Homeಮುಖಪುಟತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ - ಊರುಕೆರೆಯಲ್ಲಿ ಹರಿಯಿತು ರಕ್ತ

ತುಮಕೂರು: ಲಾಂಗು ಹಿಡಿದು ರೌಡಿಗಳ ಅಟ್ಟಹಾಸ – ಊರುಕೆರೆಯಲ್ಲಿ ಹರಿಯಿತು ರಕ್ತ

- Advertisement -
- Advertisement -

ತುಮಕೂರು ಮತ್ತು ಹೊರವಲಯದಲ್ಲಿ ರೌಡಿಗಳ ಅಟ್ಟಹಾಸ ಸದ್ದಿಲ್ಲದೆ ತಲೆಎತ್ತತೊಡಗಿದೆ. ನಗರದಲ್ಲಿ ಆಗಾಗ ಹೆಣಗಳು ಬೀಳುತ್ತಲೇ ಇವೆ. ಒಬ್ಬೊಬ್ಬರೇ ರೌಡಿಗಳು ಹತರಾಗುತ್ತಿದ್ದಾರೆ. ರೌಡಿಗಳ ದಾಳಿಗೆ ಸಾಮಾನ್ಯರು ನಲುಗವಂತಾಗಿದೆ.

ಬೆಂಗಳೂರು-ತುಮಕೂರು ಸಮೀಪಗೊಳ್ಳುತ್ತಿರುವಂತೆ ರೌಡಿಪಡೆಗಳು ಗರಿಬಿಚ್ಚುತ್ತಿವೆ. ರೌಡಿ, ಮರಿರೌಡಿಗಳ ಗುಂಪುಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದರೂ ಪೊಲೀಸರು ಅವರನ್ನು ಪರೇಡ್ ನಡೆಸುವುದನ್ನು ಬಿಟ್ಟು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾದಂತೆ ಕಾಣುತ್ತಿಲ್ಲ. ರಿಯಲ್ ಎಸ್ಟೇಸ್ಟ್ ವ್ಯವಹಾರ ಕುಸಿದು ಬಿದ್ದ ಮೇಲೆ ರೌಡಿಗಳ ಹಾವಳಿ ವ್ಯಾಪಕವಾಗುತ್ತಿದೆ. ಇದರಿಂದ ನಗರದ ಜನ ಬೆಚ್ಚಿಬಿದ್ದಿದ್ದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿದೆ.

ರೌಡಿ ಹಾವಳಿಯನ್ನು ಎಳವೆಯಲ್ಲೇ ಚಿವುಟದಿದ್ದರೆ ಅದು ಬೆಳೆದ ಮೇಲೆ ಹತ್ತಿಕ್ಕಲು ಮತ್ತು ನಿಯಂತ್ರಿಸಲು ಆಗದು. ಪೊಲೀಸ್ ಇಲಾಖೆ ಇದನ್ನು ಆರಂಭದಲ್ಲೇ ಅರ್ಥ ಮಾಡಿಕೊಂಡರೆ ಒಳ್ಳೆಯದು. ಕಳೆದ ಒಂದು ವರ್ಷದಿಂದೀಚೆಗೆ ನಗರದಲ್ಲಿ ನಡೆದಿರುವ ರೌಡಿ ಚಟುವಟಿಕೆಗಳು ಎಲ್ಲವೂ ಸರಿಯಿಲ್ಲ ಎಂಬುದನ್ನೇ ಹೇಳುತ್ತಿವೆ. ತುಮಕೂರು ನಗರ ಪಾಲಿಕೆ ಮಾಜಿ ಅಧ್ಯಕ್ಷ ರವಿಕುಮಾರ್ ನನ್ನು ಹಾಡಹಗಲೇ ಲಾಂಗು ಮಚ್ಚುಗಳಿಂದ ಕೊಚ್ಚಿಹೋದರು. ಅದರೆ ಮೇಲೆ ಉಪ್ಪಾರಹಳ್ಳಿ ಗೇಟ್ ನಲ್ಲಿ ಮತ್ತೊಂದು ಹೆಣವೂ ಉರುಳಿತು. ಈ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದರೇ ವಿನಃ ರೌಡಿ ಹಾವಳಿ ಮಟ್ಟಹಾಕಲು ಕಠಿಣ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ.

