Homeಕರ್ನಾಟಕಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

- Advertisement -
- Advertisement -

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಿತ್ತಾಟ ಶುರುವಾಗಿದೆ.

ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಆರ್‌ಎಸ್‌ ರಸ್ತೆ ಅಥವಾ ರಾಜಕುಮಾರಿ ರಸ್ತೆಗೆ (Princess Road)’ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮೈಸೂರು ನಗರದ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ವೃತ್ತದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ 1.5 ಕಿಮೀ ವ್ಯಾಪ್ತಿಯನ್ನು ಕೆಆರ್‌ಎಸ್ ರಸ್ತೆ ಅಥವಾ ರಾಜಕುಮಾರಿ ರಸ್ತೆ ( Princess Road) ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ. ಇಲ್ಲಿ ಪ್ರಿನ್ಸೆಸ್ ಅಥವಾ ರಾಜಕುಮಾರಿ ಎಂದರೆ ಒಡೆಯರ್ ಕುಟುಂಬದ ಕೃಷ್ಣರಾಜಮ್ಮನಿ ಅವರಾಗಿದ್ದಾರೆ.

ಕಳೆದ ನವೆಂಬರ್ ಅಂತ್ಯದಲ್ಲಿ ನಡೆದ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಶಿಷ್ಟಾಚಾರದ ಪ್ರಕಾರ ಈ ನಿರ್ಧಾರಕ್ಕೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಬಿಜೆಪಿ ನಾಯಕರು ಮತ್ತು ಕೆಲ ಸಾರ್ವಜನಿಕರು ಪಾಲಿಕೆ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? : ಬಿ.ವೈ ವಿಜಯೇಂದ್ರ

ಮೈಸೂರು ಸಾಮ್ರಾಜ್ಯವನ್ನು ರಾಜರು ಮತ್ತು ಆಡಳಿತಗಾರರು ಕಟ್ಟಿ ಬೆಳೆಸಿದರು. ಆದರೆ, ಮಹಾನ್ ರಾಜವಂಶದ ಹೆಸರನ್ನು ಹೊಂದಿರುವ ರಸ್ತೆಗೆ ತಮ್ಮ ಹೆಸರಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸದ್ಯ ಚುನಾಯಿತ ಪ್ರತಿನಿಧಿಗಳಿಲ್ಲದ ಮೈಸೂರು ಮಹಾನಗರ ಪಾಲಿಕೆಯು ಇಂತಹ ಪ್ರಮುಖ ನಿರ್ಧಾರ ಕೈಗೊಳ್ಳುವುದು ಎಷ್ಟು ಸಮಂಜಸವಾಗಿದೆ. ಸಿದ್ದರಾಮಯ್ಯನವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ : ಸಂಸದ ಯಧುವೀರ್

“ನಾನು ಸಂಸದನಾದ ಮೇಲೆ ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ. ಎಂಸಿಸಿ ಯಾವುದೇ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಕೆಆರ್‌ಎಸ್ ರಸ್ತೆಯನ್ನು ಹಾಗೆಯೇ ಬಿಡಬೇಕು. 1904ರಲ್ಲಿ ಯುವರಾಣಿ ಕೃಷ್ಣರಾಜಮ್ಮಣ್ಣಿ ಕ್ಷಯರೋಗದಿಂದ ಮೃತಪಟ್ಟಿದ್ದರಿಂದ ಈ ರಸ್ತೆಗೆ ರಾಜಕುಮಾರಿ ರಸ್ತೆ ಎಂಬ ಹೆಸರು ಬಂದಿದೆ” ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಬಿಜೆಪಿಗೆ ವಿರೋಧಿಸೋದು ಬಿಟ್ಟು ಬೇರೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ 

ಬಿಜೆಪಿಗರ ವಿರೋಧದ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಎಲ್ಲಾ ವಿಷಯಗಳನ್ನು ವಿರೋಧಿಸುವುದು ಬಿಜೆಪಿಗರ ಕೆಲಸ. ಬಿಜೆಪಿಯವರು ಇದನ್ನು (ರಸ್ತೆಯ ಹೆಸರು ಬದಲಾವಣೆ) ಸ್ವಾಗತಿಸುತ್ತಾರಾ? ವಿರೋಧಿಸುವುದು ಅವರ ಕರ್ತವ್ಯ. ಅವರು ಒಳ್ಳೆಯದ್ದನ್ನೂ ವಿರೋಧಿಸುತ್ತಾರೆ, ಕೆಟ್ಟದ್ದನ್ನೂ ವಿರೋಧಿಸುತ್ತಾರೆ. ಅವರಿಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ.

ಪಾಲಿಕೆ ನಿರ್ಧಾರ ಸ್ವಾಗತಿಸಿದ ಪ್ರತಾಪ್ ಸಿಂಹ!

ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಪಾಲಿಕೆ ನಿರ್ಧಾರವನ್ನು ಮೈಸೂರಿನ ಮಾಜಿ ಸಂಸದ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. “ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆಯೇ ಹೊರತು, ರಸ್ತೆಗೆ ನಾಮಕರಣ ವಿಚಾರದಲ್ಲಿ ಅವರನ್ನು ವಿರೋಧ ಮಾಡುವುದಿಲ್ಲ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...