HomeಮುಖಪುಟRPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

RPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

- Advertisement -
- Advertisement -

ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ 2016 (ಆರ್‌ಪಿಡಬ್ಲುಡಿ)ರಲ್ಲಿ ಸಣ್ಣಪುಟ್ಟ ಅಪರಾಧಗಳಿಗೆ ಶಿಕ್ಷೆ/ದಂಡ ವಿಧಿಸುವ ವಿಧಿ 89, 92 ಮತ್ತು 93ಕ್ಕೆ ತಿದ್ದುಪಡಿ ತಂದು ಅಂತಹ ಅಪರಾಧಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸುವ ಕುರಿತು ತಮ್ಮ ಚಿಂತನೆ/ ಸಲಹೆ ಸೂಚನೆ/ ಅಭಿಪ್ರಾಯಗಳನ್ನು ನೀಡುವಂತೆ ಕೋರಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶಕ ಕೆ.ವಿ.ಎಸ್. ರಾವ್ ಅವರು ಆಯ್ದ ಏಳು ಸರಕಾರೇತರ ಸಂಸ್ಥೆಗಳಿಗೆ (ಎನ್‍ಜಿಒ/ಡಿಪಿಒ) ಈ ವರ್ಷದ ಜೂನ್ ತಿಂಗಳಲ್ಲಿ ಪತ್ರ ಬರೆದಿದ್ದರು. ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸಿ ವ್ಯಾಪಾರೀ ಭಾವನೆಗಳನ್ನು ಸುಧಾರಿಸಿ, ಕೋರ್ಟು ಕಚೇರಿ ವ್ಯವಹಾರಗಳನ್ನು ಸರಾಗಗೊಳಿಸುವುದು ಈ ತಿದ್ದುಪಡಿಗಳ ಉದ್ದೇಶ ಎಂದು ಹೇಳಲಾಗಿತ್ತು.

ಇದರ ಹಿನ್ನೆಲೆಯನ್ನು 2020ರ ಜೂನ್ 10ರಂದು ಹಣಕಾಸು ಸಚಿವಾಲಯವು ಚೆಕ್ ಅಮಾನ್ಯ ಮತ್ತು ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸುವಂತೆ ಮಾಡಿದ ಪ್ರಸ್ತಾಪದೊಂದಿಗೆ ಗುರುತಿಸಬಹುದು.

ಹಣಕಾಸು ಸಚಿವಾಲಯದ ಪ್ರಕಾರ 19 ಆರ್ಥಿಕ ಕಾನೂನುಗಳಲ್ಲಿರುವ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸಿದರೆ, ಅದು ಕೋವಿಡ್-19 ಪಿಡುಗಿನ ಪರಿಣಾಮವಾಗಿ ತತ್ತರಿಸುತ್ತಿರುವ ಉದ್ಯಮಗಳಿಗೆ ಉಪಶಮನ ನೀಡಬಹುದು ಮತ್ತು ವ್ಯಾಪಾರವನ್ನು ಇನ್ನಷ್ಟು ಸುಲಭಗೊಳಿಸಿ, ವ್ಯಾಪಾರಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಬಹುದು ಎಂಬುದಾಗಿತ್ತು.

ಈ ಪ್ರಸ್ತಾವನೆಯ ಪ್ರಕಾರ “ಚಿಕ್ಕಪುಟ್ಟ ಅಪರಾಧ”ಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸುವ ಮೂಲಕ ಸರಕಾರವು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಯ ಮೂಲಸ್ವರೂಪವನ್ನೇ ಬದಲಿಸಲು ಹೊರಟಿತ್ತು. “ಇಂತಹ ಕ್ರಿಮಿನಲ್ ಅಪರಾಧೀಕರಣ ಹಿಂಜರಿಕೆಗೆ ಕಾರಣವಾಗುತ್ತದೆ ಮತ್ತು ವಿದೇಶಿ ಮತ್ತು ದೇಶೀಯ ಹೂಡಿಕೆಗಳ ಮೇಲೆ ಅಡ್ಡಪರಿಣಾಮ ಬೀರುವ ಪ್ರಮುಖ ಅಂಶಗಳು” ಎಂದು ಸರಕಾರ ಹೇಳಿತ್ತು. ವಿದೇಶಿಯರಾಗಲೀ, ಭಾರತೀಯರೇ ಆಗಿರಲಿ, ಯಾವುದೇ ಹೂಡಿಕೆದಾರರು ತಾವು ಉದ್ಯಮ ನಡೆಸಬಯಸುವ ಈ ನೆಲದ ಕಾನೂನುಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ಅವುಗಳನ್ನು ಅವರ ಹಿತಾಸಕ್ತಿಗಳಿಗೆ ಸರಿಹೊಂದುವಂತೆ ಬದಲಿಸಲಾಗುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಈ ಕಾಯಿದೆಯಲ್ಲಿರುವ ಕಾನೂನು ಪರಿಪಾಲನೆ ಕುರಿತ ಅಧಿಕಾರವನ್ನೇ ಇಲ್ಲವಾಗಿಸುವ ಉದ್ದೇಶಗಳನ್ನು ಹೊಂದಿವೆ.

