Homeಕರ್ನಾಟಕಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

ಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡದ ನಾಲ್ಕು ಬಿಜೆಪಿ ಎಮ್ಮೆಲ್ಲೆಗಳ ನಡುವೆ ಶುರುವಾದ ಹೊಟ್ಟೆಕಿಚ್ಚಿನ ಕಿತ್ತಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಶಿರಸಿಯ ಸೀನಿಯರ್ ಮೋಸ್ಟ್ ಕಾಗೇರಿ ತನಗರಿವಿಲ್ಲದೆ ಒಲ್ಲದ ಸ್ಪೀಕರ್ ಗದ್ದುಗೆಯೇರಿ ಕುಂತಿದ್ದಾರೆ. ಘಟ್ಟದ ಮೇಲಿನ ಕಾಗೇರಿಗೆ ಕರಾವಳಿ ಕಡೆಯ ಮೂವರು ಎಳಸು ಎಮ್ಮೆಲ್ಲೆಗಳು ಸ್ವಪಕ್ಷದಲ್ಲಿ ಪ್ರತಿಸ್ಪರ್ಧಿಗಳಾಗಲು ಸಾಧ್ಯವೇ ಇಲ್ಲ. ಆತನಿಗೇನಿದ್ದರೂ ಸದಾ ಮಗ್ಗಲು ಮುಳ್ಳಾಗಿ ಕಾಡುವ ಎಂಪಿ ಅನಂತ್ಮಾಣಿಯೇ ಆತಂಕಕಾರಿ! ಮಜಾ ಎಂದರೆ, ಕೋಮು ರಾಜಕಾರಣದ ವರಸೆ ಪ್ರಯೋಗಿಸುತ್ತ ಅದಕ್ಕೆ ಹುಸಿ ಅಭಿವೃದ್ಧಿಯ ಮುಸುಕು ತೊಡಿಸುವ ಬೋಂಗು ಬಿಡುವ ಕಾರವಾರದ ರೂಪಾಲಿ ನಾಯ್ಕ, ಕುಮಟೆಯ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನಿಲ್ ನಾಯ್ಕ್ ಮೂರು ಮೂಲೆಯಲ್ಲಿ ನಿಂತು ಪರಸ್ಪರ ಕಾಲೆಳೆದಾಡುತ್ತಿದ್ದಾರೆ. ಈ ಮೂವರೂ ಅನಂತ್ಮಾಣಿಯ ಚೇಲಾಗಳೇ. ಆದರೆ ಮಾಣಿ ಇವರನ್ನೀಗ ಪೂರ್ತಿ ನಂಬುತ್ತಿಲ್ಲ. ಅವರೆಲ್ಲ ಶಾಸಕರಾದ ತಿಂಗಳೊಪ್ಪತ್ತಿನಲ್ಲೇ ಅವರವರ ಕ್ಷೇತ್ರದಲ್ಲಿ “ಚೆಕ್” ಇಟ್ಟು ಬಿಟ್ಟಿದ್ದಾನೆ ಮಾಣಿ!!

ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಕೆನರಾದ ಕೇಸರಿ ಶಾಸಕರಿಗೆಲ್ಲ ಮಂತ್ರಿಗಿರಿ ಕನಸು ಪ್ರತಿ ರಾತ್ರಿಯೂ ಬಿಡದೇ ಬೀಳತೊಡಗಿತ್ತು. ಆದರೆ ಇವರ್ಯಾರೂ ಮಂತ್ರಿಯಾಗೋದು ಅನಂತ್ಮಾಣಿಗೆ ಇಷ್ಟವಿರಲಿಲ್ಲ. ಕಾಗೇರಿ ವಿಧಾನಸಭಾ ಅಧ್ಯಕ್ಷನಾದದ್ದು ರೂಪಾಲಿ, ದಿನಕರ್ ಮತ್ತು ಸುನೀಲ್‍ನಲ್ಲಿ ಮಂತ್ರಿಗಿರಿ ಆಸೆಯ ಹುಚ್ಚೆಬ್ಬಿಸಿತ್ತು. ಇವರಲ್ಲಿ ಒಂದು ಗುಲಗಂಜಿಯಷ್ಟು ಜಾಸ್ತಿಯೇ ಕಸರತ್ತು ಮಾಡಿದ್ದು ಮಾತ್ರ ರೂಪಾಲಿಯಮ್ಮನೇ. ಅದಕ್ಕೆ ಕಾರಣವೂ ಇತ್ತು. ಆಕೆಗೆ ಸಿಎಂ ಯಡ್ಡಿ ಜತೆ ವಿಶೇಷವಾದ ನಂಟಿತ್ತು. ಎರಡನೆಯದು ಮಹಿಳಾ ಕೋಟಾದಲ್ಲಿ ಸಚಿವೆಯಾಗುವ ಅವಕಾಶವಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಯಡ್ಡಿಗೆ ಕರಾವಳಿಯ ಬಿಜೆಪಿ ಶಾಸಕರ ಪೈಕಿ ರೂಪಾಲಿ ಎಂದರೇನೇ ನಂಬಿಕೆ-ಕಕ್ಕುಲಾತಿ ವಿಪರೀತ! ಆಕೆ ತನ್ನ ನಿಗೂಢ ಸಂಪತ್ತನ್ನು ರಾಜಕಾರಣಕ್ಕಾಗಿ ಹರಿಸುವ ದಾಢಸಿತನಕ್ಕೆ ಯಡ್ಡಿ ಮಾರುಹೋಗಿದ್ದಾರೆ. ಹಾಗಾಗಿ ರೂಪಾಲಿ ಮಂತ್ರಿಯಾಗ್ತಾರೆಂಬ ದಟ್ಟ ಭಾವನೆ ಬಿಜೆಪಿಗರಿಗಷ್ಟೇ ಅಲ್ಲ, ಜಿಲ್ಲೆಯಲ್ಲೂ ಮನೆಮಾಡಿತ್ತು.

ಇದು ಸಹಜವಾಗೇ ಜಿಲ್ಲೆಯ ಕಮಲ ಪಾಳಯದ ಪುರುಷೋತ್ತಮ ಶಾಸಕರಲ್ಲಿ ಅಸೂಯೆಗೆ ಕಾರಣವಾಯಿತ್ತು. ಅಕತ್ಮಾತ್ ರೂಪಾಲಿ ಮಂತ್ರಿಣಿಯಾದರೆ ಚಾಲಾಕಿತನದ ಈ ಹೆಣ್ಣು, ತಮ್ಮನ್ನು ನಗಣ್ಯ ಮಾಡಿಬಿಡುತ್ತಾಳೆಂಬ ಆತಂಕ “ಗಂಡು” ಶಾಸಕರ ಕಾಡತೊಡಗಿತ್ತು. ಚಿತ್ರದುರ್ಗದಲ್ಲಿ ಬಿಸ್ನೆಸ್ ಮಾಡುತ್ತಾ ಕಾರವಾರ – ಅಂಕೋಲದಲ್ಲಿ ರಾಜಕಾರಣ ನಡೆಸುವ ರೂಪಾಲಿಯ ಕೊಪ್ಪರಿಗೆ ಕಾಸು, ಗ್ಲಾಮರ್, ಸಿಎಂ ಮತ್ತಿತರ ಬಿಜೆಪಿ ಘಟಾನುಘಟಿಗಳೊಂದಿಗಿನ ನಿಕಟಸಂಪರ್ಕ….. ಹೀಗೆ ಮೂರು ಶಾಸಕರಿಗೆ ಗಂಡಾಂತರಕಾರಿಯೇ ಆಗಿತ್ತು. ಕಾಗೇರಿ ತನ್ನ ಚೆಡ್ಡಿ ಆಶ್ರಯದಾತರ ಬಲ ಮತ್ತು ಹಿರಿತನ ಹಾಗೂ ಸ್ಪೀಕರ್ ಆಗಿರುವುದರಿಂದ ರೂಪಾಲಿ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿದ್ದರೂ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ ಮತ್ತವರ ಬಾಸ್ ಅನಂತ್ಮಾಣಿ ಆತಂಕಗೊಂಡಿದ್ದರು.

