Homeಮುಖಪುಟಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ...

ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ನಾಳೆ(ಅ.8) ಪ್ರಕಟಗೊಳ್ಳಲಿದೆ. ಅದಕ್ಕೂ ಮುನ್ನ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇನ ಮಾಡಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯರಾಗಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಲಿರುವ ಐವರು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸಲಹೆಯನ್ನು ಆಧರಿಸಿ ಐವರು ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುವರು. ಈ ಸದಸ್ಯರು ನೂತನ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾದ ಪಾತ್ರವನ್ನು ವಹಿಸಲಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸರ್ಕಾರ ರಚನೆಗೆ ಮುನ್ನ ಐವರು ಸದಸ್ಯರ ನಾಮನಿರ್ದೇಶನವನ್ನು ವಿರೋಧಿಸಿವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಎಚ್ಚರಿಕೆ ನೀಡಿದೆ.

ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪುನರ್‌ರಚನಾ ಕಾಯ್ದೆ-2019ರ, ಸೆಕ್ಷನ್‌ 14 ಉಪ ನಿಯಮ (30)ರ ಅನ್ವಯ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನಂಟ್‌ ಗವರ್ನರ್ ಅವರು ಇಬ್ಬರನ್ನು ನಾಮನಿರ್ದೇಶನ ಮಾಡಬಹುದು. ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಾವು ಭಾವಿಸಿದಲ್ಲಿ ಈ ಮೂಲಕ ಆ ಕೊರತೆ ತುಂಬಬಹುದು ಎಂದಿದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರಲಾಗಿದೆ.

ತಿದ್ದುಪಡಿ ಬಳಿಕ, 15ಎ ಉಪ ನಿಯಮದ ಅನುಸಾರ, ಲೆಫ್ಟಿನಂಟ್ ಗವರ್ನರ್ ಅವರು ಇಬ್ಬರಿಗಿಂತಲೂ ಹೆಚ್ಚು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗದು. ಇಬ್ಬರಲ್ಲಿ ಒಬ್ಬರು ಕಾಶ್ಮೀರಿ ವಲಸಿಗ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು. ಉಪ ನಿಯಮ 15ಬಿ ಅನುಸಾರ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದಿಂದ ವಲಸೆ ಬಂದಿರುವ ವ್ಯಕ್ತಿಯೊಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ರಾಜ್ಯಪಾಲರು ಈಗ ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿರುವ ಐವರು ಸದಸ್ಯರಿಗೂ ಚುನಾಯಿತ ಸದಸ್ಯರಿಗೆ ಇರುವಂತೆಯೇ ಮತದಾನದ ಹಕ್ಕು ಇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಲೆಫ್ಟಿನೆಂಟ್ ಗವರ್ನರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದು, ‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು’ ಎಂದು ಟೀಕಿಸಿದೆ.

ನಾಮನಿರ್ದೇಶನ ಮಾಡುವ ನಿರ್ಧಾರವು ಮತಎಣಿಕೆಗೆ ಮೊದಲೇ ಜನಾದೇಶವನ್ನು ತಿರುಚುವ ಕೇಂದ್ರ ಸರ್ಕಾರದ ಯತ್ನವಾಗಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಎಂದು ಟೀಕಿಸಿದ್ದಾರೆ.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯ ಬಲ 90 ಆಗಿದೆ. ಐವರ ನಾಮ ನಿರ್ದೇಶನಗೊಂಡಲ್ಲಿ ಸದಸ್ಯ ಬಲ 95ಕ್ಕೆ ಏರಲಿದೆ. ಸರ್ಕಾರ ರಚನೆಗೆ 48 ಸದಸ್ಯರ ಸರಳ ಬಹುಮತ ಅಗತ್ಯವಾಗಿರಲಿದೆ.

ಇದನ್ನೂ ಓದಿ : ಸಾಮಾಜಿಕ ಮಾಧ್ಯಮದಲ್ಲಿ ಭವಿಶ್ ಅಗರ್ವಾಲ್-ಕುನಾಲ್ ಕಮ್ರಾ ಜಟಾಪಟಿ; ಶೇ.8 ರಷ್ಟು ಕುಸಿತ ಕಂಡ ಓಲಾ ಎಲೆಕ್ಟ್ರಿಕ್ ಷೇರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...