ಆರ್‍ಪಿಡಬ್ಲ್ಯೂಡಿ ಕಾಯಿದೆಗೆ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಕಮೀಷನರ್ ಅಥವ ಸರಕಾರಿ ಕಮೀಷನರ್‍ಗೆ ಕಸ್ಟಡಿಯಲ್ಲಿ ಇದ್ದಿರಬಹುದಾದ ಅಪರಾಧಿಯನ್ನು ಬಿಡುಗಡೆಗೊಳಿಸುವ ಅಧಿಕಾರ ನೀಡುವ ಉದ್ದೇಶ ಹೊಂದಿವೆ.

ಇವು ವಿಧಿ 89 (ಇಲ್ಲಿರುವ ನಿಯಮ ಮತ್ತು ನಿಯಂತ್ರಣಗಳ ಉಲ್ಲಂಘನೆಗೆ ಶಿಕ್ಷೆ ವಿಧಿಸುವುದು); ವಿಧಿ 92 (ಎ) (ಯಾರೊಬ್ಬರೇ ಆಗಿರಲಿ ಯಾವುದೇ ವಿಕಲಚೇತನ ವ್ಯಕ್ತಿಯನ್ನು ಯಾವುದೇ ಸ್ಥಳದಲ್ಲಿ ಸಾರ್ವಜನಿಕವಾಗಿ ಬೇಕಂತಲೇ ಅವಮಾನ ಮಾಡುವುದು, ನಿಂದಿಸುವುದು ಅಥವಾ ಬೆದರಿಕೆ ಹಾಕುವುದು) ಮತ್ತು ವಿಧಿ 93 (ಮಾಹಿತಿ ನೀಡಲು ತಪ್ಪಿದಲ್ಲಿ ಶಿಕ್ಷೆ ವಿಧಿಸುವುದು) ಇತ್ಯಾದಿಗಳಿಗೆ ಸಂಬಂಧಿಸಿದೆ.

ಆದರೆ, ಕಡೆಗಣಿಸಲ್ಪಟ್ಟ ಸಮುದಾಯದ ಹಕ್ಕುಗಳನ್ನು ಪಡೆದುಕೊಳ್ಳಲು ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿ ಗೆಲುವು ಸಾಧಿಸಿರುವಾಗ, ವ್ಯಾಪಾರ ಮಾಡುವುದಕ್ಕೆ ಹೂಡಿಕೆದಾರರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ, ಉತ್ತಮ ವಾತಾವರಣ ನಿರ್ಮಾಣ ಮಾಡುವ ಸಲುವಾಗಿ ಆ ಹಕ್ಕುಗಳನ್ನು ಕಡೆಗಣಿಸಿ ಮೂಲೆಗೆ ತಳ್ಳಬೇಕು ಎಂದಾಗಬೇಕಿಲ್ಲ ಅಲ್ಲವೇ? ಆದರೆ, ದುರದೃಷ್ಟವಶಾತ್ ಸರಕಾರಕ್ಕೆ ಸಾಮಾನ್ಯ ಜನರ ಹಿತಾಸಕ್ತಿಗಳಿಗಿಂತ ವ್ಯಾಪಾರಿ, ಉದ್ಯಮಿಗಳ ಹಿತಾಸಕ್ತಿಗಳು ಹೆಚ್ಚು ಮುಖ್ಯವಾಗಿವೆ.

