Homeಮುಖಪುಟವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ...

ವೈಷ್ಣೋದೇವಿ ವೈದ್ಯಕೀಯ ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲು ಆಗ್ರಹ : ಬಿಜೆಪಿ ಮನವಿ ಸ್ವೀಕರಿಸಿದ ಲೆಫ್ಟಿನೆಂಟ್ ಗವರ್ನರ್‌ ನಡೆಗೆ ತೀವ್ರ ಆಕ್ರೋಶ

- Advertisement -
- Advertisement -

ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನ ಪ್ರವೇಶ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮನೋಜ್ ಸಿನ್ಹಾ ಸ್ವೀಕರಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಪರೆನ್ಸ್ (ಎನ್‌ಸಿ) ಈ ಮನವಿ ಪತ್ರವನ್ನು ‘ವಿಭಜಕ ಮತ್ತು ಕೋಮುವಾದಿತನ’ ಎಂದು ಬಣ್ಣಿಸಿದರೆ, ವಿರೋಧ ಪಕ್ಷವಾದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಬಿಜೆಪಿಯ ನಡೆ ‘ನಾಚಿಕೆಗೇಡು’ ಎಂದು ಹೇಳಿದೆ.

ಶನಿವಾರ (ನವೆಂಬರ್ 22) ಬಿಜೆಪಿ, ಹಿಂದುತ್ವ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ಜೊತೆ ಸೇರಿ ವೈದ್ಯಕೀಯ ಕಾಲೇಜಿನ ಪ್ರವೇಶ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮತ್ತು ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಎಲ್ಲಾ ಸೀಟುಗಳನ್ನು ಹಿಂದೂ ವಿದ್ಯಾರ್ಥಿಗಳಿಗೆ ಮೀಸಲಿಡುವಂತೆ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ಮನವಿ ಮಾಡಿತ್ತು.

ಲೆಫ್ಟಿನೆಂಟ್ ಗವರ್ನರ್ ಶ್ರೀ ಮಾತಾ ವೈಷ್ಣೋದೇವಿ ವಿವಿಯನ್ನು ನಡೆಸುವ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯವು ಅಲ್ಪಸಂಖ್ಯಾತ ಸಂಸ್ಥೆಯಲ್ಲ. ಆದ್ದರಿಂದ, ವಿಶ್ವವಿದ್ಯಾಲಯದ ಪ್ರವೇಶಕ್ಕೆ ಧರ್ಮವು ಒಂದು ಅಂಶವಾಗಿರಲು ಸಾಧ್ಯವಿಲ್ಲ ಎಂದು ವರದಿಗಳು ಹೇಳಿವೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಗಳ ಪ್ರಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಾಲೇಜಿನ 50 ಸೀಟುಗಳಲ್ಲಿ ಶೇಕಡ 85 ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಿಗೆ ಮೀಸಲಾಗಿವೆ. ಉಳಿದ ಶೇಕಡ 15 ರಾಷ್ಟ್ರೀಯ ಮಟ್ಟದಲ್ಲಿ ಮುಕ್ತವಾಗಿವೆ.

ಜಮ್ಮು ಕಾಶ್ಮೀರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಬಿಜೆಪಿಯ ಸುನಿಲ್ ಶರ್ಮಾ ಶನಿವಾರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರಿಗೆ ವಿಶ್ವವಿದ್ಯಾಲಯವು “ಒಂದು ಧಾರ್ಮಿಕ ಸಂಸ್ಥೆ ಮತ್ತು ಜನರು ಅದರೊಂದಿಗೆ ನಂಬಿಕೆಗಳನ್ನು ಹೊಂದಿದ್ದಾರೆ” ಎಂದು ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಿನ್ಹಾ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಬಿಜೆಪಿಯು ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ಕೋರಿಲ್ಲ, ಬದಲಿಗೆ ‘ಒಂದು ನಿರ್ದಿಷ್ಟ ಸಮುದಾಯದ ಬಹುಪಾಲು ವಿದ್ಯಾರ್ಥಿಗಳ ಪ್ರವೇಶಕ್ಕೆ’ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಪ್ರತಿಯೊಬ್ಬ ಭಕ್ತರು ತಮ್ಮ ನಂಬಿಕೆಯ ಪ್ರಚಾರವನ್ನು ನೋಡುವ ಬಯಕೆಯಿಂದ ಈ ಧಾರ್ಮಿಕ ಸಂಸ್ಥೆಗೆ ದೇಣಿಗೆ ನೀಡುತ್ತಾರೆ” ಎಂದು ಶರ್ಮಾ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಮಂಡಳಿ ಮತ್ತು ವಿಶ್ವವಿದ್ಯಾಲಯವು ನಂಬಿಕೆಯನ್ನು ಪರಿಗಣಿಸಿಲ್ಲ.

ಮೆಡಿಕಲ್ ಕಾಲೇಜಿಗೆ ಆಯ್ಕೆಯಾದ 50 ವಿದ್ಯಾರ್ಥಿಗಳಲ್ಲಿ 42 ಮಂದಿ ಮುಸ್ಲಿಮರು ಎಂದು ವರದಿಯಾದ ಬಳಿಕ, ಕಳೆದ ವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿ ವೈಷ್ಣೋದೇವಿ ದೇವಾಲಯದ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಪ್ರತಿಕೃತಿಯನ್ನು ಸುಟ್ಟುಹಾಕಿತ್ತು.

ಲೆಫ್ಟಿನೆಂಟ್ ಗವರ್ನರ್ ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿ ನಂತರ, ನ್ಯಾಷನಲ್ ಕಾನ್ಫರೆನ್ಸ್, ಬಿಜೆಪಿ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕವಾಗಿ ವಿಭಜಿಸುತ್ತಿದೆ ಮತ್ತು ಜಾತಿ-ಧರ್ಮಗಳ ಆಧಾರದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದೆ.

