Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...