Homeಮುಖಪುಟ"ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು"?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

“ಗೋಮಾಂಸ ಪ್ರಚಾರಕಿಯನ್ನು ದೇವಸ್ಥಾನಕ್ಕೆ ಹೇಗೆ ಬಿಟ್ರು”?..ಯೂಟ್ಯೂಬರ್ ವಿರುದ್ಧ ಧ್ವೇಷ ಹರಡಿದ ಬಲ ಪಂಥೀಯರು

- Advertisement -
- Advertisement -

ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ ಹಾಗೂ ಕರ್ಲಿ ಟೇಲ್ಸ್‌ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಕಾಮಿಯಾ ಜಾನಿ ಭೇಟಿ ಕೊಟ್ಟಿರುವುದನ್ನು ಬಿಜೆಪಿ ಮತ್ತು ಬಲಪಂಥೀಯ ಮಾಧ್ಯಮಗಳು ವಿವಾದ ಮಾಡಿವೆ.

ಪುರಿ ಜಗನ್ನಾಥ ದೇವಸ್ಥಾನದ ಅಭಿವೃದ್ದಿಗಾಗಿ ‘ಪರಿಕ್ರಮ’ ಎಂಬ ಯೋಜನೆಯನ್ನು ಸರ್ಕಾರ ರೂಪಿಸಿದೆ. ಈ ಯೋಜನೆಯಡಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರ ಮುಖ್ಯಸ್ಥರಾಗಿ ಮಾಜಿ ಐಎಎಸ್ ಅಧಿಕಾರಿ, ಬಿಜೆಡಿ ನಾಯಕ ವಿ.ಕೆ ಪಾಂಡಿಯನ್ ಅವರನ್ನು ನೇಮಕ ಮಾಡಲಾಗಿದೆ. ಪಾಂಡಿಯನ್ ಅವರ ಜೊತೆ ಪರಿಕ್ರಮ ಯೋಜನೆಯ ಕುರಿತು ಕಾಮಿಯಾ ಜಾನಿ ವಿಡಿಯೋ ಮಾಡಿದ್ದಾರೆ.

ಕಾಮಿಯಾ ಜಾನಿ ಈ ಹಿಂದೆ ತಮ್ಮ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಗೋಮಾಂಸ (ಬೀಫ್) ಕುರಿತು ವಿಡಿಯೋ ಮಾಡಿದ್ದರು. ಆ ವಿಡಿಯೋ ಮುಂದಿಟ್ಟುಕೊಂಡು, ‘ಗೋಮಾಂಸ ಪ್ರಚಾರಕಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಈ ಕಾರಣಕ್ಕೆ ಕಾಮಿಯಾ ಜಾನಿ ಮತ್ತು ವಿ.ಕೆ ಪಾಂಡಿಯನ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಬಲ ಪಂಥೀಯರು ಆಗ್ರಹಿಸಿದ್ದಾರೆ.

ಬಲ ಪಂಥೀಯ ನ್ಯೂಸ್ ಪೋರ್ಟಲ್ ಓಪ್‌ಇಂಡಿಯಾ (Opindia.com) ಕಾಮಿಯಾ ಜಾನಿ ದೇವಸ್ಥಾನ ಭೇಟಿ ಕುರಿತು, “ಬೀಫ್ ಪ್ರಚಾರಕಿಯನ್ನು ಜಗನ್ನಾಥ ದೇವಸ್ಥಾನದೊಳಗೆ ಹೇಗೆ ಬಿಡಲಾಯಿತು?” ಒಡಿಶಾ ಬಿಜೆಪಿ ಇನ್‌ಫ್ಲ್ಯುಯೆನ್ಸರ್‌ ಕಾಮಿಯಾ ಜಾನಿ ಬಂಧನಕ್ಕೆ ಆಗ್ರಹಿಸಿದೆ ಎಂದು ಸುದ್ದಿ ಮಾಡಿದೆ.

