Homeಕರ್ನಾಟಕಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು : ಬಿಜೆಪಿ-ಕಾಂಗ್ರೆಸ್ ನಡುವೆ ಕಿತ್ತಾಟ

- Advertisement -
- Advertisement -

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಕಿತ್ತಾಟ ಶುರುವಾಗಿದೆ.

ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಕೆಆರ್‌ಎಸ್‌ ರಸ್ತೆ ಅಥವಾ ರಾಜಕುಮಾರಿ ರಸ್ತೆಗೆ (Princess Road)’ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಮರುನಾಮಕರಣ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಮೈಸೂರು ನಗರದ ಒಂಟಿಕೊಪ್ಪಲಿನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ವೃತ್ತದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ 1.5 ಕಿಮೀ ವ್ಯಾಪ್ತಿಯನ್ನು ಕೆಆರ್‌ಎಸ್ ರಸ್ತೆ ಅಥವಾ ರಾಜಕುಮಾರಿ ರಸ್ತೆ ( Princess Road) ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ. ಇಲ್ಲಿ ಪ್ರಿನ್ಸೆಸ್ ಅಥವಾ ರಾಜಕುಮಾರಿ ಎಂದರೆ ಒಡೆಯರ್ ಕುಟುಂಬದ ಕೃಷ್ಣರಾಜಮ್ಮನಿ ಅವರಾಗಿದ್ದಾರೆ.

ಕಳೆದ ನವೆಂಬರ್ ಅಂತ್ಯದಲ್ಲಿ ನಡೆದ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಶಿಷ್ಟಾಚಾರದ ಪ್ರಕಾರ ಈ ನಿರ್ಧಾರಕ್ಕೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಬಿಜೆಪಿ ನಾಯಕರು ಮತ್ತು ಕೆಲ ಸಾರ್ವಜನಿಕರು ಪಾಲಿಕೆ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? : ಬಿ.ವೈ ವಿಜಯೇಂದ್ರ

ಮೈಸೂರು ಸಾಮ್ರಾಜ್ಯವನ್ನು ರಾಜರು ಮತ್ತು ಆಡಳಿತಗಾರರು ಕಟ್ಟಿ ಬೆಳೆಸಿದರು. ಆದರೆ, ಮಹಾನ್ ರಾಜವಂಶದ ಹೆಸರನ್ನು ಹೊಂದಿರುವ ರಸ್ತೆಗೆ ತಮ್ಮ ಹೆಸರಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸದ್ಯ ಚುನಾಯಿತ ಪ್ರತಿನಿಧಿಗಳಿಲ್ಲದ ಮೈಸೂರು ಮಹಾನಗರ ಪಾಲಿಕೆಯು ಇಂತಹ ಪ್ರಮುಖ ನಿರ್ಧಾರ ಕೈಗೊಳ್ಳುವುದು ಎಷ್ಟು ಸಮಂಜಸವಾಗಿದೆ. ಸಿದ್ದರಾಮಯ್ಯನವರಿಗೆ ನೈತಿಕ ಹೊಣೆಗಾರಿಕೆ ಇಲ್ಲವೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ : ಸಂಸದ ಯಧುವೀರ್

“ನಾನು ಸಂಸದನಾದ ಮೇಲೆ ರಾಜ ಕುಟುಂಬದ ಮೇಲಿನ ದಾಳಿ ಹೆಚ್ಚಾಗಿದೆ. ಎಂಸಿಸಿ ಯಾವುದೇ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಕೆಆರ್‌ಎಸ್ ರಸ್ತೆಯನ್ನು ಹಾಗೆಯೇ ಬಿಡಬೇಕು. 1904ರಲ್ಲಿ ಯುವರಾಣಿ ಕೃಷ್ಣರಾಜಮ್ಮಣ್ಣಿ ಕ್ಷಯರೋಗದಿಂದ ಮೃತಪಟ್ಟಿದ್ದರಿಂದ ಈ ರಸ್ತೆಗೆ ರಾಜಕುಮಾರಿ ರಸ್ತೆ ಎಂಬ ಹೆಸರು ಬಂದಿದೆ” ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಬಿಜೆಪಿಗೆ ವಿರೋಧಿಸೋದು ಬಿಟ್ಟು ಬೇರೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ 

ಬಿಜೆಪಿಗರ ವಿರೋಧದ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಎಲ್ಲಾ ವಿಷಯಗಳನ್ನು ವಿರೋಧಿಸುವುದು ಬಿಜೆಪಿಗರ ಕೆಲಸ. ಬಿಜೆಪಿಯವರು ಇದನ್ನು (ರಸ್ತೆಯ ಹೆಸರು ಬದಲಾವಣೆ) ಸ್ವಾಗತಿಸುತ್ತಾರಾ? ವಿರೋಧಿಸುವುದು ಅವರ ಕರ್ತವ್ಯ. ಅವರು ಒಳ್ಳೆಯದ್ದನ್ನೂ ವಿರೋಧಿಸುತ್ತಾರೆ, ಕೆಟ್ಟದ್ದನ್ನೂ ವಿರೋಧಿಸುತ್ತಾರೆ. ಅವರಿಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ.

ಪಾಲಿಕೆ ನಿರ್ಧಾರ ಸ್ವಾಗತಿಸಿದ ಪ್ರತಾಪ್ ಸಿಂಹ!

ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಪಾಲಿಕೆ ನಿರ್ಧಾರವನ್ನು ಮೈಸೂರಿನ ಮಾಜಿ ಸಂಸದ, ಬಿಜೆಪಿ ನಾಯಕ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. “ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆಯೇ ಹೊರತು, ರಸ್ತೆಗೆ ನಾಮಕರಣ ವಿಚಾರದಲ್ಲಿ ಅವರನ್ನು ವಿರೋಧ ಮಾಡುವುದಿಲ್ಲ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್ ನಿಧನ | ಬೆಳಗಾವಿ ಕಾಂಗ್ರೆಸ್ ಸಮಾವೇಶ ರದ್ದು ; ಅದೇ ವೇದಿಕೆಯಲ್ಲಿ ಶ್ರದ್ಧಾಂಜಲಿ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...