ಉತ್ತರ ಕನ್ನಡದ ಮಂತ್ರಿ ಕೋಟಾವನ್ನು ಅನರ್ಹ ಕಮ್ ಅಂತರ್‍ಪಿಶಾಚಿ ಶಾಸಕ ಶಿವರಾಮ ಹೆಬ್ಬಾರ್‍ಗೆ ಮೀಸಲಿಡಲಾಗಿದೆ. ಆದರೆ ಆತ ವನವಾಸ ಮುಗಿಸಿ ಬರುವತನಕ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಯೋಜನೆ ರೂಪಾಲಿ, ಸುನೀಲ್ ಮತ್ತು ದಿನಕರ್‍ಗೆ ಇತ್ತು. ಹೆಬ್ಬಾರ್‍ನನ್ನು ರಹಸ್ಯವಾಗಿ ಭೇಟಿಯಾಗಿದ್ದ ಮೂವರು ತಮ್ಮ ಹೆಸರು ರೆಕಮೆಂಡ್ ಮಾಡುವಂತೆ ಬೇಡಿಕೊಂಡಿದ್ದರು. ಅಂತಿಮವಾಗಿ ತಾವು ಮಂತ್ರಿಯಾಗದಿದ್ದರೂ ಪರವಾಗಿಲ್ಲ ಆದರೆ ರೂಪಾಲಿ ಮಾತ್ರ ಯಾವ ಕಾರಣಕ್ಕೂ ಮಂತ್ರಿಗಿರಿಗೆ ಹಕ್ಕುದಾರಿಣಿ ಆಗಬಾರದೆಂಬ ಹಠಕ್ಕೆ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ ಮತ್ತು ಹೆಬ್ಬಾರ್ ಬಿದ್ದಿದ್ದರು. ಗುರು ಅನಂತ್ಮಾಣಿ ಮೂಲಕವೂ ರೂಪಾಲಿಗೆ ಅಡ್ಡಗಾಲು ಹಾಕಿಸಿದ್ದರು. ಈ ದ್ವೇಷಾಸೂಯೆ ವಿವಿಧ ರೂಪಾತಾಳುತ್ತ ಈಗ ಜಿಲ್ಲಾ ಬಿಜೆಪಿಯನ್ನು ಮನೆಯೊಂದು ಮೂರು ಬಾಗಿಲು ಮಾಡಿಬಿಟ್ಟಿದೆ!

ಈ ನಡುವೆ ಜಿಲ್ಲೆಯ ಹಿಂದೂತ್ವ ರಾಜಕಾರಣದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವ ಎದುರಾಳಿ ಶಾಸಕರ ವರ್ಚಸ್ಸು ಕುಗ್ಗಿಸುವ ಹಿಕಮತ್ತಿನ ಕಾರ್ಯಾಚರಣೆ ಈ ಮೂರು ಶಾಸಕರು ನಡೆಸಿದ್ದರು. ಪರೇಶ್‍ನ ನಿಗೂಢ ಸಾವಿನ ನಂತರ ಜಿಲ್ಲೆಯಲ್ಲಿ ಭುಗಿಲೆದ್ದಿದ್ದಮತೀಯ ದಂಗೆಯಲ್ಲಿ ಭಾಗಿಯಾಗಿ ಕೋರ್ಟ್-ಕಚೇರಿ ಅಲೆಯುತ್ತಿದ್ದ ಆರೋಪಿಗಳ ಕೇಸನ್ನು ಸಂಪುಟ ಸಭೆಯಲ್ಲಿ ಸಿಎಂನಿಂದ ರದ್ದುಮಾಡಿಸುತ್ತೇವೆ ಎಂದು ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮತ್ತು ಕಾಗೇರಿ ಎಲ್ಲರೂ ವೀರಾವೇಷದ ಮಾತು ಆಡುತ್ತಲೇ ಇದ್ದರು. ಆದರೆ ಎಲ್ಲರಿಗಿಂತ ಮೊದಲು ರೂಪಾಲಿ ಸಿಎಂ ಸಂಧಿಸಿ ಪರೇಶ್ ಸಾವಿನ ನಂತರದ ದೊಂಬಿ ಪ್ರಕರಣ ರದ್ದು ಮಾಡುವಂತೆ ಮನವಿ ಕೊಟ್ಟ ಆ ಫೋಟೋ ಮಾಧ್ಯಮಗಳಿಗೆ ಕೊಟ್ಟು ದೊಡ್ಡ ಸುದ್ದಿಯಾಗಿ ಹೋದರು. ಇದು ಪುರುಷ ಶಾಸಕರ ಬೆಚ್ಚಿಬೀಳಿಸಿತು.

