Homeಕರ್ನಾಟಕಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ ಸೂಫಿ ಸಂತರ ಸಮಾಧಿ ಮೇಲೆ ಹಸಿರು ಬಟ್ಟೆ ಹೊದಿಸುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಮತ್ತು ಉರೂಸಿನ ಪ್ರಮುಖ ಭಾಗವೂ ಹೌದು. ಆದರೆ, ಜಿಲ್ಲಾಡಳಿತ ಇದಕ್ಕೆ ಅವಕಾಶ ಕೊಟ್ಟಿಲ್ಲ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಗೌಸ್ ಮುಈನುದ್ದೀನ್ ಆರೋಪಿಸಿದ್ದಾರೆ.

ಸಮಾಧಿ ಮೇಲೆ ಹಸಿರು ಬಟ್ಟೆ ಹೊದಿಸಲು ಅವಕಾಶ ನೀಡುವ ಕುರಿತು ಮಾಧುಸ್ವಾಮಿ ವರದಿಯಲ್ಲೂ ಉಲ್ಲೇಖಿಸಲಾಗಿದೆ. ವರದಿಯನ್ನು ಸರ್ಕಾರ ಒಪ್ಪಿಕೊಂಡಿರುವ ಕಾರಣ, ಇದು ಕಾನೂನಾತ್ಮಕ ಅವಕಾಶವಾಗಿದೆ. ಆದರೆ, ಜಿಲ್ಲಾಡಳಿತ ಉರೂಸ್ ಸಂದರ್ಭದಲ್ಲಿ ಹಸಿರು ಬಟ್ಟೆ ಹೊದಿಸಲು ಬಿಟ್ಟಿಲ್ಲ. ಅಧಿಕಾರಿಗಳು ಅವರಿಗೆ ಇಷ್ಟ ಬಂದಂತೆ ಉರೂಸ್ ನಡೆಸಿದ್ದಾರೆ. ಹಸಿರು ಬಟ್ಟೆ ಹೊದಿಸಲು ಅವಕಾಶ ನೀಡದ ಹಿನ್ನೆಲೆ, ಮುಜಾವರ್ ಉರೂಸ್ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎಂದು ಮುಈನುದ್ದೀನ್ ವಿವರಿಸಿದ್ದಾರೆ.

ದತ್ತ ಜಯಂತಿ ಸಂದರ್ಭದಲ್ಲಿ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಡುತ್ತದೆ. ಯಾವ ರೀತಿ ಬೇಕೋ ಆ ರೀತಿ ಜಯಂತಿ ಆಚರಿಸಲು ಅವಕಾಶ ನೀಡುತ್ತದೆ. ಉರೂಸ್ ಸಂದರ್ಭದಲ್ಲಿ ಮಾತ್ರ ಕನಿಷ್ಠ ಹಸಿರು ಬಟ್ಟೆ ಹೊದಿಸಲೂ ಅವಕಾಶ ನೀಡುತ್ತಿಲ್ಲ. ಇದು ಜಿಲ್ಲಾಡಳಿತದ ದ್ವಿಮುಖ ನೀತಿಯಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಈ ರೀತಿ ಜಾತ್ಯಾತೀತ ಅವಕಾಶಗಳನ್ನು ನಿರಾಕರಿಸುತ್ತಿರುವುದು ಬೇಸರದ ಸಂಗತಿ ಎಂದು ಮುಈನುದ್ದೀನ್ ಹೇಳಿದ್ದಾರೆ.

ನಮಗೆ ಇಲ್ಲಿ ಉರೂಸ್ ಅಥವಾ ದತ್ತ ಜಯಂತಿ ಮುಖ್ಯವಲ್ಲ. ಜಿಲ್ಲಾಡಳಿತದ ದ್ವಿಮುಖ ಮತ್ತು ಏಕಪಕ್ಷೀಯ ಧೋರಣೆಯನ್ನು ನಾವು ಖಂಡಿಸುತ್ತೇವೆ. ಒಂದು ಸಮುದಾಯದವರ ಧಾರ್ಮಿಕ ಆಚರಣೆಗಳಿಗೆ ಸಂಪೂರ್ಣ ವ್ಯವಸ್ಥೆಗಳನ್ನು ಮಾಡಿಕೊಡುವ ಆಡಳಿತ, ಇನ್ನೊಂದು ಸಮುದಾಯದ ಕನಿಷ್ಠ ಆಚರಣೆಗಳಿಗೆ ಅವಕಾಶ ನೀಡುತ್ತಿಲ್ಲ. ಇದು ಸಂವಿಧಾನದ ತತ್ವಗಳು ಮತ್ತು ಸರ್ಕಾರವೇ ಒಪ್ಪಿಕೊಂಡ ಮಾಧುಸ್ವಾಮಿ ವರದಿಯ ಶಿಫಾರಸುಗಳಿಗೆ ವಿರುದ್ದವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಈ ದ್ವಿಮುಖ ನೀತಿ ಖಂಡಿಸಿ ಗುರುವಾರ ಚಿಕ್ಕಮಗಳೂರಿನ ಆಝಾದ್ ವೃತ್ತ ಮತ್ತು ಬಾಬಾ ಬುಡನ್‌ಗಿರಿಯಲ್ಲಿ ಎದ್ದೇಳು ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಗೌಸ್ ಮುಈನುದ್ದೀನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...