Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...