Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...