Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...