ಕೆಸರುಮಡು ಸಮೀಪ ವ್ಯಕ್ತಿಯೊಬ್ಬನ ಹತ್ಯೆಯಾಯಿತು. ಆರೋಪಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾಗ ರಾತ್ರಿ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಮತ್ತು ತಪ್ಪಿಸಿಕೊಳ್ಳಲು ಯತ್ನಿಸಿದ ಎಂಬ ಕಾರಣಕ್ಕೆ ಪೈರ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಶಿರಾಗೇಟ್ ನ ಅನಿಕೇತನ ಶಾಲೆಯ ಬಳಿ ರೌಡಿಗಳು ಇಬ್ಬರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದರು. ಲಾಂಗುಗಳಿಂದ ತಲೆ ಉರುಳಿಸಿದ್ದ ಮಾಂತೇಶನನ್ನ. ಮತ್ತೊಬ್ಬ ಮಂಜು ತೀವ್ರಗಾಯಗೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಚೇತರಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಘಟನೆಯಲ್ಲೂ ಪೊಲೀಸರು ರೌಡಿಗಳನ್ನು ಅರೆಸ್ಟ್ ಮಾಡಿದರು. ಇದು ಸುದ್ದಿಯಾಗಲಿಲ್ಲ. ಯಾಕೆಂದರೆ ಇದರಲ್ಲಿ ರಾಜಕೀಯ ಪಕ್ಷವೊಂದರ ಮುಖಂಡರ ನಡುವಿನ ಕದನವಾಗಿತ್ತು. ಅದು ಅಲ್ಲಿಗೆ ಮುಚ್ಚಿ ಹಾಕಲಾಯಿತು.ಹೀಗಾಗಿ ಪುಡಾರಿಗಳ ಚಟುವಟಿಕೆಗೆ ಬ್ರೇಕ್ ಬೀಳುವ ಬದಲು ಮತ್ತಷ್ಟು ಕುಮ್ಮಕ್ಕು ಕೊಟ್ಟಂತಾಯಿತು..

ಶಿರಾಗೇಟ್ ನ ಪುಟ್ಟಸ್ವಾಮಯ್ಯನಪಾಳ್ಯದಲ್ಲಿ ಮತ್ತೊಂದು ಹೆಣ ಬಿತ್ತು. ಈ ಪ್ರಕರಣದಲ್ಲಿ ಪ್ರಿಯ-ಪ್ರಿಯಕರ ಸೇರಿ ವ್ಯಕ್ತಿಯನ್ನು ಹತ್ಯೆಗೈದಿದ್ದರು.ಪೊಲೀಸರು ಇಲ್ಲೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇದೀಗ ಊರುಕೆರೆ ಯಲ್ಲಿ ಲಾಂಗುಗಳು ರುದ್ರನರ್ತನಗೈದಿವೆ. ಐದಾರು ಮಂದಿ ಹಾಡಹಗಲೇ ಸಿನಿಮೀಯ ಮಾದರಿಯಲ್ಲಿ ಕೈಯಲ್ಲಿ ಲಾಂಗುಗಳನ್ನು ಹಿಡಿದ ರೌಡಿಗಳು ಪ್ರಶ್ನಿಸಿದರೆಂಬ ಕಾರಣಕ್ಕೆ ಮನಬಂದಂತೆ ದಾಳಿ ಮಾಡಿದ್ದಾರೆ. ಕೃಷ್ಣಪ್ಪ ಎಂಬ ರೌಡಿಶೀಟರ್ ಕಾರನ್ನು ಹಿಂದಕ್ಕೆ ತೆಗೆಯುವಾಗ ರಾಜಣ್ಣನಿಗೆ ಗುದ್ದಿದೆ. ರಾಜಣ್ಣ ಇದನ್ನು ಪ್ರಶ್ನಿಸಿದ್ದಾರೆ. ಆಗ ಕೃಷ್ಣಪ್ಪ ಮತ್ತು ಆತನ ರೌಡಿಪಡೆ ರಾಜಣ್ಣ ಮತ್ತು ಆತನ ಜೊತೆಯಲ್ಲಿದ್ದ, ಸುನಿಲ್, ಪುಟ್ಟನರಸಮ್ಮ ಅವರ ಮೇಲೆ ಲಾಂಗುಗಳಿಂದ ಅಟ್ಟಾಡಿಸಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದೆ.

