Homeಮುಖಪುಟಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ...

ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ನಾಳೆ(ಅ.8) ಪ್ರಕಟಗೊಳ್ಳಲಿದೆ. ಅದಕ್ಕೂ ಮುನ್ನ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇನ ಮಾಡಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯರಾಗಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಲಿರುವ ಐವರು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸಲಹೆಯನ್ನು ಆಧರಿಸಿ ಐವರು ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುವರು. ಈ ಸದಸ್ಯರು ನೂತನ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾದ ಪಾತ್ರವನ್ನು ವಹಿಸಲಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸರ್ಕಾರ ರಚನೆಗೆ ಮುನ್ನ ಐವರು ಸದಸ್ಯರ ನಾಮನಿರ್ದೇಶನವನ್ನು ವಿರೋಧಿಸಿವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಎಚ್ಚರಿಕೆ ನೀಡಿದೆ.

ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪುನರ್‌ರಚನಾ ಕಾಯ್ದೆ-2019ರ, ಸೆಕ್ಷನ್‌ 14 ಉಪ ನಿಯಮ (30)ರ ಅನ್ವಯ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನಂಟ್‌ ಗವರ್ನರ್ ಅವರು ಇಬ್ಬರನ್ನು ನಾಮನಿರ್ದೇಶನ ಮಾಡಬಹುದು. ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಾವು ಭಾವಿಸಿದಲ್ಲಿ ಈ ಮೂಲಕ ಆ ಕೊರತೆ ತುಂಬಬಹುದು ಎಂದಿದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರಲಾಗಿದೆ.

ತಿದ್ದುಪಡಿ ಬಳಿಕ, 15ಎ ಉಪ ನಿಯಮದ ಅನುಸಾರ, ಲೆಫ್ಟಿನಂಟ್ ಗವರ್ನರ್ ಅವರು ಇಬ್ಬರಿಗಿಂತಲೂ ಹೆಚ್ಚು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗದು. ಇಬ್ಬರಲ್ಲಿ ಒಬ್ಬರು ಕಾಶ್ಮೀರಿ ವಲಸಿಗ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು. ಉಪ ನಿಯಮ 15ಬಿ ಅನುಸಾರ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದಿಂದ ವಲಸೆ ಬಂದಿರುವ ವ್ಯಕ್ತಿಯೊಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ರಾಜ್ಯಪಾಲರು ಈಗ ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿರುವ ಐವರು ಸದಸ್ಯರಿಗೂ ಚುನಾಯಿತ ಸದಸ್ಯರಿಗೆ ಇರುವಂತೆಯೇ ಮತದಾನದ ಹಕ್ಕು ಇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಲೆಫ್ಟಿನೆಂಟ್ ಗವರ್ನರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದು, ‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು’ ಎಂದು ಟೀಕಿಸಿದೆ.

ನಾಮನಿರ್ದೇಶನ ಮಾಡುವ ನಿರ್ಧಾರವು ಮತಎಣಿಕೆಗೆ ಮೊದಲೇ ಜನಾದೇಶವನ್ನು ತಿರುಚುವ ಕೇಂದ್ರ ಸರ್ಕಾರದ ಯತ್ನವಾಗಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಎಂದು ಟೀಕಿಸಿದ್ದಾರೆ.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯ ಬಲ 90 ಆಗಿದೆ. ಐವರ ನಾಮ ನಿರ್ದೇಶನಗೊಂಡಲ್ಲಿ ಸದಸ್ಯ ಬಲ 95ಕ್ಕೆ ಏರಲಿದೆ. ಸರ್ಕಾರ ರಚನೆಗೆ 48 ಸದಸ್ಯರ ಸರಳ ಬಹುಮತ ಅಗತ್ಯವಾಗಿರಲಿದೆ.

ಇದನ್ನೂ ಓದಿ : ಸಾಮಾಜಿಕ ಮಾಧ್ಯಮದಲ್ಲಿ ಭವಿಶ್ ಅಗರ್ವಾಲ್-ಕುನಾಲ್ ಕಮ್ರಾ ಜಟಾಪಟಿ; ಶೇ.8 ರಷ್ಟು ಕುಸಿತ ಕಂಡ ಓಲಾ ಎಲೆಕ್ಟ್ರಿಕ್ ಷೇರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...