Homeಕರ್ನಾಟಕಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

ಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡದ ನಾಲ್ಕು ಬಿಜೆಪಿ ಎಮ್ಮೆಲ್ಲೆಗಳ ನಡುವೆ ಶುರುವಾದ ಹೊಟ್ಟೆಕಿಚ್ಚಿನ ಕಿತ್ತಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಶಿರಸಿಯ ಸೀನಿಯರ್ ಮೋಸ್ಟ್ ಕಾಗೇರಿ ತನಗರಿವಿಲ್ಲದೆ ಒಲ್ಲದ ಸ್ಪೀಕರ್ ಗದ್ದುಗೆಯೇರಿ ಕುಂತಿದ್ದಾರೆ. ಘಟ್ಟದ ಮೇಲಿನ ಕಾಗೇರಿಗೆ ಕರಾವಳಿ ಕಡೆಯ ಮೂವರು ಎಳಸು ಎಮ್ಮೆಲ್ಲೆಗಳು ಸ್ವಪಕ್ಷದಲ್ಲಿ ಪ್ರತಿಸ್ಪರ್ಧಿಗಳಾಗಲು ಸಾಧ್ಯವೇ ಇಲ್ಲ. ಆತನಿಗೇನಿದ್ದರೂ ಸದಾ ಮಗ್ಗಲು ಮುಳ್ಳಾಗಿ ಕಾಡುವ ಎಂಪಿ ಅನಂತ್ಮಾಣಿಯೇ ಆತಂಕಕಾರಿ! ಮಜಾ ಎಂದರೆ, ಕೋಮು ರಾಜಕಾರಣದ ವರಸೆ ಪ್ರಯೋಗಿಸುತ್ತ ಅದಕ್ಕೆ ಹುಸಿ ಅಭಿವೃದ್ಧಿಯ ಮುಸುಕು ತೊಡಿಸುವ ಬೋಂಗು ಬಿಡುವ ಕಾರವಾರದ ರೂಪಾಲಿ ನಾಯ್ಕ, ಕುಮಟೆಯ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನಿಲ್ ನಾಯ್ಕ್ ಮೂರು ಮೂಲೆಯಲ್ಲಿ ನಿಂತು ಪರಸ್ಪರ ಕಾಲೆಳೆದಾಡುತ್ತಿದ್ದಾರೆ. ಈ ಮೂವರೂ ಅನಂತ್ಮಾಣಿಯ ಚೇಲಾಗಳೇ. ಆದರೆ ಮಾಣಿ ಇವರನ್ನೀಗ ಪೂರ್ತಿ ನಂಬುತ್ತಿಲ್ಲ. ಅವರೆಲ್ಲ ಶಾಸಕರಾದ ತಿಂಗಳೊಪ್ಪತ್ತಿನಲ್ಲೇ ಅವರವರ ಕ್ಷೇತ್ರದಲ್ಲಿ “ಚೆಕ್” ಇಟ್ಟು ಬಿಟ್ಟಿದ್ದಾನೆ ಮಾಣಿ!!

ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಕೆನರಾದ ಕೇಸರಿ ಶಾಸಕರಿಗೆಲ್ಲ ಮಂತ್ರಿಗಿರಿ ಕನಸು ಪ್ರತಿ ರಾತ್ರಿಯೂ ಬಿಡದೇ ಬೀಳತೊಡಗಿತ್ತು. ಆದರೆ ಇವರ್ಯಾರೂ ಮಂತ್ರಿಯಾಗೋದು ಅನಂತ್ಮಾಣಿಗೆ ಇಷ್ಟವಿರಲಿಲ್ಲ. ಕಾಗೇರಿ ವಿಧಾನಸಭಾ ಅಧ್ಯಕ್ಷನಾದದ್ದು ರೂಪಾಲಿ, ದಿನಕರ್ ಮತ್ತು ಸುನೀಲ್‍ನಲ್ಲಿ ಮಂತ್ರಿಗಿರಿ ಆಸೆಯ ಹುಚ್ಚೆಬ್ಬಿಸಿತ್ತು. ಇವರಲ್ಲಿ ಒಂದು ಗುಲಗಂಜಿಯಷ್ಟು ಜಾಸ್ತಿಯೇ ಕಸರತ್ತು ಮಾಡಿದ್ದು ಮಾತ್ರ ರೂಪಾಲಿಯಮ್ಮನೇ. ಅದಕ್ಕೆ ಕಾರಣವೂ ಇತ್ತು. ಆಕೆಗೆ ಸಿಎಂ ಯಡ್ಡಿ ಜತೆ ವಿಶೇಷವಾದ ನಂಟಿತ್ತು. ಎರಡನೆಯದು ಮಹಿಳಾ ಕೋಟಾದಲ್ಲಿ ಸಚಿವೆಯಾಗುವ ಅವಕಾಶವಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಯಡ್ಡಿಗೆ ಕರಾವಳಿಯ ಬಿಜೆಪಿ ಶಾಸಕರ ಪೈಕಿ ರೂಪಾಲಿ ಎಂದರೇನೇ ನಂಬಿಕೆ-ಕಕ್ಕುಲಾತಿ ವಿಪರೀತ! ಆಕೆ ತನ್ನ ನಿಗೂಢ ಸಂಪತ್ತನ್ನು ರಾಜಕಾರಣಕ್ಕಾಗಿ ಹರಿಸುವ ದಾಢಸಿತನಕ್ಕೆ ಯಡ್ಡಿ ಮಾರುಹೋಗಿದ್ದಾರೆ. ಹಾಗಾಗಿ ರೂಪಾಲಿ ಮಂತ್ರಿಯಾಗ್ತಾರೆಂಬ ದಟ್ಟ ಭಾವನೆ ಬಿಜೆಪಿಗರಿಗಷ್ಟೇ ಅಲ್ಲ, ಜಿಲ್ಲೆಯಲ್ಲೂ ಮನೆಮಾಡಿತ್ತು.

ಇದು ಸಹಜವಾಗೇ ಜಿಲ್ಲೆಯ ಕಮಲ ಪಾಳಯದ ಪುರುಷೋತ್ತಮ ಶಾಸಕರಲ್ಲಿ ಅಸೂಯೆಗೆ ಕಾರಣವಾಯಿತ್ತು. ಅಕತ್ಮಾತ್ ರೂಪಾಲಿ ಮಂತ್ರಿಣಿಯಾದರೆ ಚಾಲಾಕಿತನದ ಈ ಹೆಣ್ಣು, ತಮ್ಮನ್ನು ನಗಣ್ಯ ಮಾಡಿಬಿಡುತ್ತಾಳೆಂಬ ಆತಂಕ “ಗಂಡು” ಶಾಸಕರ ಕಾಡತೊಡಗಿತ್ತು. ಚಿತ್ರದುರ್ಗದಲ್ಲಿ ಬಿಸ್ನೆಸ್ ಮಾಡುತ್ತಾ ಕಾರವಾರ – ಅಂಕೋಲದಲ್ಲಿ ರಾಜಕಾರಣ ನಡೆಸುವ ರೂಪಾಲಿಯ ಕೊಪ್ಪರಿಗೆ ಕಾಸು, ಗ್ಲಾಮರ್, ಸಿಎಂ ಮತ್ತಿತರ ಬಿಜೆಪಿ ಘಟಾನುಘಟಿಗಳೊಂದಿಗಿನ ನಿಕಟಸಂಪರ್ಕ….. ಹೀಗೆ ಮೂರು ಶಾಸಕರಿಗೆ ಗಂಡಾಂತರಕಾರಿಯೇ ಆಗಿತ್ತು. ಕಾಗೇರಿ ತನ್ನ ಚೆಡ್ಡಿ ಆಶ್ರಯದಾತರ ಬಲ ಮತ್ತು ಹಿರಿತನ ಹಾಗೂ ಸ್ಪೀಕರ್ ಆಗಿರುವುದರಿಂದ ರೂಪಾಲಿ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿದ್ದರೂ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ ಮತ್ತವರ ಬಾಸ್ ಅನಂತ್ಮಾಣಿ ಆತಂಕಗೊಂಡಿದ್ದರು.

