Homeಅಂತರಾಷ್ಟ್ರೀಯದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು 'ಟ್ರಂಪ್ ಗೋಲ್ಡ್ ಕಾರ್ಡ್'

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

- Advertisement -
- Advertisement -

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ ‘ಟ್ರಂಪ್ ಗೋಲ್ಡ್ ಕಾರ್ಡ್’ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ.

‘ಟ್ರಂಪ್ ಗೋಲ್ಡ್ ಕಾರ್ಡ್’ ಅನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ EB-5 ವೀಸಾ ಕಾರ್ಯಕ್ರಮಕ್ಕೆ ಬದಲಾಗಿ ಪರಿಚಯಿಸಲಾಗಿದೆ. ಕಳೆದ ವರ್ಷ 14,000 EB-5 ವೀಸಾಗಳನ್ನು ನೀಡಲಾಗಿದೆ ಎಂದು EB-5ನ ವ್ಯಾಪಾರ ಸಂಘವಾದ ಇನ್‌ವೆಸ್ಟ್ ಇನ್‌ ದಿ ಯುಎಸ್‌ಎ ತಿಳಿಸಿದೆ.

ಈ ವರ್ಷದ ಜೂನ್‌ನಲ್ಲಿ ಯುಎಸ್‌ ವಾಣಿಜ್ಯ ಇಲಾಖೆಯು trumpcard.gov ವೆಬ್‌ಸೈಟ್ ಪ್ರಾರಂಭಿಸಿತ್ತು. ಈ ಮೂಲಕ ಅರ್ಜಿದಾರರು ತಮ್ಮ ಹೆಸರು, ಪ್ರದೇಶ ಮತ್ತು ಇಮೇಲ್ ವಿಳಾಸವನ್ನು ಸಲ್ಲಿಸಲು ಅವಕಾಶ ನೀಡಿತ್ತು. ವೆಬ್‌ಸೈಟ್‌ ಅಧಿಕೃತವಾಗಿ ನೋಂದಣಿಗೆ ತೆರೆದಾಗ ತಿಳಿಸುವುದಾಗಿ ಹೇಳಿತ್ತು. ಈ ವಾರ ವೆಬ್‌ಸೈಟ್ ಅನ್ನು ಅಪ್‌ಡೇಟ್ ಮಾಡಲಾಗಿದೆ. ಈಗ ಕೇವಲ ನೋಂದಣಿ ಮಾಡಿಕೊಳ್ಳುವುದು ಮಾತ್ರವಲ್ಲ, ನೇರವಾಗಿ ಪೂರ್ತಿ ಅರ್ಜಿ ಸಲ್ಲಿಸುವ ಸೌಲಭ್ಯವೂ ತೆರೆಯಲಾಗಿದೆ.

ವೆಬ್‌ಸೈಟ್‌ನಲ್ಲಿ ಗೋಲ್ಡ್ ಕಾರ್ಡ್ ಪೋಟೋ ಚಿನ್ನದ ಬಣ್ಣದಲ್ಲಿದೆ. ಅದರದಲ್ಲಿ ‘ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ’ ಎಂದು ಬರೆಯಲಾಗಿದೆ. ಟ್ರಂಪ್ ಫೋಟೋ, ಸಹಿ, ಸ್ಟಾಚ್ಯೂ ಆಫ್ ಲಿಬರ್ಟಿ, ಅಮೆರಿಕದ ರಾಷ್ಟ್ರ ಧ್ವಜ ಮತ್ತು ಹದ್ದಿನ ಚಿತ್ರವಿದೆ.

ಟ್ರಂಪ್ ಈ ವರ್ಷದ ಫೆಬ್ರವರಿಯಲ್ಲಿ ಈ ಯೋಜನೆಯನ್ನು ಮೊದಲು ಘೋಷಿಸಿದ್ದರು. ನಂತರ ಏಪ್ರಿಲ್‌ನಲ್ಲಿ, ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರಿಗೆ ತಮ್ಮ ಫೋಟೋ ಇರುವ ಚಿನ್ನದ ಬಣ್ಣದ ಕಾರ್ಡ್‌ನ ಮಾದರಿಯನ್ನು ತೋರಿಸಿದ್ದರು.

ಏನಿದು EB-5 ವೀಸಾ?

