Homeಕರ್ನಾಟಕಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

ಕೆನರಾ ಬಿಜೆಪಿ ಭೂಪರಿಗೆ ಈಗ ರೂಪಾಲಿಯಮ್ಮನೇ ದುಃಸ್ವಪ್ನ!

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡದ ನಾಲ್ಕು ಬಿಜೆಪಿ ಎಮ್ಮೆಲ್ಲೆಗಳ ನಡುವೆ ಶುರುವಾದ ಹೊಟ್ಟೆಕಿಚ್ಚಿನ ಕಿತ್ತಾಟ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಶಿರಸಿಯ ಸೀನಿಯರ್ ಮೋಸ್ಟ್ ಕಾಗೇರಿ ತನಗರಿವಿಲ್ಲದೆ ಒಲ್ಲದ ಸ್ಪೀಕರ್ ಗದ್ದುಗೆಯೇರಿ ಕುಂತಿದ್ದಾರೆ. ಘಟ್ಟದ ಮೇಲಿನ ಕಾಗೇರಿಗೆ ಕರಾವಳಿ ಕಡೆಯ ಮೂವರು ಎಳಸು ಎಮ್ಮೆಲ್ಲೆಗಳು ಸ್ವಪಕ್ಷದಲ್ಲಿ ಪ್ರತಿಸ್ಪರ್ಧಿಗಳಾಗಲು ಸಾಧ್ಯವೇ ಇಲ್ಲ. ಆತನಿಗೇನಿದ್ದರೂ ಸದಾ ಮಗ್ಗಲು ಮುಳ್ಳಾಗಿ ಕಾಡುವ ಎಂಪಿ ಅನಂತ್ಮಾಣಿಯೇ ಆತಂಕಕಾರಿ! ಮಜಾ ಎಂದರೆ, ಕೋಮು ರಾಜಕಾರಣದ ವರಸೆ ಪ್ರಯೋಗಿಸುತ್ತ ಅದಕ್ಕೆ ಹುಸಿ ಅಭಿವೃದ್ಧಿಯ ಮುಸುಕು ತೊಡಿಸುವ ಬೋಂಗು ಬಿಡುವ ಕಾರವಾರದ ರೂಪಾಲಿ ನಾಯ್ಕ, ಕುಮಟೆಯ ದಿನಕರ ಶೆಟ್ಟಿ ಮತ್ತು ಭಟ್ಕಳದ ಸುನಿಲ್ ನಾಯ್ಕ್ ಮೂರು ಮೂಲೆಯಲ್ಲಿ ನಿಂತು ಪರಸ್ಪರ ಕಾಲೆಳೆದಾಡುತ್ತಿದ್ದಾರೆ. ಈ ಮೂವರೂ ಅನಂತ್ಮಾಣಿಯ ಚೇಲಾಗಳೇ. ಆದರೆ ಮಾಣಿ ಇವರನ್ನೀಗ ಪೂರ್ತಿ ನಂಬುತ್ತಿಲ್ಲ. ಅವರೆಲ್ಲ ಶಾಸಕರಾದ ತಿಂಗಳೊಪ್ಪತ್ತಿನಲ್ಲೇ ಅವರವರ ಕ್ಷೇತ್ರದಲ್ಲಿ “ಚೆಕ್” ಇಟ್ಟು ಬಿಟ್ಟಿದ್ದಾನೆ ಮಾಣಿ!!

ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಕೆನರಾದ ಕೇಸರಿ ಶಾಸಕರಿಗೆಲ್ಲ ಮಂತ್ರಿಗಿರಿ ಕನಸು ಪ್ರತಿ ರಾತ್ರಿಯೂ ಬಿಡದೇ ಬೀಳತೊಡಗಿತ್ತು. ಆದರೆ ಇವರ್ಯಾರೂ ಮಂತ್ರಿಯಾಗೋದು ಅನಂತ್ಮಾಣಿಗೆ ಇಷ್ಟವಿರಲಿಲ್ಲ. ಕಾಗೇರಿ ವಿಧಾನಸಭಾ ಅಧ್ಯಕ್ಷನಾದದ್ದು ರೂಪಾಲಿ, ದಿನಕರ್ ಮತ್ತು ಸುನೀಲ್‍ನಲ್ಲಿ ಮಂತ್ರಿಗಿರಿ ಆಸೆಯ ಹುಚ್ಚೆಬ್ಬಿಸಿತ್ತು. ಇವರಲ್ಲಿ ಒಂದು ಗುಲಗಂಜಿಯಷ್ಟು ಜಾಸ್ತಿಯೇ ಕಸರತ್ತು ಮಾಡಿದ್ದು ಮಾತ್ರ ರೂಪಾಲಿಯಮ್ಮನೇ. ಅದಕ್ಕೆ ಕಾರಣವೂ ಇತ್ತು. ಆಕೆಗೆ ಸಿಎಂ ಯಡ್ಡಿ ಜತೆ ವಿಶೇಷವಾದ ನಂಟಿತ್ತು. ಎರಡನೆಯದು ಮಹಿಳಾ ಕೋಟಾದಲ್ಲಿ ಸಚಿವೆಯಾಗುವ ಅವಕಾಶವಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ ಯಡ್ಡಿಗೆ ಕರಾವಳಿಯ ಬಿಜೆಪಿ ಶಾಸಕರ ಪೈಕಿ ರೂಪಾಲಿ ಎಂದರೇನೇ ನಂಬಿಕೆ-ಕಕ್ಕುಲಾತಿ ವಿಪರೀತ! ಆಕೆ ತನ್ನ ನಿಗೂಢ ಸಂಪತ್ತನ್ನು ರಾಜಕಾರಣಕ್ಕಾಗಿ ಹರಿಸುವ ದಾಢಸಿತನಕ್ಕೆ ಯಡ್ಡಿ ಮಾರುಹೋಗಿದ್ದಾರೆ. ಹಾಗಾಗಿ ರೂಪಾಲಿ ಮಂತ್ರಿಯಾಗ್ತಾರೆಂಬ ದಟ್ಟ ಭಾವನೆ ಬಿಜೆಪಿಗರಿಗಷ್ಟೇ ಅಲ್ಲ, ಜಿಲ್ಲೆಯಲ್ಲೂ ಮನೆಮಾಡಿತ್ತು.

ಇದು ಸಹಜವಾಗೇ ಜಿಲ್ಲೆಯ ಕಮಲ ಪಾಳಯದ ಪುರುಷೋತ್ತಮ ಶಾಸಕರಲ್ಲಿ ಅಸೂಯೆಗೆ ಕಾರಣವಾಯಿತ್ತು. ಅಕತ್ಮಾತ್ ರೂಪಾಲಿ ಮಂತ್ರಿಣಿಯಾದರೆ ಚಾಲಾಕಿತನದ ಈ ಹೆಣ್ಣು, ತಮ್ಮನ್ನು ನಗಣ್ಯ ಮಾಡಿಬಿಡುತ್ತಾಳೆಂಬ ಆತಂಕ “ಗಂಡು” ಶಾಸಕರ ಕಾಡತೊಡಗಿತ್ತು. ಚಿತ್ರದುರ್ಗದಲ್ಲಿ ಬಿಸ್ನೆಸ್ ಮಾಡುತ್ತಾ ಕಾರವಾರ – ಅಂಕೋಲದಲ್ಲಿ ರಾಜಕಾರಣ ನಡೆಸುವ ರೂಪಾಲಿಯ ಕೊಪ್ಪರಿಗೆ ಕಾಸು, ಗ್ಲಾಮರ್, ಸಿಎಂ ಮತ್ತಿತರ ಬಿಜೆಪಿ ಘಟಾನುಘಟಿಗಳೊಂದಿಗಿನ ನಿಕಟಸಂಪರ್ಕ….. ಹೀಗೆ ಮೂರು ಶಾಸಕರಿಗೆ ಗಂಡಾಂತರಕಾರಿಯೇ ಆಗಿತ್ತು. ಕಾಗೇರಿ ತನ್ನ ಚೆಡ್ಡಿ ಆಶ್ರಯದಾತರ ಬಲ ಮತ್ತು ಹಿರಿತನ ಹಾಗೂ ಸ್ಪೀಕರ್ ಆಗಿರುವುದರಿಂದ ರೂಪಾಲಿ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿದ್ದರೂ ದಿನಕರ ಶೆಟ್ಟಿ ಮತ್ತು ಸುನೀಲ್ ನಾಯ್ಕ ಮತ್ತವರ ಬಾಸ್ ಅನಂತ್ಮಾಣಿ ಆತಂಕಗೊಂಡಿದ್ದರು.

