅಘಾತಕಾರಿ ತನಿಖಾ ವರದಿಯನ್ನು ಬಹಿರಂಗಪಡಿಸಿದೆ. ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತರಿಂದ ಪೊಲೀಸರು ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌‌ನೊಳಗೆ ಸಾಕ್ಷ್ಯಗಳನ್ನು ಹ್ಯಾಕರ್‌ಗಳು ಸೈಬರ್‌ ದಾಳಿಯ ಮೂಲಕ ಸೇರಿಸಿದ್ದರು ಎಂದು ಹೊಸ ವಿಧಿವಿಜ್ಞಾನ ವರದಿಯು ಹೇಳಿದೆ ಎಂದು ವಾಶಿಂಗ್ಟನ್ ಪೋಸ್ಟ್‌ ಹೇಳಿದೆ.

ಮ್ಯಾಸಚೂಸೆಟ್ಸ್ ಮೂಲದ ಡಿಜಿಟಲ್ ಫೋರೆನ್ಸಿಕ್ಸ್ ಸಂಸ್ಥೆಯ ಆರ್ಸೆನಲ್ ಕನ್ಸಲ್ಟಿಂಗ್‌ನ ವರದಿಯ ಪ್ರಕಾರ, “ಸಾಮಾಜಿಕ ಕಾರ್ಯಕರ್ತರಾದ ರೋನಾ ವಿಲ್ಸನ್ ಅವರ ಬಂಧನಕ್ಕೂ ಮೊದಲು, ಹ್ಯಾಕರ್‌ ಅವರ ಲ್ಯಾಪ್‌ಟಾಪ್‌ಗೆ ಪ್ರವೇಶ ಪಡೆದು ಮಾಲ್‌ವೇರ್‌‌ ಬಳಸಿ ಹತ್ತು ಪತ್ರಗಳನ್ನು ಸೇರಿಸಿದ್ದನು”. ಈ ಹತ್ತು ಪತ್ರಗಳನ್ನು ಉಲ್ಲೇಖಿಸಿ ಪೊಲೀಸರು ಅವರ ಮೇಲೆ ದೋಷಾರೋಪಣೆ ಮಾಡಿದ್ದರು.

ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ನ್ಯಾಯಲಯದ ವಿಚಾರಣೆಯಿಲ್ಲದೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಇಡಲಾಗಿದೆ. ಸಾಮಾಜಿಕ ಕಾರ್ಯಕರ್ತರ ಈ ಬಂಧನವನ್ನು ಮಾನವ ಹಕ್ಕುಗಳ ಗುಂಪುಗಳು ಮತ್ತು ಕಾನೂನು ತಜ್ಞರು,  ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಕೇಂದ್ರ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯ ಪ್ರಯತ್ನವೆಂದು ಆರೋಪಿಸುತ್ತಲೆ ಬಂದಿದ್ದರು.

ಇದನ್ನೂ ಓದಿ: ಮೋದಿ ಹತ್ಯೆಯ ಸಂಚು ಎಂಬ ಚಿಂದಿ ಕಾಗದ

ಆರ್ಸೆನಲ್ ಕನ್ಸಲ್ಟಿಂಗ್‌ ವರದಿಯು ಸೈಬರ್ ದಾಳಿ ನಡೆಸಿದ ಅಪರಾಧಿಯನ್ನು ಗುರುತಿಸಿಲ್ಲ. ರೋನಾ ವಿಲ್ಸನ್ ಅವ‌ರನ್ನು ಪ್ರತಿನಿಧಿಸುವ ವಕೀಲ ಸುದೀಪ್ ಪಾಸ್‌ಬೋಲಾ, “ಆರ್ಸೆನಲ್ ವರದಿಯು ತನ್ನ ಕಕ್ಷಿದಾರರ ನಿರಪರಾಧಿತ್ವವನ್ನು ಸಾಬೀತುಪಡಿಸಲು ನೆರವಾಗುತ್ತದೆ” ಎಂದಿದ್ದಾರೆ. ಬುಧವಾರವಷ್ಟೇ, ವಿಲ್ಸನ್ ಅವರ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಬಾಂಬೆ ಹೈಕೋರ್ಟ್‌‌ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಆರ್ಸೆನಲ್‌‌ ಕನ್ಸಲ್ಟಿಂಗ್‌ ವರದಿಯನ್ನು ಸೇರಿಸಿದ್ದಾರೆ.

ಆದರೆ ವಿಲ್ಸನ್ ಅವರ ವಿರುದ್ದದ ಪ್ರಕರಣಗಳ ಮೇಲ್ವಿಚಾರಣೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಯ ವಕ್ತಾರರಾದ ಜಯಾ ರಾಯ್, ಆರ್ಸೆನಲ್‌‌ ಕನ್ಸಲ್ಟಿಂಗ್‌ ವರದಿಯನ್ನು ನಿರಾಕರಿಸಿದ್ದು, “ಲ್ಯಾಪ್‌ಟಾಪ್‌ನ ವಿಧಿವಿಜ್ಞಾನ ವಿಶ್ಲೇಷಣೆಯು ಸಾಧನದಲ್ಲಿ ಮಾಲ್‌ವೇರ್‌ನ ಯಾವುದೇ ಪುರಾವೆಗಳನ್ನು ತೋರಿಸಲಿಲ್ಲ” ಎಂದು ಹೇಳಿದ್ದಾರೆ. ಅಲ್ಲದೆ ಪ್ರಕರಣದಲ್ಲಿ ಆರೋಪ ಹೊರಿಸಲಾದ ವ್ಯಕ್ತಿಗಳ ವಿರುದ್ಧ “ಸಾಕಷ್ಟು ದಾಖಲೆಗಳು ಮತ್ತು ಮೌಖಿಕ ಪುರಾವೆಗಳು” ಇವೆ ಎಂದು ಅವರು ಹೇಳಿದ್ದಾರೆಂದು ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಪ್ರಕರಣದಲ್ಲಿ 12 ಕ್ಕೂ ಹೆಚ್ಚು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಲಾಗಿದೆ. ಇವರೆಲ್ಲರೂ ಮೋದಿ ಸರ್ಕಾರವನ್ನು ಬಹಿರಂಗವಾಗಿ ವಿರೋಧಿಸುವವರಾಗಿದ್ದರು. “ಅವರಿಗೆ ನಿಷೇಧಿತ ಮಾವೋವಾದಿ ಉಗ್ರಗಾಮಿ ಸಂಬಂಧವಿದ್ದು, ಭಾರತದ ವಿರುದ್ಧ ದಂಗೆ ಏಳಲು ಕೆಲಸ ಮಾಡುತ್ತಿದ್ದರು” ಎಂದು ಆರೋಪಿಸಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?