ಉದ್ಯೋಗ ಆಧಾರಿತ ವೀಸಾ ವ್ಯವಸ್ಥೆಯ ಭಾಗವಾಗಿರುವ EB-5 ಕಾರ್ಯಕ್ರಮವನ್ನು 1990ರಲ್ಲಿ ಅಮೆರಿಕ ಕಾಂಗ್ರೆಸ್ ರಚಿಸಿತು. ಇದನ್ನು ಯುಎಸ್‌ ಪೌರತ್ವ ಮತ್ತು ವಲಸೆ ಸೇವೆಗಳು (USCIS) ನಿರ್ವಹಿಸುತ್ತದೆ.

ಇದು ಅಮೆರಿಕದ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ವಿದೇಶಿಯರಿಗೆ ಶಾಶ್ವತ ನಿವಾಸ (ಗ್ರೀನ್ ಕಾರ್ಡ್) ನೀಡುತ್ತದೆ. ಹೂಡಿಕೆದಾರರು ಕನಿಷ್ಠ 1.05 ಮಿಲಿಯನ್ ಡಾಲರ್ (ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ 800,000 ಡಾಲರ್) ಹೂಡಿಕೆ ಮಾಡಬೇಕು ಮತ್ತು ಅಮೆರಿಕನ್ನರಿಗೆ ಕನಿಷ್ಠ 10 ಉದ್ಯೋಗಗಳನ್ನು ಸೃಷ್ಟಿಸಬೇಕು.

ಈ ಕಾರ್ಯಕ್ರಮದಡಿಯಲ್ಲಿ, ಹೂಡಿಕೆದಾರರು (ಮತ್ತು ಅವರ ಸಂಗಾತಿಗಳು ಮತ್ತು 21 ವರ್ಷದೊಳಗಿನ ಅವಿವಾಹಿತ ಮಕ್ಕಳು) ಅಮೆರಿಕದಲ್ಲಿ ವಾಣಿಜ್ಯ ಉದ್ಯಮದಲ್ಲಿ ಅಗತ್ಯವಾದ ಹೂಡಿಕೆ ಮಾಡಿದರೆ ಅಥವಾ ಅರ್ಹ ಅಮೆರಿಕನ್ನರಿಗೆ 10 ಶಾಶ್ವತ ಪೂರ್ಣ ಸಮಯದ ಉದ್ಯೋಗ ನೀಡುವುದಾದರೆ ಕಾನೂನುಬದ್ಧ ಶಾಶ್ವತ ನಿವಾಸಕ್ಕೆ (ಗ್ರೀನ್ ಕಾರ್ಡ್ ಹೊಂದಿರುವವರಾಗಲು) ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಟ್ರಂಪ್ ಗೋಲ್ಡ್ ಕಾರ್ಡ್ ಎಂದರೇನು?

ಟ್ರಂಪ್ ಗೋಲ್ಡ್ ಕಾರ್ಡ್ ವೀಸಾ ಕಾರ್ಯಕ್ರಮವು ವಿದೇಶಿಯರಿಗೆ ಅಮೆರಿಕದಲ್ಲಿ ನಿವಾಸ ಮತ್ತು ಕೆಲಸದ ಹಕ್ಕುಗಳನ್ನು ನೀಡುತ್ತದೆ. ಅಲ್ಲದೆ, ಆಡಳಿತದ ತೊಂದರೆಗಳನ್ನು ಎದುರಿಸದೆ ಪೌರತ್ವವನ್ನು ಪಡೆಯುವ ಮಾರ್ಗವನ್ನು ಒದಗಿಸುತ್ತದೆ.

ವೆಬ್‌ಸೈಟ್ ಪ್ರಕಾರ, ಅನುಮೋದಿತ ಅರ್ಜಿದಾರರು EB-1 ಅಥವಾ EB-2 ವೀಸಾ ಹೊಂದಿರುವವರಾಗಿ ಕಾನೂನು ಸ್ಥಾನಮಾನವನ್ನು ಪಡೆಯುತ್ತಾರೆ. ಈ ವಿಭಾಗಗಳು ಆದ್ಯತೆಯ ಉನ್ನತ ಶ್ರೇಣಿಯ ವರ್ಗಗಳಾಗಿದ್ದು, ಅಸಾಧಾರಣ ಸಾಮರ್ಥ್ಯ ಮತ್ತು ಅರ್ಹತೆ ಹೊಂದಿರುವ ವ್ಯಕ್ತಿಗಳನ್ನು ಗುರುತಿಸುತ್ತವೆ.