ಕೇಸು ರದ್ದತಿಯ ಕ್ರೆಡಿಟ್ ರೂಪಾಲಿ ತಾನೊಬ್ಬಳೇ ಹೊಡೆದುಕೊಳ್ಳಲು ಹವಣಿಸುತ್ತಿರುವುದು ಇವರೆಲ್ಲರ ಕಣ್ಣು ಕೆಂಪಾಗಿಸಿತು. ಆಕೆಗೆ ಪಾಠ ಕಲಿಸಲು ಸ್ಕೆಚ್ ಹಾಕತೊಡಗಿದರು. ಅಷ್ಟೊತ್ತಿಗೆ ಸಿಎಂ ಕೇಸ್ ರದ್ದು ಮಾಡಿಯಾಗಿತ್ತು. ರೂಪಾಲಿ ನಾಯ್ಕ ಪ್ರಯತ್ನದಿಂದಲೇ ಹಿಂದೂ ಕಾರ್ಯಕರ್ತರು ಬಚಾವಾದರೆಂಬ ವ್ಯವಸ್ಥಿತ ಪ್ರಚಾರವೂ ಹಬ್ಬಿತು. ಅಲ್ಲಿಗೆ ರೂಪಾಲಿ ಪ್ರಭಾವ ವೃದ್ಧಿಸಿದರೆ, ಪುರುಷ ಶಾಸಕರ ಪುಂಗಿ ಬಂದ್ ಆಯಿತು!! ಈಗ ನಿಗಮ ಮಂಡಳಿಗಾಗಿ ಮೂವರಲ್ಲಿ ಮೇಲಾಟ ನಡೆದಿದೆ. ಮೊದಲಿನ ಬಾಂಧವ್ಯ ಈಗ ಮೂವರಲ್ಲಿ ಉಳಿದಿಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರು ಅಡ್ಡ ಮುಖ ಹಾಕುತ್ತಿದ್ದಾರೆ.

ಅಂತಿಮವಾಗಿ ಪುರುಷ ಶಾಸಕರು ತಮಗೆ ಅವಕಾಶ ಸಿಗದಿದ್ದರೂ ಸರಿ, ರೂಪಾಲಿಗೆ ಭಾಗ್ಯ ಬರಬಾರದು ಎಂಬ ಪ್ರಯತ್ನದಲ್ಲಿದ್ದಾರೆ. ಆದರೆ ಚಾಲೂ ಪುಢಾರಿಣಿ ಎಂದೇ ಕಾರವಾರದಲ್ಲಿ ಗುರುತಿಸಿಕೊಂಡಿರುವ ರೂಪಾಲಿ ನಾಯ್ಕ ಎದುರಾಳಿಗಳ ಬೇಸ್ತು ಬೀಳಿಸಲು ಏನೇನು ಸಾಧ್ಯವೋ ಅದೆಲ್ಲ ಮಾಡುತ್ತಿದ್ದಾರೆ! ಈ ಅಧಿಕಾರದಾಹದ ಬಡಿದಾಟಕ್ಕೆ ಮುಂದಿನ ದಿನಗಳಲ್ಲಿ ಜಿಲ್ಲಾ ಬಿಜೆಪಿ ಕುಸಿದು ಬೀಳಲಿದೆ ಎಂದು ಆ ಪಕ್ಷದ ನಿಷ್ಠಾವಂತ ಕಾರ್ಯಕರ್ತರೇ ಮಾತಾಡಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...