Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...