ಗೋಲ್ಡ್ ಕಾರ್ಡ್‌ಗೆ ಯಾರು ಅರ್ಹರು?

ಟ್ರಂಪ್ ಗೋಲ್ಡ್ ಕಾರ್ಡ್ ತೆಗೆದುಕೊಳ್ಳಲು 3 ಮುಖ್ಯ ಷರತ್ತುಗಳನ್ನು ಪೂರೈಸಬೇಕು.

  1. ಅಮೆರಿಕದಲ್ಲಿ ಗ್ರೀನ್ ಕಾರ್ಡ್ ಪಡೆಯಲು ಅರ್ಹರಾಗಿರಬೇಕು (ಅಂದರೆ ಕ್ರಿಮಿನಲ್ ರೆಕಾರ್ಡ್, ಭಯೋತ್ಪಾದನೆ ಸಂಬಂಧ ಇರಬಾರದು)
  2. ದೇಶದ ಒಳಗೆ ಬಿಡಲು ಅಮೆರಿಕ ಸರ್ಕಾರದ ಒಪ್ಪಿಗೆ ಇರಬೇಕು (ಯಾವುದೇ ದೊಡ್ಡ ತಪ್ಪು ಮಾಡಿರಬಾರದು, ಗಂಭೀರ ರೋಗಗಳಿರಬಾರದು)
  3. ಅರ್ಜಿ ಸಲ್ಲಿಸುವಾಗ ಅರ್ಜಿದಾರರ ದೇಶದವರಿಗೆ ವೀಸಾ ಖಾಲಿ ಇರಬೇಕು

ಕೆಲವು ದೇಶದ (ಉದಾಹರಣೆಗೆ : ಭಾರತ, ಚೀನಾ, ಮೆಕ್ಸಿಕೋ) ಬಹಳ ಜನರು ಈಗಾಗಲೇ ಅರ್ಜಿ ಹಾಕಿರುತ್ತಾರೆ. ಅಂತಹ ಸಂದರ್ಭದಲ್ಲಿ ನೀವು 10 ಲಕ್ಷ ಡಾಲರ್ ಕೊಟ್ಟರೂ ಕೂಡ ಗೋಲ್ಡ್ ಕಾರ್ಡ್ ಪಡೆಯಲು 1 ವರ್ಷ ಅಥವಾ ಅದಕ್ಕಿಂತ ಹೆಚ್ಚು ಸಮಯ ಕಾಯಬೇಕಾಗುತ್ತದೆ.

ಟ್ರಂಪ್ ಗೋಲ್ಡ್ ಕಾರ್ಡ್ ಅಡಿ ಬರುವ ವಿವಿಧ ವೀಸಾಗಳು ಯಾವುವು?

1.ಟ್ರಂಪ್ ಗೋಲ್ಡ್ ಕಾರ್ಡ್

ಟ್ರಂಪ್ ಗೋಲ್ಡ್ ಕಾರ್ಡ್ ಬೇಕಾದರೆ ಮೊದಲು ಯುಎಸ್‌ ಹೋಮ್‌ಲ್ಯಾಂಡ್ ಸೆಕ್ಯೂರಿಟಿ ಇಲಾಖೆಗೆ (ಡಿಹೆಚ್ಎಸ್‌) 15,000 ಡಾಲರ್ (ಸುಮಾರು 12.5 ಲಕ್ಷ ರೂ.) ಪ್ರಾಸೆಸಿಂಗ್ ಶುಲ್ಕ ಕಟ್ಟಬೇಕು. ಈ ಹಣ ಮರುಪಾವತಿ ಆಗುವುದಿಲ್ಲ. ಏಕೆಂದರೆ, ಇದನ್ನು ಬ್ಯಾಕ್‌ಗ್ರೌಂಡ್ ಚೆಕ್ ಮತ್ತು ಆರಂಭದ ಪರಿಶೀಲನೆಗೆ ಬಳಸುತ್ತಾರೆ. ಈ ಶುಲ್ಕ ಕಟ್ಟಿದ ಕೂಡಲೇ ಅರ್ಜಿ ಅನುಮೋದನೆ ಮತ್ತು ವೀಸಾ ನೀಡುವ ಪ್ರಕ್ರಿಯೆ ತ್ವರಿತಗೊಳ್ಳುತ್ತದೆ. ಆದರೆ, ಅರ್ಜಿ ಹಾಕಿದವರು ಎಲ್ಲಾ ಅಗತ್ಯ ದಾಖಲೆಗಳನ್ನು ಮತ್ತು ಇತರ ಶುಲ್ಕಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಿರಬೇಕು.