ಉತ್ತರ ಕನ್ನಡದ ಮಂತ್ರಿ ಕೋಟಾವನ್ನು ಅನರ್ಹ ಕಮ್ ಅಂತರ್‍ಪಿಶಾಚಿ ಶಾಸಕ ಶಿವರಾಮ ಹೆಬ್ಬಾರ್‍ಗೆ ಮೀಸಲಿಡಲಾಗಿದೆ. ಆದರೆ ಆತ ವನವಾಸ ಮುಗಿಸಿ ಬರುವತನಕ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಯೋಜನೆ ರೂಪಾಲಿ, ಸುನೀಲ್ ಮತ್ತು ದಿನಕರ್‍ಗೆ ಇತ್ತು. ಹೆಬ್ಬಾರ್‍ನನ್ನು ರಹಸ್ಯವಾಗಿ ಭೇಟಿಯಾಗಿದ್ದ ಮೂವರು ತಮ್ಮ ಹೆಸರು ರೆಕಮೆಂಡ್ ಮಾಡುವಂತೆ ಬೇಡಿಕೊಂಡಿದ್ದರು. ಅಂತಿಮವಾಗಿ ತಾವು ಮಂತ್ರಿಯಾಗದಿದ್ದರೂ ಪರವಾಗಿಲ್ಲ ಆದರೆ ರೂಪಾಲಿ ಮಾತ್ರ ಯಾವ ಕಾರಣಕ್ಕೂ ಮಂತ್ರಿಗಿರಿಗೆ ಹಕ್ಕುದಾರಿಣಿ ಆಗಬಾರದೆಂಬ ಹಠಕ್ಕೆ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ ಮತ್ತು ಹೆಬ್ಬಾರ್ ಬಿದ್ದಿದ್ದರು. ಗುರು ಅನಂತ್ಮಾಣಿ ಮೂಲಕವೂ ರೂಪಾಲಿಗೆ ಅಡ್ಡಗಾಲು ಹಾಕಿಸಿದ್ದರು. ಈ ದ್ವೇಷಾಸೂಯೆ ವಿವಿಧ ರೂಪಾತಾಳುತ್ತ ಈಗ ಜಿಲ್ಲಾ ಬಿಜೆಪಿಯನ್ನು ಮನೆಯೊಂದು ಮೂರು ಬಾಗಿಲು ಮಾಡಿಬಿಟ್ಟಿದೆ!

ಈ ನಡುವೆ ಜಿಲ್ಲೆಯ ಹಿಂದೂತ್ವ ರಾಜಕಾರಣದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವ ಎದುರಾಳಿ ಶಾಸಕರ ವರ್ಚಸ್ಸು ಕುಗ್ಗಿಸುವ ಹಿಕಮತ್ತಿನ ಕಾರ್ಯಾಚರಣೆ ಈ ಮೂರು ಶಾಸಕರು ನಡೆಸಿದ್ದರು. ಪರೇಶ್‍ನ ನಿಗೂಢ ಸಾವಿನ ನಂತರ ಜಿಲ್ಲೆಯಲ್ಲಿ ಭುಗಿಲೆದ್ದಿದ್ದಮತೀಯ ದಂಗೆಯಲ್ಲಿ ಭಾಗಿಯಾಗಿ ಕೋರ್ಟ್-ಕಚೇರಿ ಅಲೆಯುತ್ತಿದ್ದ ಆರೋಪಿಗಳ ಕೇಸನ್ನು ಸಂಪುಟ ಸಭೆಯಲ್ಲಿ ಸಿಎಂನಿಂದ ರದ್ದುಮಾಡಿಸುತ್ತೇವೆ ಎಂದು ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮತ್ತು ಕಾಗೇರಿ ಎಲ್ಲರೂ ವೀರಾವೇಷದ ಮಾತು ಆಡುತ್ತಲೇ ಇದ್ದರು. ಆದರೆ ಎಲ್ಲರಿಗಿಂತ ಮೊದಲು ರೂಪಾಲಿ ಸಿಎಂ ಸಂಧಿಸಿ ಪರೇಶ್ ಸಾವಿನ ನಂತರದ ದೊಂಬಿ ಪ್ರಕರಣ ರದ್ದು ಮಾಡುವಂತೆ ಮನವಿ ಕೊಟ್ಟ ಆ ಫೋಟೋ ಮಾಧ್ಯಮಗಳಿಗೆ ಕೊಟ್ಟು ದೊಡ್ಡ ಸುದ್ದಿಯಾಗಿ ಹೋದರು. ಇದು ಪುರುಷ ಶಾಸಕರ ಬೆಚ್ಚಿಬೀಳಿಸಿತು.