ಹಲವು ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ರಾಜಣ್ಣ, ಜಗೀಧಶ್, ಮಂಜುನಾಥ್, ಪುರುಷೋತ್ತಮ್ ರೌಡಿಶೀಟರ್ ಆಗಿದ್ದಾರೆ. ಈ ರೌಡಿಶೀಟರ್ ಗಳೊಂದಿಗೆ ಗುರುತಿಸಿಕೊಂಡಿರುವ ಅಕ್ಷಯ್ ಮತ್ತು ರಘು ಕೂಡ ಈ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರೌಡಿ ಗುಂಪಿನ ದಾಳಿಗೆ ಒಳಗಾಗಿರುವ ರಾಜಣ್ಣ, ಪುಟ್ಟನರಸಮ್ಮ, ಸುನಿಲ್ ತೀವ್ರ ಗಾಯಗೊಂಡು ತುಮಕೂರು ಜಿಲ್ಲಾಸ್ಪತ್ರೆ ಸೇರಿದ್ದಾರೆ. ರೌಡಿಶೀಟರ್ ಗಳ ಕೃತ್ಯವನ್ನು ನೋಡಿದ ಊರುಕೆರೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹಾಡಹಗಲೇ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ಜಿಲ್ಲಾ ಪೊಲೀಸ್ ಹಿಂದೆ ಬಿದ್ದಿದೆ ಎಂಬ ಆರೋಪಗಳು ವ್ಯಾಪಕವಾಗಿವೆ.

ತುಮಕೂರು ನಗರ ಮತ್ತು ಹೊರವಲಯದಲ್ಲಿ ಕ್ರೈಂ ಹೆಚ್ಚುತ್ತಿವೆ. ನಗರದ ನಾಲ್ಕು ದಿಕ್ಕಿಗೂ ಪೊಲೀಸ್ ಠಾಣೆಗಳು ಇವೆ. ಆದರೆ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿವೆ. ಹಿಂದಿನಿಂದಲೂ ಬೆಂಗಳೂರು ರೌಡಿಗಳ ಸಂಪರ್ಕವನ್ನು ಹೊಂದಿರುವ ತುಮಕೂರು ನಗರ ಬೆಳೆದಂತೆ ರೌಡಿಗಳ ಹಾವಳಿಯೂ ಮೇಲ್ಮುಖವಾಗಿ ನುಗ್ಗುತ್ತಿದೆ. ರೌಡಿ ಪಡೆಗಳು ಕಂಡಂತೆಯೂ ಕಾಣದಂತೆಯೂ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುತ್ತಿವೆ. ತುಮಕೂರು ಪೊಲೀಸರು ರೌಡಿ ಆರೋಪಿಗಳು ತಪ್ಪಿಸಿಕೊಳ್ಳುವಾಗ ಗುಂಡು ಹಾರಿಸಿದರೂ ಅದಕ್ಕೆ ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ. ಪರೇಡ್ ನಡೆಸುವುದರಿಂದ ಮತ್ತೆ ಅವರನ್ನು ಎಚ್ಚರಿಸುವುದರಿಂದ ಪಾಠ ಕಲಿಯುವುದಿಲ್ಲ. ಬದಲಿಗೆ ‘ಬಲಿತು’ಕೊಳ್ಳುತ್ತಾರೆ ಎಂಬ ಸತ್ಯ ಪೊಲೀಸರಿಗೆ ಅರ್ಥವಾದರೆ ಒಳ್ಳೆಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...