Homeಮುಖಪುಟ"ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು"?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

“ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು”?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

- Advertisement -
- Advertisement -

ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ ಹಾಗೂ ಕರ್ಲಿ ಟೇಲ್ಸ್‌ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಕಾಮಿಯಾ ಜಾನಿ ಭೇಟಿ ಕೊಟ್ಟಿರುವುದನ್ನು ಬಿಜೆಪಿ ಮತ್ತು ಬಲಪಂಥೀಯ ಮಾಧ್ಯಮಗಳು ವಿವಾದ ಮಾಡಿವೆ.

ಪುರಿ ಜಗನ್ನಾಥ ದೇವಸ್ಥಾನದ ಅಭಿವೃದ್ದಿಗಾಗಿ ‘ಪರಿಕ್ರಮ’ ಎಂಬ ಯೋಜನೆಯನ್ನು ಸರ್ಕಾರ ರೂಪಿಸಿದೆ. ಈ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರ ಮುಖ್ಯಸ್ಥರಾಗಿ ಮಾಜಿ ಐಎಎಸ್ ಅಧಿಕಾರಿ, ಬಿಜೆಡಿ ನಾಯಕ ವಿ.ಕೆ ಪಾಂಡಿಯನ್ ಅವರನ್ನು ನೇಮಕ ಮಾಡಲಾಗಿದೆ. ಪಾಂಡಿಯನ್ ಅವರ ಜೊತೆ ಪರಿಕ್ರಮ ಯೋಜನೆಯ ಕುರಿತು ಕಾಮಿಯಾ ಜಾನಿ ವಿಡಿಯೋ ಮಾಡಿದ್ದಾರೆ.

ಕಾಮಿಯಾ ಜಾನಿ ಈ ಹಿಂದೆ ತಮ್ಮ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಗೋಮಾಂಸ (ಬೀಫ್) ಕುರಿತು ವಿಡಿಯೋ ಮಾಡಿದ್ದರು. ಆ ವಿಡಿಯೋ ಮುಂದಿಟ್ಟುಕೊಂಡು, ‘ಗೋಮಾಂಸ ಪ್ರಚಾರಕಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಈ ಕಾರಣಕ್ಕೆ ಕಾಮಿಯಾ ಜಾನಿ ಮತ್ತು ವಿ.ಕೆ ಪಾಂಡಿಯನ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಬಲ ಪಂಥೀಯರು ಆಗ್ರಹಿಸಿದ್ದಾರೆ.

ಬಲ ಪಂಥೀಯ ನ್ಯೂಸ್ ಪೋರ್ಟಲ್ ಓಪ್‌ಇಂಡಿಯಾ (Opindia.com) ಕಾಮಿಯಾ ಜಾನಿ ದೇವಸ್ಥಾನ ಭೇಟಿ ಕುರಿತು, “ಬೀಫ್ ಪ್ರಚಾರಕಿಯನ್ನು ಜಗನ್ನಾಥ ದೇವಸ್ಥಾನದೊಳಗೆ ಹೇಗೆ ಬಿಡಲಾಯಿತು?” ಒಡಿಶಾ ಬಿಜೆಪಿ ಇನ್‌ಫ್ಲ್ಯುಯೆನ್ಸರ್‌ ಕಾಮಿಯಾ ಜಾನಿ ಬಂಧನಕ್ಕೆ ಆಗ್ರಹಿಸಿದೆ ಎಂದು ಸುದ್ದಿ ಮಾಡಿದೆ.

“ಐತಿಹಾಸಿಕ ಮತ್ತು ಆಧ್ಯಾತ್ಮಿಕ ಪರಂಪರೆಯಿಂದ ಸಮೃದ್ಧವಾಗಿರುವ ಪುರಿ ಮಂದಿರದ ಪಾವಿತ್ರ್ಯತೆಯನ್ನು 5ಟಿ ಅಧ್ಯಕ್ಷ ವಿಕೆ ಪಾಂಡಿಯನ್ ಅವಮಾನಿಸಿದ್ದಾರೆ. ಅವರು ಜಗನ್ನಾಥ ಮಂದಿರದ ಪೂಜ್ಯ ಆವರಣಕ್ಕೆ ಗೋಮಾಂಸ ಪ್ರಚಾರಕಿಯ ಪ್ರವೇಶಕ್ಕೆ ಅನುಮತಿಸಿದ್ದಾರೆ. ಇದರ ಹೊಣೆಗಾರರು ತ್ವರಿತ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ಒಡಿಶಾ ಒಡಿಯಾದ ಭಾವನೆಗಳು ಮತ್ತು ಜಗನ್ನಾಥ ಸಂಸ್ಕೃತಿಯ ಪಾವಿತ್ರ್ಯದ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಒಡಿಶಾ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಬಿಜೆಪಿಯ ಈ ಆರೋಪಕ್ಕೆ ಕೆಲ ಎಕ್ಸ್‌ ಬಳಕೆದಾರರು ತಿರುಗೇಟು ಕೊಟ್ಟಿದ್ದು, ಕಾಮಿಯಾ ಅವರು ಕೇಂದ್ರ ಸಚಿವ, ಬಿಜೆಪಿ ನಾಯಕ ಅನುರಾಗ್ ಠಾಕೂರ್, ಶಿವಸೇನೆ(ಯುಬಿಟಿ) ನಾಯಕ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಜೊತೆ ಮಾಡಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಕಾಮಿಯಾ ಜಾನಿಯವರ ಯೂಟ್ಯೂಬ್ ಚಾನೆಲ್ 2.77 ಮಿಲಿಯನ್ ಚಂದಾರರನ್ನು ಹೊಂದಿದ್ದು, ರಾಜಕೀಯ ನಾಯಕರು ಮತ್ತು ಇತರ ಖ್ಯಾತನಾಮರ ಜೊತೆ ವಿಡಿಯೋ ಮಾಡಿದ್ದಾರೆ.

ವಿ.ಕೆ ಪಾಂಡಿಯನ್ ಯಾರು? 5ಟಿ ಎಂದರೆ ಏನು? 

ಒಡಿಶಾದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ವಿ.ಕೆ ಪಾಂಡಿಯನ್ ಈ ವರ್ಷದ ಅಕ್ಟೋಬರ್ 23ರಂದು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಅವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಪಾಂಡಿಯನ್ ಅಧಿಕಾರಿಯಾಗಿದ್ದಾಗಲೇ ಸಿಎಂ ನವೀನ್‌ ಪಟ್ನಾಯಕ್‌ ಅವರಿಗೆ ಬಹಳ ಆಪ್ತರಾಗಿದ್ದರು.

ಸಂಪುಟ ದರ್ಜೆ ಸ್ಥಾನಮಾನ ನೀಡಿದ ಬಳಿಕ ಪಾಂಡಿಯನ್ ಅವರನ್ನು ಒಡಿಶಾ ರಾಜ್ಯ ಸರ್ಕಾರದ 5ಟಿ (Team work, Technology, Transparency, Transformation and Time limit ಪರಿವರ್ತನೆ ಉಪಕ್ರಮಗಳು ಮತ್ತು ನಬಿನ್ ಒಡಿಶಾ ಯೋಜನೆಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಾಗಾಗಿ, ಅವರು ಜಗನ್ನಾಥ ದೇವಸ್ಥಾನದ ಪರಿಕ್ರಮ ಯೋಜನೆಯ ಮೇಲುಸ್ತುವಾರಿ ವಹಿಸಿದ್ದಾರೆ.

ಇದನ್ನೂ ಓದಿ : ‘ಜೇಬುಗಳ್ಳ’ ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ 8 ವಾರಗಳ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...