“ಆಸ್ಪತ್ರೆ, ಶಾಲೆ, ವಿಶ್ವವಿದ್ಯಾಲಯ ಮತ್ತು ವೈದ್ಯಕೀಯ ಕಾಲೇಜುಗಳು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಶುರು ಮಾಡಿದರೆ, ನಾವು ಯಾವ ತರಹದ ದೇಶವಾಗಿ ಮಾರ್ಪಡುತ್ತೇವೆ? ಬಹುಸಂಖ್ಯಾತರ ಒತ್ತಡಕ್ಕೆ ಮಣಿದು ಪ್ರತಿಭೆ ಮತ್ತು ಮೆರಿಟ್ ಅನ್ನು ಕಸದ ಬುಟ್ಟಿಗೆ ತಳ್ಳಬೇಕೇ?” ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ತನ್ವೀರ್ ಸಾದಿಕ್ ಪ್ರಶ್ನಿಸಿದ್ದಾರೆ.

“ದೇವಾಲಯದಿಂದ ಹಣಕಾಸು ನೆರವು ಪಡೆಯುವ ಸಂಸ್ಥೆಯು ‘ಧರ್ಮಾಧಾರಿತ’ವಾಗುವುದಿಲ್ಲ. ಭಕ್ತಿಯಿಂದ ನೀಡುವ ದೇಣಿಗೆಗಳನ್ನು ತಾರತಮ್ಯದ ಸಾಧನಗಳಾಗಿ ಪರಿವರ್ತಿಸಲು ಸಾಧ್ಯವಿಲ್ಲ” ಎಂದು ತನ್ವೀರ್ ಸಾದಿಕ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಮುಸ್ಲಿಮರ ಮೇಲಿನ ತಾರತಮ್ಯವನ್ನು ಶಿಕ್ಷಣಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಭಾರತದ ಏಕೈಕ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾದ ಜಮ್ಮು-ಕಾಶ್ಮೀರದಲ್ಲಿ, ಅದೂ ಏಕೈಕ ಮುಸ್ಲಿಂ ಮುಖ್ಯಮಂತ್ರಿ (ಒಮರ್ ಅಬ್ದುಲ್ಲಾ) ಇರುವ ರಾಜ್ಯದಲ್ಲಿ ಈ ಮುಸ್ಲಿಮ್ ವಿರೋಧಿ ತಾರತಮ್ಯವನ್ನು ಕಾನೂನುಬದ್ಧಗೊಳಿಸಲಾಗುತ್ತಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಕಿಡಿಕಾರಿದ್ದಾರೆ.

“ಬಿಜೆಪಿ “ವೈದ್ಯಕೀಯ ವಿಜ್ಞಾನಗಳನ್ನು ಕೋಮುವಾದೀಕರಣಗೊಳಿಸುವ ಪರಿಕಲ್ಪನೆಯನ್ನು ಪ್ರಯೋಗಿಸುತ್ತಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜಾದ್ ಲೋನ್ ಆರೋಪಿಸಿದ್ದಾರೆ.

“ವೈದ್ಯಕೀಯ ವಿಜ್ಞಾನಕ್ಕೆ ಧಾರ್ಮಿಕ ಮತಾಂಧರಲ್ಲ, ಸಂಶೋಧಕರು ಬೇಕು” ಎಂದು ಲೋನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಗವರ್ನರ್ ಬಿಜೆಪಿ ಮನವಿ ಸ್ವೀಕರಿಸಿದರೆ ಏನಾಗುತ್ತದೆ?

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿಯ ಮನವಿ ಪತ್ರವನ್ನು ಸ್ವೀಕರಿಸಿರುವುದರಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಕ್ಷಣದ ಪ್ರವೇಶ ನಿರಾಕರಣೆಗೆ ಆಗುವುದಿಲ್ಲ. ಇದು ಇನ್ನು ಮುಂದಿನ ಪ್ರವೇಶಗಳಿಗೆ (ಉದಾ: 2026-27 ಅಧ್ಯಯನ ವರ್ಷಕ್ಕೆ) ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಶೀಲಿಸುವ ಸೂಚನೆಯಾಗಿದೆ. ಆದರೆ, ಈ ವಿಷಯ ಇನ್ನೂ ನಿರ್ಧಾರವಾಗಿಲ್ಲ ಮತ್ತು ವಿವಾದಾಸ್ಪದವಾಗಿದೆ.

ಬಿಜೆಪಿಯ ಬೇಡಿಕೆಯಂತೆ ನಿಯಮಗಳು ಬದಲಾದರೆ (ಉದಾ: ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯ ಮಂಡಳಿ ಕಾಯ್ದೆ ಮತ್ತು ವಿಶ್ವವಿದ್ಯಾಲಯ ಕಾಯ್ದೆಯಲ್ಲಿ ತಿದ್ದುಪಡಿ) ಭವಿಷ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರವೇಶ ಸೀಮಿತವಾಗಬಹುದು. ಆದರೆ, ಇದು ಇನ್ನೂ ನಿರ್ಧಾರವಾಗಿಲ್ಲ. ದೇವಾಲಯ ಮಂಡಳಿ ಸಭೆಯಲ್ಲಿ (ನವೆಂಬರ್ ಅಂತ್ಯದಲ್ಲಿ ನಡೆಯಬಹುದು) ಈ ವಿಚಾರ ಚರ್ಚೆಯಾಗಬಹುದು. ನಿಯಮ ಬದಲಾವಣೆಗೆ ಕಾನೂನು ಪ್ರಕ್ರಿಯೆ ಮತ್ತು ನ್ಯಾಯಾಲಯ ಸವಾಲುಗಳು ಎದುರಾಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...