ಈ ಕಾನೂನುಗಳಲ್ಲಿರುವ ಶಿಕ್ಷೆಯ ಅವಕಾಶಗಳು ಕೇವಲ ಹಿಂಜರಿಕೆ ಉಂಟುಮಾಡುವಂತವುಗಳು ಅಲ್ಲ. ಸರಿಯಾಗಿ ಅನುಷ್ಟಾನ ಮಾಡಿದಲ್ಲಿ, ದೂರದೃಷ್ಟಿಯಿಂದ ನೋಡಿದಲ್ಲಿ ಕಾನೂನನ್ನು ಪಾಲಿಸುವ ಮತ್ತು ಎಲ್ಲರನ್ನೂ ಒಳಗೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಬಲ್ಲವು. ಅದಕ್ಕಿಂತ ಮಹತ್ವದ ವಿಷಯ ಎಂದರೆ, ಈ ಆರ್‍ಪಿಡಬ್ಲ್ಯೂಡಿ ಕಾಯಿದೆಯ ಅಡಿಯಲ್ಲಿ ದಾಖಲಾದ ಪ್ರಕರಣಗಳು ಅಥವಾ ಅವುಗಳಿಗೆ ಸಂಬಂಧಿಸಿ ಆದ ಶಿಕ್ಷೆ/ದಂಡಗಳ ಕುರಿತು ಅಂಕಿಅಂಶಗಳು ಇಲ್ಲವೇ ಇಲ್ಲ ಅನ್ನುವಷ್ಟು ಕಡಿಮೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಯಾವುದೇ ದತ್ತಾಂಶ ಇಲ್ಲದ ಸರಕಾರದ ವಿರುದ್ಧ ವಿಕಲಚೇತನ ವ್ಯಕ್ತಿಗಳು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಈ ಪ್ರಸ್ತಾಪಿತ ತಿದ್ದುಪಡಿಗಳ ಸಮರ್ಥನೆಗಾಗಿ ಸರಕಾರ ನೀಡಿದ ನಾಟಕೀಯ ನೆಪಗಳು ನಗೆಪಾಟಲಿಗೆ ಗುರಿಯಾದವು. ಕೊರೊನಾ ಪಿಡುಗು ಎಲ್ಲಾ ಕಡೆ ಹರಡಿರುವಾಗ ವಿಕಲಚೇತನ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಸಾಧ್ಯವಿಲ್ಲ. ಸುಮಾರು 125ರಷ್ಟು ವಿಕಲಚೇತನ ಹಕ್ಕುಗಳ, ನಾಗರಿಕ ಸಮಾಜ ಸಂಘಟನೆಗಳು ಮತ್ತು ಕಾರ್ಯಕರ್ತರು ಜಂಟಿಯಾಗಿ ಪತ್ರ ಬರೆದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ, 2016 ರನ್ನು ತೆಳುಗೊಳಿಸುವ ಅಥವಾ ಇಲ್ಲದಂತೆ ಮಾಡುವ ಉದ್ದೇಶ ಹೊಂದಿರುವ ಈ ತಿದ್ದುಪಡಿಗಳಿಗೆ ಬಲವಾದ ವಿರೋಧ ವ್ಯಕ್ತಪಡಿಸಿವೆ. ಸ್ಥಳೀಯವಾಗಿಯೂ ಈ ಕ್ರಮದ ವಿರುದ್ಧ ಪ್ರತಿಭಟನೆಗಳು ನಡೆದಿವೆ.

ಈ ಕಾಯಿದೆಯ ಅಂಶಗಳು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಪೂರಕವಾಗಿದೆ ಎಂದು ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವ ಬೇರೆಬೇರೆ ಮೂಲಗಳು ಪ್ರತಿಸ್ಪಂದಿಸಿರುವಂತೆ ಈ ಕಾಯಿದೆಯ ಪರಿಣಾಮಕಾರಿ ಅನುಷ್ಟಾನ ಅಗತ್ಯ ಇದೆ ಎಂದು ವಿಕಲ ಚೇತನ ವ್ಯಕ್ತಿಗಳ ಸಬಲೀಕರಣ ಸಚಿವಾಲಯವೇ ಈಗ ಒಪ್ಪಿಕೊಂಡಿದೆ. “ಈ ಸಂಬಂಧವಾಗಿ ಹಲವು ವಲಯಗಳಿಂದ ಮೂಡಿರುವ ಭಾವನೆಗಳನ್ನು ಪರಿಗಣಿಸಿ, ಅಪರಾಧೀಕರಣವನ್ನು ದುರ್ಬಲಗೊಳಿಸುವ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂಬ ಅಭಿಪ್ರಾಯವನ್ನು ಇಲಾಖೆ ತಳೆದಿದೆ” ಎಂದು ಹೇಳಿಕೆ ಕೊಟ್ಟಿದ್ದು, ಆದುದರಿಂದ, ಈ ತಿದ್ದುಪಡಿಯನ್ನು ಮುಂದುವರಿಸದಿರುವ ನಿರ್ಧಾರವನ್ನು ಕೈಕೊಂಡಿದೆ. ವಿಕಲ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಗೆ ತಿದ್ದುಪಡಿ ತರುವ ಸರ್ಕಾರದ ಪ್ರತಿಗಾಮಿ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿರುವುದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡುವ ಹೋರಾಟಕ್ಕೆ ಸಂದ ಜಯವಾಗಿದೆ.

ಜಿ. ರವಿ, ವಿಕಲಚೇತನ ಹಕ್ಕುಗಳ ಚಳವಳಿಯಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರು


ಇದನ್ನು ಓದಿ: ಸ್ತ್ರೀಮತಿ- 2: ಲಾಕ್ – ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...