ರೋನಾ ವಿಲ್ಸನ್ ಮಾವೋವಾದಿ ಉಗ್ರನಿಗೆ ಪತ್ರ ಬರೆದಿದ್ದು, ಅದರಲ್ಲಿ ಅಪ್ರಧಾನಿ ಮೋದಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಕೇಂದ್ರ ಸರ್ಕಾರವು ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಿತ್ತು. ಅವರಲ್ಲಿ ರೋನಾ ವಿಲ್ಸನ್ ಕೂಡ ಒಬ್ಬರು. ಈ ಪ್ರಕರಣದ ಬಗ್ಗೆವರು ಬಂದೂಕುಗಳು ಮತ್ತು ಮದ್ದುಗುಂಡುಗಳ ಬಗ್ಗೆ ಚರ್ಚೆ ಸೇರಿದಂತೆ, ಮೋದಿಯನ್ನು ಹತ್ಯೆ ಮಾಡಲು ಮಾವೋವಾದಿಗಳೊಂದಿಗೆ ಅವರು ಒತ್ತಾಯಸಿದ್ದರು ಎಂದು ಪೊಲೀಸರು ಆರೋಪಿಸಿದ್ದರು. ಈ ಪತ್ರವನ್ನು ವಿಲ್ಸನ್ ಅವರ ಕಂಪ್ಯೂಟರ್‌ ಅನ್ನು ಹ್ಯಾಕ್ ಮಾಡಿ ಗುಪ್ತ ಫೋಲ್ಡರ್‌‌‌ನಲ್ಲಿ ಹಾಕಿಡಲಾಗಿತ್ತು ಎಂದು ಆರ್ಸೆನಲ್ ಕನ್ಸಲ್ಟಿಂಗ್ ಕಂಡು ಹಿಡಿದಿದೆ.

ಆರ್ಸೆನಲ್ ವರದಿಯಲ್ಲಿ, “ಇದು ಆರ್ಸೆನಲ್ ಹಿಂದೆಂದೂ ಕಂಡಿರದ ಅತ್ಯಂತ ಗಂಭೀರವಾದ ಪ್ರಕರಣಗಳಲ್ಲಿ ಒಂದಾಗಿದೆ” ಎಂದು ಹೇಳಿದೆ ಎಂದು ವಾಶಿಂಗ್ಟನ್ ಪತ್ರಿಕೆ ಉಲ್ಲೇಖಸಿದೆ. ಈ ಪತ್ರವನ್ನು ವಿಲ್ಸನ್ ಅವರ ಕಂಪ್ಯೂಟರ್‌ನಲ್ಲಿ ಅಸ್ತಿತ್ವದಲ್ಲಿರದ ಮೈಕ್ರೋಸಾಫ್ಟ್ ವರ್ಡ್‌ನ ಹೊಸ ಆವೃತ್ತಿಯನ್ನು ಬಳಸಿ ರಚಿಸಲಾಗಿದೆ ಎಂದು ಆರ್ಸೆನಲ್‌ ವರದಿಯು ಹೇಳಿದೆ.

ಆರ್ಸೆನಲ್ ಅಧ್ಯಕ್ಷರಾದ ಸ್ಪೆನ್ಸರ್ ಈ ದಾಳಿಯನ್ನು “ಬಹಳ ಸಂಘಟಿತ ಮತ್ತು ಅತ್ಯಂತ ಗಾಢ” ಎಂದು ಕರೆದಿದ್ದಾರೆ. ಹೊಸ ವಿಧಿವಿಜ್ಞಾದ ಈ ಹೊಸ ವರದಿಯನ್ನು ಪ್ರಧಾನಿ ನರೇಂದ್ರ ಮೋದಿಯ ಆಡಳಿತದ ಅಡಿಯಲ್ಲಿ, ಈ ಪ್ರಕರಣದ ವಿಚಾರಣೆಗೆ ಹೇಗೆ ಬಳಸಲಾಗುತ್ತದೆ ಎಂಬ ಅನುಮಾನಗಳು ಇವೆ ಎಂದು ವಾಶಿಂಗ್ಟನ್ ಪೋಸ್ಟ್‌‌ ಹೇಳಿದೆ.

ಇದನ್ನೂ ಓದಿ: ದಲಿತ ಚಿಂತಕರನ್ನು ಮುಗಿಸಲು ಎಲ್ಗರ್ ಪರಿಷತ್ ಪ್ರಕರಣ ವರ್ಗಾವಣೆ: ಬಾಂಬೆ ಹೈಕೋರ್ಟ್‌‌ನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...