Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...