ಗೋಲ್ಡ್ ಕಾರ್ಡ್‌ ಪಡೆಯಲು ಅರ್ಜಿ ಹಾಕಿದವರು ಕೊಡುವ 1 ಮಿಲಿಯನ್ ಡಾಲರ್ (8.5 ಕೋಟಿ ರೂ.) ಹಣವನ್ನು ‘ಗಿಫ್ಟ್’ ಅಥವಾ ನೀವು ಅಮೆರಿಕಕ್ಕೆ ದೊಡ್ಡ ಪ್ರಯೋಜನ ಕೊಡುತ್ತೀರಿ ಎಂಬ ಸಾಕ್ಷ್ಯ ಎಂದು ಪರಿಗಣಿಸುವುದಾಗಿ ವೆಬ್‌ಸೈಟ್‌ ಹೇಳುತ್ತದೆ. ಅಂದರೆ, ಅರ್ಜಿದಾರರು ಕೊಡುವ ಹಣ ನಿಜವಾಗಿಯೂ ‘ಹೂಡಿಕೆ’ ಅಲ್ಲ, ಬದಲಿಗೆ ಅದು ಸರ್ಕಾರಕ್ಕೆ ನೇರ ದಾನ ಕೊಟ್ಟಂತೆ.

ಇವಿಷ್ಟೇ ಅಲ್ಲದೆ, ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್‌ಗೆ ಹೆಚ್ಚುವರಿ ಶುಲ್ಕವನ್ನೂ ಕಟ್ಟಬೇಕಾಗಬಹುದು (ಉದಾ: ಮೆಡಿಕಲ್ ಚೆಕ್‌ಅಪ್, ಇಂಟರ್ವ್ಯೂ ಫೀಗಳು). ಇದು ಅರ್ಜಿದಾರರ ದೇಶ ಮತ್ತು ಸಂದರ್ಭದ ಮೇಲೆ ಅವಲಂಬಿತವಾಗಿರುತ್ತದೆ.

2. ಟ್ರಂಪ್ ಕಾರ್ಪೊರೇಟ್ ಗೋಲ್ಡ್ ಕಾರ್ಡ್

ಈ ಕಾರ್ಪೊರೇಟ್ ಗೋಲ್ಡ್ ಕಾರ್ಡ್ ಕಂಪನಿ (ಸ್ಪಾನ್ಸರ್) ತನ್ನ ಒಬ್ಬ ಅಥವಾ ಹೆಚ್ಚು ಉದ್ಯೋಗಿಗಳಿಗೆ ನೀಡಬಹುದು. ಆದರೆ, ಕಂಪನಿ ಯುಎಸ್‌ ಹೋಮ್‌ಲ್ಯಾಂಡ್ ಸೆಕ್ಯೂರಿಟಿ (ಡಿಹೆಚ್‌ಎಸ್‌)ಗೆ 15,000 ಡಾಲರ್ (ಸುಮಾರು 12.5 ಲಕ್ಷ ರೂ.) ಕಟ್ಟಬೇಕು. ಇದು ಮರುಪಾವತಿ ಆಗದು. ಇದನ್ನು ಉದ್ಯೋಗಿಯ ಬ್ಯಾಕ್‌ಗ್ರೌಂಡ್ ಚೆಕ್‌ಗೆ ಬಳಸುತ್ತಾರೆ.

ಕಂಪನಿ 2 ಮಿಲಿಯನ್ ಡಾಲರ್ (ಸುಮಾರು 17 ಕೋಟಿ ರೂ.) ‘ಗಿಫ್ಟ್’ ಹಣವನ್ನು ಕೊಡಬೇಕು. ಇದು ಅಮೆರಿಕ ಸರ್ಕಾರಕ್ಕೆ ನೇರವಾಗಿ ಹೋಗುತ್ತದೆ, ಉದ್ಯೋಗಿಗಳಿಗೆ ಗ್ರೀನ್ ಕಾರ್ಡ್ ಪಡೆಯಲು ಸಹಾಯ ಮಾಡುತ್ತದೆ.

