Homeಮುಖಪುಟಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ ರೌಡಿ: ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮ ಎಂದ ಕಾಂಗ್ರೆಸ್

ಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ ರೌಡಿ: ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮ ಎಂದ ಕಾಂಗ್ರೆಸ್

- Advertisement -
- Advertisement -

ಹಫ್ತಾ ಕೊಡಲಿಲ್ಲ ಎಂಬ ಕಾರಣಕ್ಕೆ ಮೀನು ವ್ಯಾಪಾರಿಯ ಮೇಲೆ ರೌಡಿಯೊಬ್ಬ ಮಚ್ಚು ಬೀಸಿರುವ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈಭೀಮ್ ನಗರದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ವ್ಯಾಪಾರಿಯು ಕೂದಲೆಳೆ ಅಂತರದಲ್ಲಿ ಮಚ್ಚೇಟಿನಿಂದ ಪಾರಾಗಿರುವುದು ಸಿಸಿಕ್ಯಾಮರದಲ್ಲಿ ದಾಖಲಾಗಿದೆ.

ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬ ಬಾಣಸವಾಡಿಯಲ್ಲಿ ಮೀರು ಮಾರಾಟ ಅಂಗಡಿ ನಡೆಸುತ್ತಿದ್ದರು. ಅಲ್ಲಿಗೆ ಬಂದ ರೌಡಿಯೊಬ್ಬ ಹಫ್ತಾ ಕೊಡಲಿಲ್ಲ ಎಂದು ಓಡಿಸಿಕೊಂಡು ಬಂದು ಮಚ್ಚು ಬೀಸಿದ್ದಾರೆ. ವ್ಯಾಪಾರಿ ತಪ್ಪಿಸಿಕೊಂಡು ಅಂಗಡಿಯೊಳಗೆ ಪ್ರವೇಶಿಸಿದ್ದಾರೆ. ಅಷ್ಟರಲ್ಲಿ ಜನ ಸೇರಿದ್ದರಿಂದ ರೌಡಿ ಅಲ್ಲಿಂದ ವಾಪಸ್ ತೆರಳಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

“ರೌಡಿಗಳನ್ನ ಮುದ್ದಿಸುವ ಬಿಜೆಪಿ ಸರ್ಕಾರದಿಂದಾಗಿ ಬೆಂಗಳೂರು ಐಟಿ ಸಿಟಿಯಿಂದ ಕ್ರೈಮ್ ಸಿಟಿಯಾಗುತ್ತಿದೆ. ಬಾಣಸವಾಡಿಯಲ್ಲಿ ಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ್ದಾರೆ ರೌಡಿಗಳು, ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮವಲ್ಲವೇ ಬಿಜೆಪಿ ಸರ್ಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕೈಯ್ಯಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಕೆಲಸಕ್ಕೆ ಬಾರದ ಕಳ್ಳೆಪುರಿಯಂತಾಗಿದೆ!” ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.

ಈ ಭಯಾನಕ ಘಟನೆಯ ಸಿಸಿ ಕ್ಯಾಮರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಬಿಜೆಪಿ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ರೌಡಿಗಳನ್ನು ಮಟ್ಟ ಹಾಕುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

ಆ ಪುಡಿ ರೌಡಿ ಬೀಸಿದ ಮಚ್ಚು ಆ ಬಡಪಾಯಿಯ ಕತ್ತಿಗೆ ಬಿದ್ದಿದ್ದರೆ ಇನ್ನೊಂದು ಮನೆಯ ದೀಪ ಆರುತ್ತಿತ್ತು.
ಸಮಾಜ ಘಾತುಕ ಕೆಲಸ ಮಾಡಿದ ರೌಡಿಗಳ ಕೇಸ್ ಗಳನ್ನು ವಾಪಾಸ್ ಪಡೆದದ್ದು ಒಂದೆಡೆಯಾದರೆ, ರೌಡಿ ಶೀಟರ್ ಗಳಿಗೆ ರೆಡ್ ಕಾರ್ಪೆಟ್ ಹಾಕಿ #ಬಿಜೆಪಿಗೆ ಕರೆ ತಂದದ್ದು ಮತ್ತೊಂದೆಡೆ. ಇದರ ಜೊತೆ ಆಡಳಿತ ಪಕ್ಷದ ಸಚಿವರು, ಶಾಸಕರುಗಳು ರೌಡಿಗಳ ಪರ ಓಪನ್ನಾಗಿ ಬ್ಯಾಟಿಂಗ್‌ ಮಾಡ್ತಿರೋದು ಈ ರೀತಿಯ ಪುಡಿರೌಡಿಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ ಎನ್ನಬಹುದು ಎಂದು ಗಣೇಶ್ ಎಂಬುವವರು ಪ್ರತಿಕ್ರಿಯಿಸಿದ್ದಾರೆ.

ಉಗ್ರರನ್ನೇ ಬಿಡದ ಮೋದಿಗೆ ಹೆದರಿ ರೌಡಿಗಳು ಮನ ಪರಿವರ್ತನೆಯಾಗಿ ಸಮಾಜ ಸೇವೆಗೆ ಮರಳಿರುವ ಅಮೋಘ ದೃಶ್ಯ. ಮತಾಪು ಸಿಂಹನ ಅವಗಾಹನೆಗೆ ಈ ಪಟ ಎಂದು ಲೇಖಕ ಯೋಗೇಶ್ ಮಾಸ್ಟರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮಂಡ್ಯ: ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...