Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...