ಕಂಪನಿ ಒಬ್ಬ ಉದ್ಯೋಗಿಯ ಸ್ಪಾನ್ಸರ್‌ಷಿಪ್ ನಿಲ್ಲಿಸಿ, ಅವರಿಗೆ ಕೊಟ್ಟ 2 ಮಿಲಿಯನ್ ಡಾಲರ್ ಗಿಫ್ಟ್ ಅನ್ನು ಹೊಸ ಉದ್ಯೋಗಿಯನ್ನು ಸ್ಪಾನ್ಸರ್ ಮಾಡಲು ಬಳಸಬಹುದು.

ವಾರ್ಷಿಕವಾಗಿ 2 ಮಿಲಿಯನ್‌ನ 1 ಶೇಕಡ (ಸುಮಾರು 17 ಲಕ್ಷ ರೂ.) ಸರ್ಕಾರಕ್ಕೆ ಕಟ್ಟಬೇಕು. ಇದು ಕಾರ್ಡ್ ಚಾಲೂಕರಣೆಯನ್ನು ಕಾಪಾಡಲು. ಉದ್ಯೋಗಿ ಬದಲಾಯಿಸಿದರೆ ಅಥವಾ ಹೊಸ ಬ್ಯಾಕ್‌ಗ್ರೌಂಡ್ ಮಾಡಿದರೆ 2 ಮಿಲಿಯನ್‌ನ ಶೇಕಡ 5ರಷ್ಟು (ಸುಮಾರು 85 ಲಕ್ಷ ರೂ.) ಸರ್ಕಾರಕ್ಕೆ ಕಟ್ಟಬೇಕು.

3.ಟ್ರಂಪ್ ಪ್ಲಾಟಿನಂ ಕಾರ್ಡ್‌

ಈ ಕಾರ್ಡ್ ವಿದೇಶಿ ಆದಾಯದ ಮೇಲೆ ತೆರಿಗೆ ವಿಧಿಸದೆ ವ್ಯಕ್ತಿಗಳು ವರ್ಷಕ್ಕೆ 270 ದಿನಗಳವರೆಗೆ ಅಮೆರಿಕದಲ್ಲಿ ವಾಸಿಸಲು ಅನುವು ಮಾಡಿಕೊಡುತ್ತದೆ. ಇದು ಪ್ರಯಾಣ ವೀಸಾಗಳ ಅಗತ್ಯವನ್ನು ನಿವಾರಿಸುತ್ತದೆ.

ಈ ಪ್ಲಾಟಿನಂ ಕಾರ್ಯಕ್ರಮಕ್ಕೆ ಸರ್ಕಾರ ಈಗಾಗಲೇ ವೇಟ್‌ಲಿಸ್ಟ್ (ಕಾಯುವ ಪಟ್ಟಿ) ತಯಾರಿಸಿದೆ. ಇದು ಇನ್ನೂ ಆರಂಭವಾಗಿಲ್ಲ, ಹಾಗಾಗಿ ಆಸಕ್ತರನ್ನು ನೋಂದಾಯಿಸಿಕೊಳ್ಳುವುದಕ್ಕಾಗಿ ಈ ಪಟ್ಟಿ ಇದೆ.

ಪ್ಲಾಟಿನಂ ಕಾರ್ಡ್‌ಗೆ 5 ಮಿಲಿಯನ್ ಡಾಲರ್ (ಸುಮಾರು 42 ಕೋಟಿ ರೂ.) ಕೊಡುಗೆ ನೀಡಬೇಕು. ಇದು ಇನ್ನೂ ಈ ಮಟ್ಟದಲ್ಲೇ ಇರುತ್ತದೆ ಎಂಬ ಖಚಿತತೆ ಇಲ್ಲ. ಹಾಗಾಗಿ, ಈಗಲೇ ವೇಟ್‌ಲಿಸ್ಟ್‌ಗೆ ಸೇರಿಕೊಳ್ಳಿ ಎಂದು ಎಚ್ಚರಿಕೆ ನೀಡಲಾಗಿದೆ. ಅಂದರೆ, ಹಣದ ಮೊತ್ತ ಬದಲಾಗಬಹುದು (ಹೆಚ್ಚಾಗಬಹುದು).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...