ಕೇಸು ರದ್ದತಿಯ ಕ್ರೆಡಿಟ್ ರೂಪಾಲಿ ತಾನೊಬ್ಬಳೇ ಹೊಡೆದುಕೊಳ್ಳಲು ಹವಣಿಸುತ್ತಿರುವುದು ಇವರೆಲ್ಲರ ಕಣ್ಣು ಕೆಂಪಾಗಿಸಿತು. ಆಕೆಗೆ ಪಾಠ ಕಲಿಸಲು ಸ್ಕೆಚ್ ಹಾಕತೊಡಗಿದರು. ಅಷ್ಟೊತ್ತಿಗೆ ಸಿಎಂ ಕೇಸ್ ರದ್ದು ಮಾಡಿಯಾಗಿತ್ತು. ರೂಪಾಲಿ ನಾಯ್ಕ ಪ್ರಯತ್ನದಿಂದಲೇ ಹಿಂದೂ ಕಾರ್ಯಕರ್ತರು ಬಚಾವಾದರೆಂಬ ವ್ಯವಸ್ಥಿತ ಪ್ರಚಾರವೂ ಹಬ್ಬಿತು. ಅಲ್ಲಿಗೆ ರೂಪಾಲಿ ಪ್ರಭಾವ ವೃದ್ಧಿಸಿದರೆ, ಪುರುಷ ಶಾಸಕರ ಪುಂಗಿ ಬಂದ್ ಆಯಿತು!! ಈಗ ನಿಗಮ ಮಂಡಳಿಗಾಗಿ ಮೂವರಲ್ಲಿ ಮೇಲಾಟ ನಡೆದಿದೆ. ಮೊದಲಿನ ಬಾಂಧವ್ಯ ಈಗ ಮೂವರಲ್ಲಿ ಉಳಿದಿಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರು ಅಡ್ಡ ಮುಖ ಹಾಕುತ್ತಿದ್ದಾರೆ.

ಅಂತಿಮವಾಗಿ ಪುರುಷ ಶಾಸಕರು ತಮಗೆ ಅವಕಾಶ ಸಿಗದಿದ್ದರೂ ಸರಿ, ರೂಪಾಲಿಗೆ ಭಾಗ್ಯ ಬರಬಾರದು ಎಂಬ ಪ್ರಯತ್ನದಲ್ಲಿದ್ದಾರೆ. ಆದರೆ ಚಾಲೂ ಪುಢಾರಿಣಿ ಎಂದೇ ಕಾರವಾರದಲ್ಲಿ ಗುರುತಿಸಿಕೊಂಡಿರುವ ರೂಪಾಲಿ ನಾಯ್ಕ ಎದುರಾಳಿಗಳ ಬೇಸ್ತು ಬೀಳಿಸಲು ಏನೇನು ಸಾಧ್ಯವೋ ಅದೆಲ್ಲ ಮಾಡುತ್ತಿದ್ದಾರೆ! ಈ ಅಧಿಕಾರದಾಹದ ಬಡಿದಾಟಕ್ಕೆ ಮುಂದಿನ ದಿನಗಳಲ್ಲಿ ಜಿಲ್ಲಾ ಬಿಜೆಪಿ ಕುಸಿದು ಬೀಳಲಿದೆ ಎಂದು ಆ ಪಕ್ಷದ ನಿಷ್ಠಾವಂತ ಕಾರ್ಯಕರ್ತರೇ ಮಾತಾಡಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...