“ಐತಿಹಾಸಿಕ ಮತ್ತು ಆಧ್ಯಾತ್ಮಿಕ ಪರಂಪರೆಯಿಂದ ಸಮೃದ್ಧವಾಗಿರುವ ಪುರಿ ಮಂದಿರದ ಪಾವಿತ್ರ್ಯತೆಯನ್ನು 5ಟಿ ಅಧ್ಯಕ್ಷ ವಿಕೆ ಪಾಂಡಿಯನ್ ಅವಮಾನಿಸಿದ್ದಾರೆ. ಅವರು ಜಗನ್ನಾಥ ಮಂದಿರದ ಪೂಜ್ಯ ಆವರಣಕ್ಕೆ ಗೋಮಾಂಸ ಪ್ರಚಾರಕಿಯ ಪ್ರವೇಶಕ್ಕೆ ಅನುಮತಿಸಿದ್ದಾರೆ. ಇದರ ಹೊಣೆಗಾರರು ತ್ವರಿತ ಮತ್ತು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ಒಡಿಶಾ ಒಡಿಯಾದ ಭಾವನೆಗಳು ಮತ್ತು ಜಗನ್ನಾಥ ಸಂಸ್ಕೃತಿಯ ಪಾವಿತ್ರ್ಯದ ಬಗ್ಗೆ ಕಾಳಜಿ ವಹಿಸುತ್ತದೆ” ಎಂದು ಒಡಿಶಾ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಬಿಜೆಪಿಯ ಈ ಆರೋಪಕ್ಕೆ ಕೆಲ ಎಕ್ಸ್‌ ಬಳಕೆದಾರರು ತಿರುಗೇಟು ಕೊಟ್ಟಿದ್ದು, ಕಾಮಿಯಾ ಅವರು ಕೇಂದ್ರ ಸಚಿವ, ಬಿಜೆಪಿ ನಾಯಕ ಅನುರಾಗ್ ಠಾಕೂರ್, ಶಿವಸೇನೆ(ಯುಬಿಟಿ) ನಾಯಕ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಜೊತೆ ಮಾಡಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಕಾಮಿಯಾ ಜಾನಿಯವರ ಯೂಟ್ಯೂಬ್ ಚಾನೆಲ್ 2.77 ಮಿಲಿಯನ್ ಚಂದಾರರನ್ನು ಹೊಂದಿದ್ದು, ರಾಜಕೀಯ ನಾಯಕರು ಮತ್ತು ಇತರ ಖ್ಯಾತನಾಮರ ಜೊತೆ ವಿಡಿಯೋ ಮಾಡಿದ್ದಾರೆ.

ವಿ.ಕೆ ಪಾಂಡಿಯನ್ ಯಾರು? 5ಟಿ ಎಂದರೆ ಏನು? 

ಒಡಿಶಾದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ವಿ.ಕೆ ಪಾಂಡಿಯನ್ ಈ ವರ್ಷದ ಅಕ್ಟೋಬರ್ 23ರಂದು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಅವರಿಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸರ್ಕಾರದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಪಾಂಡಿಯನ್ ಅಧಿಕಾರಿಯಾಗಿದ್ದಾಗಲೇ ಸಿಎಂ ನವೀನ್‌ ಪಟ್ನಾಯಕ್‌ ಅವರಿಗೆ ಬಹಳ ಆಪ್ತರಾಗಿದ್ದರು.

ಸಂಪುಟ ದರ್ಜೆ ಸ್ಥಾನಮಾನ ನೀಡಿದ ಬಳಿಕ ಪಾಂಡಿಯನ್ ಅವರನ್ನು ಒಡಿಶಾ ರಾಜ್ಯ ಸರ್ಕಾರದ 5ಟಿ (Team work, Technology, Transparency, Transformation and Time limit ಪರಿವರ್ತನೆ ಉಪಕ್ರಮಗಳು ಮತ್ತು ನಬಿನ್ ಒಡಿಶಾ ಯೋಜನೆಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಾಗಾಗಿ, ಅವರು ಜಗನ್ನಾಥ ದೇವಸ್ಥಾನದ ಪರಿಕ್ರಮ ಯೋಜನೆಯ ಮೇಲುಸ್ತುವಾರಿ ವಹಿಸಿದ್ದಾರೆ.

ಇದನ್ನೂ ಓದಿ : ‘ಜೇಬುಗಳ್ಳ’ ಹೇಳಿಕೆ: ರಾಹುಲ್ ವಿರುದ್ಧ ಕ್ರಮಕ್ಕೆ 8 ವಾರಗಳ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...