ಉತ್ತರ ಕನ್ನಡದ ಮಂತ್ರಿ ಕೋಟಾವನ್ನು ಅನರ್ಹ ಕಮ್ ಅಂತರ್‍ಪಿಶಾಚಿ ಶಾಸಕ ಶಿವರಾಮ ಹೆಬ್ಬಾರ್‍ಗೆ ಮೀಸಲಿಡಲಾಗಿದೆ. ಆದರೆ ಆತ ವನವಾಸ ಮುಗಿಸಿ ಬರುವತನಕ ಆತನ ಪಾದುಕೆ ಇಟ್ಟುಕೊಂಡು ಮಂತ್ರಿಗಿರಿ ಮಾಡುವ ಯೋಜನೆ ರೂಪಾಲಿ, ಸುನೀಲ್ ಮತ್ತು ದಿನಕರ್‍ಗೆ ಇತ್ತು. ಹೆಬ್ಬಾರ್‍ನನ್ನು ರಹಸ್ಯವಾಗಿ ಭೇಟಿಯಾಗಿದ್ದ ಮೂವರು ತಮ್ಮ ಹೆಸರು ರೆಕಮೆಂಡ್ ಮಾಡುವಂತೆ ಬೇಡಿಕೊಂಡಿದ್ದರು. ಅಂತಿಮವಾಗಿ ತಾವು ಮಂತ್ರಿಯಾಗದಿದ್ದರೂ ಪರವಾಗಿಲ್ಲ ಆದರೆ ರೂಪಾಲಿ ಮಾತ್ರ ಯಾವ ಕಾರಣಕ್ಕೂ ಮಂತ್ರಿಗಿರಿಗೆ ಹಕ್ಕುದಾರಿಣಿ ಆಗಬಾರದೆಂಬ ಹಠಕ್ಕೆ ದಿನಕರ್ ಶೆಟ್ಟಿ, ಸುನೀಲ್ ನಾಯ್ಕ ಮತ್ತು ಹೆಬ್ಬಾರ್ ಬಿದ್ದಿದ್ದರು. ಗುರು ಅನಂತ್ಮಾಣಿ ಮೂಲಕವೂ ರೂಪಾಲಿಗೆ ಅಡ್ಡಗಾಲು ಹಾಕಿಸಿದ್ದರು. ಈ ದ್ವೇಷಾಸೂಯೆ ವಿವಿಧ ರೂಪಾತಾಳುತ್ತ ಈಗ ಜಿಲ್ಲಾ ಬಿಜೆಪಿಯನ್ನು ಮನೆಯೊಂದು ಮೂರು ಬಾಗಿಲು ಮಾಡಿಬಿಟ್ಟಿದೆ!

ಈ ನಡುವೆ ಜಿಲ್ಲೆಯ ಹಿಂದೂತ್ವ ರಾಜಕಾರಣದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವ ಎದುರಾಳಿ ಶಾಸಕರ ವರ್ಚಸ್ಸು ಕುಗ್ಗಿಸುವ ಹಿಕಮತ್ತಿನ ಕಾರ್ಯಾಚರಣೆ ಈ ಮೂರು ಶಾಸಕರು ನಡೆಸಿದ್ದರು. ಪರೇಶ್‍ನ ನಿಗೂಢ ಸಾವಿನ ನಂತರ ಜಿಲ್ಲೆಯಲ್ಲಿ ಭುಗಿಲೆದ್ದಿದ್ದಮತೀಯ ದಂಗೆಯಲ್ಲಿ ಭಾಗಿಯಾಗಿ ಕೋರ್ಟ್-ಕಚೇರಿ ಅಲೆಯುತ್ತಿದ್ದ ಆರೋಪಿಗಳ ಕೇಸನ್ನು ಸಂಪುಟ ಸಭೆಯಲ್ಲಿ ಸಿಎಂನಿಂದ ರದ್ದುಮಾಡಿಸುತ್ತೇವೆ ಎಂದು ದಿನಕರ ಶೆಟ್ಟಿ, ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಮತ್ತು ಕಾಗೇರಿ ಎಲ್ಲರೂ ವೀರಾವೇಷದ ಮಾತು ಆಡುತ್ತಲೇ ಇದ್ದರು. ಆದರೆ ಎಲ್ಲರಿಗಿಂತ ಮೊದಲು ರೂಪಾಲಿ ಸಿಎಂ ಸಂಧಿಸಿ ಪರೇಶ್ ಸಾವಿನ ನಂತರದ ದೊಂಬಿ ಪ್ರಕರಣ ರದ್ದು ಮಾಡುವಂತೆ ಮನವಿ ಕೊಟ್ಟ ಆ ಫೋಟೋ ಮಾಧ್ಯಮಗಳಿಗೆ ಕೊಟ್ಟು ದೊಡ್ಡ ಸುದ್ದಿಯಾಗಿ ಹೋದರು. ಇದು ಪುರುಷ ಶಾಸಕರ ಬೆಚ್ಚಿಬೀಳಿಸಿತು.

