Homeಕರ್ನಾಟಕಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

ಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡದ ನಾಲ್ಕು ಬಿಜೆಪಿ ಎಮ್ಮೆಲ್ಲೆಗಳ ನಡುವೆ ಶುರುವಾದ ಹೊಟ್ಟೆಕಿಚ್ಚಿನ ಕಿತ್ತಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಶಿರಸಿಯ ಸೀನಿಯರ್ ಮೋಸ್ಟ್ ಕಾಗೇರಿ ತನಗರಿವಿಲ್ಲದೆ ಒಲ್ಲದ ಸ್ಪೀಕರ್ ಗದ್ದುಗೆಯೇರಿ ಕುಂತಿದ್ದಾರೆ. ಘಟ್ಟದ ಮೇಲಿನ ಕಾಗೇರಿಗೆ ಕರಾವಳಿ ಕಡೆಯ ಮೂವರು ಎಳಸು ಎಮ್ಮೆಲ್ಲೆಗಳು ಸ್ವಪಕ್ಷದಲ್ಲಿ ಪ್ರತಿಸ್ಪರ್ಧಿಗಳಾಗಲು ಸಾಧ್ಯವೇ ಇಲ್ಲ. ಆತನಿಗೇನಿದ್ದರೂ ಸದಾ ಮಗ್ಗಲು ಮುಳ್ಳಾಗಿ ಕಾಡುವ ಎಂಪಿ ಅನಂತ್ಮಾಣಿಯೇ ಆತಂಕಕಾರಿ! ಮಜಾ ಎಂದರೆ, ಕೋಮು ರಾಜಕಾರಣದ ವರಸೆ ಪ್ರಯೋಗಿಸುತ್ತ ಅದಕ್ಕೆ ಹುಸಿ ಅಭಿವೃದ್ಧಿಯ ಮುಸುಕು ತೊಡಿಸುವ ಬೋಂಗು ಬಿಡುವ ಕಾರವಾರದ ರೂಪಾಲಿ ನಾಯ್ಕ, ಕುಮಟೆಯ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನಿಲ್ ನಾಯ್ಕ್ ಮೂರು ಮೂಲೆಯಲ್ಲಿ ನಿಂತು ಪರಸ್ಪರ ಕಾಲೆಳೆದಾಡುತ್ತಿದ್ದಾರೆ. ಈ ಮೂವರೂ ಅನಂತ್ಮಾಣಿಯ ಚೇಲಾಗಳೇ. ಆದರೆ ಮಾಣಿ ಇವರನ್ನೀಗ ಪೂರ್ತಿ ನಂಬುತ್ತಿಲ್ಲ. ಅವರೆಲ್ಲ ಶಾಸಕರಾದ ತಿಂಗಳೊಪ್ಪತ್ತಿನಲ್ಲೇ ಅವರವರ ಕ್ಷೇತ್ರದಲ್ಲಿ “ಚೆಕ್” ಇಟ್ಟು ಬಿಟ್ಟಿದ್ದಾನೆ ಮಾಣಿ!!

ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಕೆನರಾದ ಕೇಸರಿ ಶಾಸಕರಿಗೆಲ್ಲ ಮಂತ್ರಿಗಿರಿ ಕನಸು ಪ್ರತಿ ರಾತ್ರಿಯೂ ಬಿಡದೇ ಬೀಳತೊಡಗಿತ್ತು. ಆದರೆ ಇವರ್ಯಾರೂ ಮಂತ್ರಿಯಾಗೋದು ಅನಂತ್ಮಾಣಿಗೆ ಇಷ್ಟವಿರಲಿಲ್ಲ. ಕಾಗೇರಿ ವಿಧಾನಸಭಾ ಅಧ್ಯಕ್ಷನಾದದ್ದು ರೂಪಾಲಿ, ದಿನಕರ್ ಮತ್ತು ಸುನೀಲ್‍ನಲ್ಲಿ ಮಂತ್ರಿಗಿರಿ ಆಸೆಯ ಹುಚ್ಚೆಬ್ಬಿಸಿತ್ತು. ಇವರಲ್ಲಿ ಒಂದು ಗುಲಗಂಜಿಯಷ್ಟು ಜಾಸ್ತಿಯೇ ಕಸರತ್ತು ಮಾಡಿದ್ದು ಮಾತ್ರ ರೂಪಾಲಿಯಮ್ಮನೇ. ಅದಕ್ಕೆ ಕಾರಣವೂ ಇತ್ತು. ಆಕೆಗೆ ಸಿಎಂ ಯಡ್ಡಿ ಜತೆ ವಿಶೇಷವಾದ ನಂಟಿತ್ತು. ಎರಡನೆಯದು ಮಹಿಳಾ ಕೋಟಾದಲ್ಲಿ ಸಚಿವೆಯಾಗುವ ಅವಕಾಶವಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಯಡ್ಡಿಗೆ ಕರಾವಳಿಯ ಬಿಜೆಪಿ ಶಾಸಕರ ಪೈಕಿ ರೂಪಾಲಿ ಎಂದರೇನೇ ನಂಬಿಕೆ-ಕಕ್ಕುಲಾತಿ ವಿಪರೀತ! ಆಕೆ ತನ್ನ ನಿಗೂಢ ಸಂಪತ್ತನ್ನು ರಾಜಕಾರಣಕ್ಕಾಗಿ ಹರಿಸುವ ದಾಢಸಿತನಕ್ಕೆ ಯಡ್ಡಿ ಮಾರುಹೋಗಿದ್ದಾರೆ. ಹಾಗಾಗಿ ರೂಪಾಲಿ ಮಂತ್ರಿಯಾಗ್ತಾರೆಂಬ ದಟ್ಟ ಭಾವನೆ ಬಿಜೆಪಿಗರಿಗಷ್ಟೇ ಅಲ್ಲ, ಜಿಲ್ಲೆಯಲ್ಲೂ ಮನೆಮಾಡಿತ್ತು.

ಇದು ಸಹಜವಾಗೇ ಜಿಲ್ಲೆಯ ಕಮಲ ಪಾಳಯದ ಪುರುಷೋತ್ತಮ ಶಾಸಕರಲ್ಲಿ ಅಸೂಯೆಗೆ ಕಾರಣವಾಯಿತ್ತು. ಅಕತ್ಮಾತ್ ರೂಪಾಲಿ ಮಂತ್ರಿಣಿಯಾದರೆ ಚಾಲಾಕಿತನದ ಈ ಹೆಣ್ಣು, ತಮ್ಮನ್ನು ನಗಣ್ಯ ಮಾಡಿಬಿಡುತ್ತಾಳೆಂಬ ಆತಂಕ “ಗಂಡು” ಶಾಸಕರ ಕಾಡತೊಡಗಿತ್ತು. ಚಿತ್ರದುರ್ಗದಲ್ಲಿ ಬಿಸ್ನೆಸ್ ಮಾಡುತ್ತಾ ಕಾರವಾರ – ಅಂಕೋಲದಲ್ಲಿ ರಾಜಕಾರಣ ನಡೆಸುವ ರೂಪಾಲಿಯ ಕೊಪ್ಪರಿಗೆ ಕಾಸು, ಗ್ಲಾಮರ್, ಸಿಎಂ ಮತ್ತಿತರ ಬಿಜೆಪಿ ಘಟಾನುಘಟಿಗಳೊಂದಿಗಿನ ನಿಕಟಸಂಪರ್ಕ….. ಹೀಗೆ ಮೂರು ಶಾಸಕರಿಗೆ ಗಂಡಾಂತರಕಾರಿಯೇ ಆಗಿತ್ತು. ಕಾಗೇರಿ ತನ್ನ ಚೆಡ್ಡಿ ಆಶ್ರಯದಾತರ ಬಲ ಮತ್ತು ಹಿರಿತನ ಹಾಗೂ ಸ್ಪೀಕರ್ ಆಗಿರುವುದರಿಂದ ರೂಪಾಲಿ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿದ್ದರೂ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ ಮತ್ತವರ ಬಾಸ್ ಅನಂತ್ಮಾಣಿ ಆತಂಕಗೊಂಡಿದ್ದರು.

