Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...