Homeಕರ್ನಾಟಕರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಪೊಲೀಸ್ ತನಿಖೆಯಲ್ಲಿ ಸಂಪೂರ್ಣ ನಂಬಿಕೆಯಿದೆ: ಸಚಿವ ದಿನೇಶ್...

ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಪೊಲೀಸ್ ತನಿಖೆಯಲ್ಲಿ ಸಂಪೂರ್ಣ ನಂಬಿಕೆಯಿದೆ: ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ರೌಡಿ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆ ನಡೆಸುತ್ತಿರುವ ನಮ್ಮ ಪೊಲೀಸರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರಕರಣವನ್ನು NIA ಮತ್ತು CBI ಗೆ ಹಸ್ತಾಂತರಿಸಬೇಕೆಂದು ಬಿಜೆಪಿಯ ಬೇಡಿಕೆಯನ್ನು ”ರಾಜಕೀಯ ದುರುದ್ದೇಶ” ಎಂದು ಅವರು ಹೇಳಿದ್ದಾರೆ. ರೌಡಿ ಸುಹಾಸ್ ಶೆಟ್ಟಿ ಹತ್ಯೆ

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಮಗೆ ನಮ್ಮ ಪೊಲೀಸರ ಮೇಲೆ ಸಂಪೂರ್ಣ ನಂಬಿಕೆ ಇದೆ. ಅದು PFI ಆಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಅದು ನಮಗೆ ಮುಖ್ಯವಲ್ಲ. ಸ್ಥಳೀಯ ಸಂಸದರು ರಾಜಕೀಯದಲ್ಲಿ ತೊಡಗಿಸಿಕೊಳ್ಳುವ ಬದಲು ಒಮ್ಮೆಯಾದರೂ ನಮ್ಮ ಪೊಲೀಸರನ್ನು ಹೊಗಳಿದ್ದಾರೆಯೇ?” ಎಂದು ಅವರು ಕೇಳಿದ್ದಾರೆ.

ಪೊಲೀಸ್ ಸಿಬ್ಬಂದಿ ರಾತ್ರಿಯ ವೇಳೆ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳನ್ನು ಮುಚ್ಚುವಂತೆ ಹೇಳಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಮುನ್ನೆಚ್ಚರಿಕೆ ಕ್ರಮವಾಗಿ, ಪೊಲೀಸರು ಕೆಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ” ಎಂದು ಅದನ್ನು ಸಮರ್ಥಿಸಿಕೊಂಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಒಬ್ಬರ ನೇಮಕದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಸುಹಾಸ್ ಶೆಟ್ಟಿ ರೌಡಿಶೀಟರ್ ಆಗಿರುವ ಪ್ರಕರಣ ಬೇರೆ ವಿಷಯ; ಇದು ಬೇರೆ ವಿಷಯ. ಹರೀಶ್ ಇಂಜಾಡಿ ಮಾಜಿ ರೌಡಿಶೀಟರ್ ಆಗಿದ್ದರು. ಇದು ಸುಧಾರಣೆಯ ಪ್ರಕರಣವೂ ಇರಬಹುದು. ನಾವು ಅವರನ್ನು ಯಾವಾಗಲೂ ರೌಡಿಶೀಟರ್ ಎಂಬ ದೃಷ್ಟಿಕೋನದಿಂದ ಶಾಶ್ವತವಾಗಿ ನೋಡಬೇಕೇ? ಎಲ್ಲಾ ರೌಡಿಶೀಟರ್‌ಗಳನ್ನು ನಾವು ಎಂದಿಗೂ ಸುಧಾರಣೆಯಾಗಲಾರರು ಎಂದು ಹೇಳಲು ಸಾಧ್ಯವೆ?” ಎಂದು ಕೇಳಿದ್ದಾರೆ.

“ಯಾರ ಮೇಲೆಯಾದರೂ ಶಾಶ್ವತವಾಗಿ ರೌಡಿಶೀಟರ್ ಎಂದು ಹಣೆಪಟ್ಟಿ ಕಟ್ಟುವುದು ಸರಿಯಲ್ಲ. ಆಯ್ಕೆ ಪ್ರಕ್ರಿಯೆಯ ಬಗ್ಗೆ ನನಗೂ ಆಕ್ಷೇಪಣೆಗಳಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಹುದ್ದೆಗೆ ಚುನಾವಣೆಯ ವಿಧಾನ ಮತ್ತು ಆಯ್ಕೆ ಪ್ರಕ್ರಿಯೆಯ ಬಗ್ಗೆ ನನಗೆ ತೃಪ್ತಿ ಇಲ್ಲ. ಭವಿಷ್ಯದಲ್ಲಿ ನಾವು ಈ ವಿಷಯವನ್ನು ಪರಿಶೀಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ರೌಡಿ ಸುಹಾಸ್ ಶೆಟ್ಟಿ ಹತ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ಮಂಗಳೂರು ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಿಂದ ಆರು ಸಿಬ್ಬಂದಿ ರಕ್ಷಿಸಿದ ಭಾರತೀಯ ಕರಾವಳಿ ರಕ್ಷಣಾ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...