Homeಮುಖಪುಟಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ...

ಜಮ್ಮು ಕಾಶ್ಮೀರ ವಿಧಾನಸಭೆಗೆ ಐವರ ನಾಮನಿರ್ದೇನಕ್ಕೆ ಮುಂದಾದ ಲೆ. ಗವರ್ನರ್ : ಕೋರ್ಟ್ ಮೆಟ್ಟಿಲೇರಿವುದಾಗಿ ಎಚ್ಚರಿಸಿದ ಪಕ್ಷಗಳು

- Advertisement -
- Advertisement -

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳ ಫಲಿತಾಂಶ ನಾಳೆ(ಅ.8) ಪ್ರಕಟಗೊಳ್ಳಲಿದೆ. ಅದಕ್ಕೂ ಮುನ್ನ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಐವರು ಸದಸ್ಯರನ್ನು ನಾಮನಿರ್ದೇನ ಮಾಡಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯರಾಗಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಲಿರುವ ಐವರು ಕೇಂದ್ರಾಡಳಿತ ಪ್ರದೇಶದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬಹುದು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಕೇಂದ್ರ ಗೃಹ ಸಚಿವಾಲಯದ ಸಲಹೆಯನ್ನು ಆಧರಿಸಿ ಐವರು ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡುವರು. ಈ ಸದಸ್ಯರು ನೂತನ ಸರ್ಕಾರ ರಚನೆಯಲ್ಲಿ ನಿರ್ಣಾಯಕವಾದ ಪಾತ್ರವನ್ನು ವಹಿಸಲಿದ್ದಾರೆ.

ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸರ್ಕಾರ ರಚನೆಗೆ ಮುನ್ನ ಐವರು ಸದಸ್ಯರ ನಾಮನಿರ್ದೇಶನವನ್ನು ವಿರೋಧಿಸಿವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಎಚ್ಚರಿಕೆ ನೀಡಿದೆ.

ಆಗಸ್ಟ್ 2019ರಲ್ಲಿ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪುನರ್‌ರಚನಾ ಕಾಯ್ದೆ-2019ರ, ಸೆಕ್ಷನ್‌ 14 ಉಪ ನಿಯಮ (30)ರ ಅನ್ವಯ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನಂಟ್‌ ಗವರ್ನರ್ ಅವರು ಇಬ್ಬರನ್ನು ನಾಮನಿರ್ದೇಶನ ಮಾಡಬಹುದು. ಮಹಿಳೆಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಾವು ಭಾವಿಸಿದಲ್ಲಿ ಈ ಮೂಲಕ ಆ ಕೊರತೆ ತುಂಬಬಹುದು ಎಂದಿದೆ. ಈ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರಲಾಗಿದೆ.

ತಿದ್ದುಪಡಿ ಬಳಿಕ, 15ಎ ಉಪ ನಿಯಮದ ಅನುಸಾರ, ಲೆಫ್ಟಿನಂಟ್ ಗವರ್ನರ್ ಅವರು ಇಬ್ಬರಿಗಿಂತಲೂ ಹೆಚ್ಚು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗದು. ಇಬ್ಬರಲ್ಲಿ ಒಬ್ಬರು ಕಾಶ್ಮೀರಿ ವಲಸಿಗ ಸಮುದಾಯಕ್ಕೆ ಸೇರಿದ ಮಹಿಳೆ ಆಗಿರಬೇಕು. ಉಪ ನಿಯಮ 15ಬಿ ಅನುಸಾರ ಪಾಕ್‌ ಆಕ್ರಮಿತ ಕಾಶ್ಮೀರ ಭಾಗದಿಂದ ವಲಸೆ ಬಂದಿರುವ ವ್ಯಕ್ತಿಯೊಬ್ಬರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

ರಾಜ್ಯಪಾಲರು ಈಗ ನಾಮನಿರ್ದೇಶನ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿರುವ ಐವರು ಸದಸ್ಯರಿಗೂ ಚುನಾಯಿತ ಸದಸ್ಯರಿಗೆ ಇರುವಂತೆಯೇ ಮತದಾನದ ಹಕ್ಕು ಇರುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಲೆಫ್ಟಿನೆಂಟ್ ಗವರ್ನರ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿವೆ. ಇದು, ‘ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು’ ಎಂದು ಟೀಕಿಸಿದೆ.

ನಾಮನಿರ್ದೇಶನ ಮಾಡುವ ನಿರ್ಧಾರವು ಮತಎಣಿಕೆಗೆ ಮೊದಲೇ ಜನಾದೇಶವನ್ನು ತಿರುಚುವ ಕೇಂದ್ರ ಸರ್ಕಾರದ ಯತ್ನವಾಗಿದೆ ಎಂದು ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಎಂದು ಟೀಕಿಸಿದ್ದಾರೆ.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಸದಸ್ಯ ಬಲ 90 ಆಗಿದೆ. ಐವರ ನಾಮ ನಿರ್ದೇಶನಗೊಂಡಲ್ಲಿ ಸದಸ್ಯ ಬಲ 95ಕ್ಕೆ ಏರಲಿದೆ. ಸರ್ಕಾರ ರಚನೆಗೆ 48 ಸದಸ್ಯರ ಸರಳ ಬಹುಮತ ಅಗತ್ಯವಾಗಿರಲಿದೆ.

ಇದನ್ನೂ ಓದಿ : ಸಾಮಾಜಿಕ ಮಾಧ್ಯಮದಲ್ಲಿ ಭವಿಶ್ ಅಗರ್ವಾಲ್-ಕುನಾಲ್ ಕಮ್ರಾ ಜಟಾಪಟಿ; ಶೇ.8 ರಷ್ಟು ಕುಸಿತ ಕಂಡ ಓಲಾ ಎಲೆಕ್ಟ್ರಿಕ್ ಷೇರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...