Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...