ಉತ್ತರ ಕನ್ನಡದ ಮಂತ್ರಿ ಕೋಟಾವನ್ನು ಅನರ್ಹ ಕಮ್ ಅಂತರ್‍ಪಿಶಾಚಿ ಶಾಸಕ ಶಿವರಾಮ ಹೆಬ್ಬಾರ್‍ಗೆ ಮೀಸಲಿಡಲಾಗಿದೆ. ಆದರೆ ಆತ ವನವಾಸ ಮುಗಿಸಿ ಬರುವತನಕ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಯೋಜನೆ ರೂಪಾಲಿ, ಸುನೀಲ್ ಮತ್ತು ದಿನಕರ್‍ಗೆ ಇತ್ತು. ಹೆಬ್ಬಾರ್‍ನನ್ನು ರಹಸ್ಯವಾಗಿ ಭೇಟಿಯಾಗಿದ್ದ ಮೂವರು ತಮ್ಮ ಹೆಸರು ರೆಕಮೆಂಡ್ ಮಾಡುವಂತೆ ಬೇಡಿಕೊಂಡಿದ್ದರು. ಅಂತಿಮವಾಗಿ ತಾವು ಮಂತ್ರಿಯಾಗದಿದ್ದರೂ ಪರವಾಗಿಲ್ಲ ಆದರೆ ರೂಪಾಲಿ ಮಾತ್ರ ಯಾವ ಕಾರಣಕ್ಕೂ ಮಂತ್ರಿಗಿರಿಗೆ ಹಕ್ಕುದಾರಿಣಿ ಆಗಬಾರದೆಂಬ ಹಠಕ್ಕೆ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ ಮತ್ತು ಹೆಬ್ಬಾರ್ ಬಿದ್ದಿದ್ದರು. ಗುರು ಅನಂತ್ಮಾಣಿ ಮೂಲಕವೂ ರೂಪಾಲಿಗೆ ಅಡ್ಡಗಾಲು ಹಾಕಿಸಿದ್ದರು. ಈ ದ್ವೇಷಾಸೂಯೆ ವಿವಿಧ ರೂಪಾತಾಳುತ್ತ ಈಗ ಜಿಲ್ಲಾ ಬಿಜೆಪಿಯನ್ನು ಮನೆಯೊಂದು ಮೂರು ಬಾಗಿಲು ಮಾಡಿಬಿಟ್ಟಿದೆ!

ಈ ನಡುವೆ ಜಿಲ್ಲೆಯ ಹಿಂದೂತ್ವ ರಾಜಕಾರಣದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವ ಎದುರಾಳಿ ಶಾಸಕರ ವರ್ಚಸ್ಸು ಕುಗ್ಗಿಸುವ ಹಿಕಮತ್ತಿನ ಕಾರ್ಯಾಚರಣೆ ಈ ಮೂರು ಶಾಸಕರು ನಡೆಸಿದ್ದರು. ಪರೇಶ್‍ನ ನಿಗೂಢ ಸಾವಿನ ನಂತರ ಜಿಲ್ಲೆಯಲ್ಲಿ ಭುಗಿಲೆದ್ದಿದ್ದಮತೀಯ ದಂಗೆಯಲ್ಲಿ ಭಾಗಿಯಾಗಿ ಕೋರ್ಟ್-ಕಚೇರಿ ಅಲೆಯುತ್ತಿದ್ದ ಆರೋಪಿಗಳ ಕೇಸನ್ನು ಸಂಪುಟ ಸಭೆಯಲ್ಲಿ ಸಿಎಂನಿಂದ ರದ್ದುಮಾಡಿಸುತ್ತೇವೆ ಎಂದು ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮತ್ತು ಕಾಗೇರಿ ಎಲ್ಲರೂ ವೀರಾವೇಷದ ಮಾತು ಆಡುತ್ತಲೇ ಇದ್ದರು. ಆದರೆ ಎಲ್ಲರಿಗಿಂತ ಮೊದಲು ರೂಪಾಲಿ ಸಿಎಂ ಸಂಧಿಸಿ ಪರೇಶ್ ಸಾವಿನ ನಂತರದ ದೊಂಬಿ ಪ್ರಕರಣ ರದ್ದು ಮಾಡುವಂತೆ ಮನವಿ ಕೊಟ್ಟ ಆ ಫೋಟೋ ಮಾಧ್ಯಮಗಳಿಗೆ ಕೊಟ್ಟು ದೊಡ್ಡ ಸುದ್ದಿಯಾಗಿ ಹೋದರು. ಇದು ಪುರುಷ ಶಾಸಕರ ಬೆಚ್ಚಿಬೀಳಿಸಿತು.

