Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...