ಕೇಸು ರದ್ದತಿಯ ಕ್ರೆಡಿಟ್ ರೂಪಾಲಿ ತಾನೊಬ್ಬಳೇ ಹೊಡೆದುಕೊಳ್ಳಲು ಹವಣಿಸುತ್ತಿರುವುದು ಇವರೆಲ್ಲರ ಕಣ್ಣು ಕೆಂಪಾಗಿಸಿತು. ಆಕೆಗೆ ಪಾಠ ಕಲಿಸಲು ಸ್ಕೆಚ್ ಹಾಕತೊಡಗಿದರು. ಅಷ್ಟೊತ್ತಿಗೆ ಸಿಎಂ ಕೇಸ್ ರದ್ದು ಮಾಡಿಯಾಗಿತ್ತು. ರೂಪಾಲಿ ನಾಯ್ಕ ಪ್ರಯತ್ನದಿಂದಲೇ ಹಿಂದೂ ಕಾರ್ಯಕರ್ತರು ಬಚಾವಾದರೆಂಬ ವ್ಯವಸ್ಥಿತ ಪ್ರಚಾರವೂ ಹಬ್ಬಿತು. ಅಲ್ಲಿಗೆ ರೂಪಾಲಿ ಪ್ರಭಾವ ವೃದ್ಧಿಸಿದರೆ, ಪುರುಷ ಶಾಸಕರ ಪುಂಗಿ ಬಂದ್ ಆಯಿತು!! ಈಗ ನಿಗಮ ಮಂಡಳಿಗಾಗಿ ಮೂವರಲ್ಲಿ ಮೇಲಾಟ ನಡೆದಿದೆ. ಮೊದಲಿನ ಬಾಂಧವ್ಯ ಈಗ ಮೂವರಲ್ಲಿ ಉಳಿದಿಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರು ಅಡ್ಡ ಮುಖ ಹಾಕುತ್ತಿದ್ದಾರೆ.

ಅಂತಿಮವಾಗಿ ಪುರುಷ ಶಾಸಕರು ತಮಗೆ ಅವಕಾಶ ಸಿಗದಿದ್ದರೂ ಸರಿ, ರೂಪಾಲಿಗೆ ಭಾಗ್ಯ ಬರಬಾರದು ಎಂಬ ಪ್ರಯತ್ನದಲ್ಲಿದ್ದಾರೆ. ಆದರೆ ಚಾಲೂ ಪುಢಾರಿಣಿ ಎಂದೇ ಕಾರವಾರದಲ್ಲಿ ಗುರುತಿಸಿಕೊಂಡಿರುವ ರೂಪಾಲಿ ನಾಯ್ಕ ಎದುರಾಳಿಗಳ ಬೇಸ್ತು ಬೀಳಿಸಲು ಏನೇನು ಸಾಧ್ಯವೋ ಅದೆಲ್ಲ ಮಾಡುತ್ತಿದ್ದಾರೆ! ಈ ಅಧಿಕಾರದಾಹದ ಬಡಿದಾಟಕ್ಕೆ ಮುಂದಿನ ದಿನಗಳಲ್ಲಿ ಜಿಲ್ಲಾ ಬಿಜೆಪಿ ಕುಸಿದು ಬೀಳಲಿದೆ ಎಂದು ಆ ಪಕ್ಷದ ನಿಷ್ಠಾವಂತ ಕಾರ್ಯಕರ್ತರೇ ಮಾತಾಡಿಕೊಳ್ಳುವಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...