ಕೇಸು ರದ್ದತಿಯ ಕ್ರೆಡಿಟ್ ರೂಪಾಲಿ ತಾನೊಬ್ಬಳೇ ಹೊಡೆದುಕೊಳ್ಳಲು ಹವಣಿಸುತ್ತಿರುವುದು ಇವರೆಲ್ಲರ ಕಣ್ಣು ಕೆಂಪಾಗಿಸಿತು. ಆಕೆಗೆ ಪಾಠ ಕಲಿಸಲು ಸ್ಕೆಚ್ ಹಾಕತೊಡಗಿದರು. ಅಷ್ಟೊತ್ತಿಗೆ ಸಿಎಂ ಕೇಸ್ ರದ್ದು ಮಾಡಿಯಾಗಿತ್ತು. ರೂಪಾಲಿ ನಾಯ್ಕ ಪ್ರಯತ್ನದಿಂದಲೇ ಹಿಂದೂ ಕಾರ್ಯಕರ್ತರು ಬಚಾವಾದರೆಂಬ ವ್ಯವಸ್ಥಿತ ಪ್ರಚಾರವೂ ಹಬ್ಬಿತು. ಅಲ್ಲಿಗೆ ರೂಪಾಲಿ ಪ್ರಭಾವ ವೃದ್ಧಿಸಿದರೆ, ಪುರುಷ ಶಾಸಕರ ಪುಂಗಿ ಬಂದ್ ಆಯಿತು!! ಈಗ ನಿಗಮ ಮಂಡಳಿಗಾಗಿ ಮೂವರಲ್ಲಿ ಮೇಲಾಟ ನಡೆದಿದೆ. ಮೊದಲಿನ ಬಾಂಧವ್ಯ ಈಗ ಮೂವರಲ್ಲಿ ಉಳಿದಿಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರು ಅಡ್ಡ ಮುಖ ಹಾಕುತ್ತಿದ್ದಾರೆ.

ಅಂತಿಮವಾಗಿ ಪುರುಷ ಶಾಸಕರು ತಮಗೆ ಅವಕಾಶ ಸಿಗದಿದ್ದರೂ ಸರಿ, ರೂಪಾಲಿಗೆ ಭಾಗ್ಯ ಬರಬಾರದು ಎಂಬ ಪ್ರಯತ್ನದಲ್ಲಿದ್ದಾರೆ. ಆದರೆ ಚಾಲೂ ಪುಢಾರಿಣಿ ಎಂದೇ ಕಾರವಾರದಲ್ಲಿ ಗುರುತಿಸಿಕೊಂಡಿರುವ ರೂಪಾಲಿ ನಾಯ್ಕ ಎದುರಾಳಿಗಳ ಬೇಸ್ತು ಬೀಳಿಸಲು ಏನೇನು ಸಾಧ್ಯವೋ ಅದೆಲ್ಲ ಮಾಡುತ್ತಿದ್ದಾರೆ! ಈ ಅಧಿಕಾರದಾಹದ ಬಡಿದಾಟಕ್ಕೆ ಮುಂದಿನ ದಿನಗಳಲ್ಲಿ ಜಿಲ್ಲಾ ಬಿಜೆಪಿ ಕುಸಿದು ಬೀಳಲಿದೆ ಎಂದು ಆ ಪಕ್ಷದ ನಿಷ್ಠಾವಂತ ಕಾರ್ಯಕರ್ತರೇ ಮಾತಾಡಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...