Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...