Homeಮುಖಪುಟಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

- Advertisement -
- Advertisement -

ರಾಜಸ್ಥಾನ ಸರ್ಕಾರದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿ ಖರೀದಿಸಲಾದ 1,500 ಕ್ಕೂ ಹೆಚ್ಚು ಹೊಚ್ಚ ಹೊಸ ಸ್ಕೂಟರ್‌ಗಳು ಬಳಕೆಯಾಗದೆ ಕ್ರಮೇಣ ಗುಜಿರಿ ವಸ್ತುಗಳಾಗಿ ಬದಲಾಗುತ್ತಿವೆ ಎಂದು ವರದಿಯಾಗದೆ. 2020 ರಲ್ಲಿ ಪ್ರಾರಂಭಿಸಲಾದ ಕಾಳಿ ಬಾಯಿ ಭೀಲ್ ಸ್ಕೂಟಿ ಯೋಜನೆಯಡಿಯಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡಲು ಬನ್ಸ್ವಾರಾದ ಎರಡು ಕಾಲೇಜುಗಳಲ್ಲಿ ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ಹುಡುಗಿಯರಿಗೆ ಸ್ಕೂಟರ್‌ಗಳನ್ನು ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರ್ಷಿಕವಾಗಿ ₹2.5 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಕುಟುಂಬಗಳ ಮತ್ತು ರಾಜ್ಯ ಬೋರ್ಡ್ ಪರೀಕ್ಷೆಗಳಲ್ಲಿ 65% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಾಗೂ 10 ನೇ ಅಥವಾ 12 ನೇ ತರಗತಿಯ CBSE ಪರೀಕ್ಷೆಗಳಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹುಡುಗಿಯರು ಈ ಯೋಜನೆಯ ಸ್ಕೂಟರ್ ಪಡೆಯುವ ಅರ್ಹತೆ ಹೊಂದಿದವರಾಗಿದ್ದಾರೆ. ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ

ಇದನ್ನೂ ಓದಿ: ತಮಿಳುನಾಡು | ತಾಂತ್ರಿಕ ಸಮಸ್ಯೆ ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ : ಪ್ರಯಾಣಿಕರು ಸೇಫ್

ಅದಾಗ್ಯೂ, 2023ರಿಂದ ವಿದ್ಯಾಮಂದಿರ ಕಾಲೇಜು ಹಾಗೂ ಹರದೇವ್‌ ಜೋಶಿ ಸರಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ₹80,000 ಬೆಲೆಬಾಳುವ ಒಟ್ಟು ₹12 ಕೋಟಿ ವೆಚ್ಚದ ಸ್ಕೂಟರ್‌ಗಳು ಬಳಕೆಯಾಗದೆ ಕೊಳೆಯುತ್ತಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಗೆದ್ದ ನಂತರ ಸರ್ಕಾರ ಬದಲಾದ ಕಾರಣ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು NDTV ಗೆ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳಿಗೆ ಸ್ಕೂಟರ್‌ಗಳನ್ನು ನಿಯೋಜಿಸಿದ ನಂತರ, ಹಣಕಾಸು ಇಲಾಖೆಯಿಂದ ಅವರಿಗೆ QR ಕೋಡ್ ಅನ್ನು ರಚಿಸಲಾಗುತ್ತದೆ, ಆದಾಗ್ಯೂ, 1,500 ಸ್ಕೂಟರ್‌ಗಳಿಗೆ ಈ ಪ್ರಕ್ರಿಯೆಯನ್ನು ಇನ್ನೂ ಪ್ರಾರಂಭಿಸಲಾಗಿಲ್ಲ. 

ಇದನ್ನೂಓದಿ: ಬೆದರಿಕೆ ಆರೋಪ : ಹೆಚ್‌ಡಿಕೆ ವಿರುದ್ದ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್

ಹರದೇವ್ ಜೋಶಿ ಸರ್ಕಾರಿ ಬಾಲಕಿಯರ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರಳಾ ಪಾಂಡ್ಯ ಎನ್‌ಡಿಟಿವಿಗೆ ಮಾತನಾಡಿ, “ಕಲ್ಯಾಣ ಯೋಜನೆಯಡಿ ಸ್ಕೂಟಿಗಳನ್ನು ವಿತರಿಸುವ ನೋಡಲ್ ಕಾಲೇಜು ನಮ್ಮದಾಗಿದೆ. ಮಾದರಿ ನೀತಿ ಸಂಹಿತೆಯಿಂದಾಗಿ ಅವುಗಳನ್ನು ವಿತರಿಸಲಾಗಿಲ್ಲ ಮತ್ತು ಈಗ ಹಣಕಾಸು ಇಲಾಖೆಯಿಂದ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿನ ಈ ವಿಳಂಬಕ್ಕೆ ಪ್ರತಿಪಕ್ಷಗಳು ರಾಜಸ್ಥಾನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತ್ ಆದಿವಾಸಿ ಪಕ್ಷದ ಬನ್ಸ್ವಾರಾ ಸಂಸದ ರಾಜ್ ಕುಮಾರ್ ರೋಟ್, “ಇದು ಈ ಸರ್ಕಾರದ ಕ್ರಿಮಿನಲ್ ನಿರ್ಲಕ್ಷ್ಯವಾಗಿದೆ. ಸ್ಕೂಟರ್‌ಗಳು ತುಕ್ಕು ಹಿಡಿಯುತ್ತಿದ್ದು, ಫಲಾನುಭವಿಗಳಿಗೆ ತಲುಪುವ ಬದಲು ಗುಜಿರಿಯಾಗುತ್ತಿವೆ. ಈ ಪರಿಸ್ಥಿತಿಯ ಬಗ್ಗೆ ಸರ್ಕಾರ ನಿಗಾ ವಹಿಸದಿರುವುದು ತುಂಬಾ ದುಃಖಕರವಾಗಿದೆ” ಎಂದು ಹೇಳಿದ್ದಾರೆ.

ರಾಜಸ್ಥಾನದ ಬುಡಕಟ್ಟು ಕಲ್ಯಾಣ ಸಚಿವ ಬಾಬು ಲಾಲ್ ಖರಾಡಿ ಅವರು ಸ್ಕೂಟರ್‌ಗಳನ್ನು ಒಂದು ವಾರದೊಳಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದಾರೆಯಾದರೂ, ಅತಿಯಾದ ವಿಳಂಬಕ್ಕೆ ಯಾವುದೇ ಕಾರಣಗಳನ್ನು ನೀಡಿಲ್ಲ. ಕರ್ತವ್ಯಲೋಪ ಮತ್ತು ಸರ್ಕಾರಿ ಆಸ್ತಿಗಳ ಬಗ್ಗೆ ನಿರ್ಲಕ್ಷ್ಯವಹಿಸಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾರಾಡಿ ಭರವಸೆ ನೀಡಿದ್ದಾರೆ.

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

ವಿಡಿಯೊ ನೋಡಿ: ಹಾಸನ: ದಲಿತ ಕಾರ್ಮಿಕನ ಮೇಲೆ ವಿನಾಕಾರಣ ಮಾರಣಾಂತಿಕ ಹಲ್ಲೆ ನಡೆಸಿದ ಪೊಲೀಸರು- ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...