Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...