HomeಮುಖಪುಟRPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

RPWD Act : ವಿಕಲಚೇತನರ ಹಕ್ಕುಗಳ ಕಾಯಿದೆ ತಿದ್ದುಪಡಿ ವಿರುದ್ಧ ಸಂಘಟಿತ ಜಯ

- Advertisement -
- Advertisement -

ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ 2016 (ಆರ್‌ಪಿಡಬ್ಲುಡಿ)ರಲ್ಲಿ ಸಣ್ಣಪುಟ್ಟ ಅಪರಾಧಗಳಿಗೆ ಶಿಕ್ಷೆ/ದಂಡ ವಿಧಿಸುವ ವಿಧಿ 89, 92 ಮತ್ತು 93ಕ್ಕೆ ತಿದ್ದುಪಡಿ ತಂದು ಅಂತಹ ಅಪರಾಧಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸುವ ಕುರಿತು ತಮ್ಮ ಚಿಂತನೆ/ ಸಲಹೆ ಸೂಚನೆ/ ಅಭಿಪ್ರಾಯಗಳನ್ನು ನೀಡುವಂತೆ ಕೋರಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶಕ ಕೆ.ವಿ.ಎಸ್. ರಾವ್ ಅವರು ಆಯ್ದ ಏಳು ಸರಕಾರೇತರ ಸಂಸ್ಥೆಗಳಿಗೆ (ಎನ್‍ಜಿಒ/ಡಿಪಿಒ) ಈ ವರ್ಷದ ಜೂನ್ ತಿಂಗಳಲ್ಲಿ ಪತ್ರ ಬರೆದಿದ್ದರು. ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸಿ ವ್ಯಾಪಾರೀ ಭಾವನೆಗಳನ್ನು ಸುಧಾರಿಸಿ, ಕೋರ್ಟು ಕಚೇರಿ ವ್ಯವಹಾರಗಳನ್ನು ಸರಾಗಗೊಳಿಸುವುದು ಈ ತಿದ್ದುಪಡಿಗಳ ಉದ್ದೇಶ ಎಂದು ಹೇಳಲಾಗಿತ್ತು.

ಇದರ ಹಿನ್ನೆಲೆಯನ್ನು 2020ರ ಜೂನ್ 10ರಂದು ಹಣಕಾಸು ಸಚಿವಾಲಯವು ಚೆಕ್ ಅಮಾನ್ಯ ಮತ್ತು ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸುವಂತೆ ಮಾಡಿದ ಪ್ರಸ್ತಾಪದೊಂದಿಗೆ ಗುರುತಿಸಬಹುದು.

ಹಣಕಾಸು ಸಚಿವಾಲಯದ ಪ್ರಕಾರ 19 ಆರ್ಥಿಕ ಕಾನೂನುಗಳಲ್ಲಿರುವ ಚಿಕ್ಕಪುಟ್ಟ ಅಪರಾಧಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಹೊರತುಪಡಿಸಿದರೆ, ಅದು ಕೋವಿಡ್-19 ಪಿಡುಗಿನ ಪರಿಣಾಮವಾಗಿ ತತ್ತರಿಸುತ್ತಿರುವ ಉದ್ಯಮಗಳಿಗೆ ಉಪಶಮನ ನೀಡಬಹುದು ಮತ್ತು ವ್ಯಾಪಾರವನ್ನು ಇನ್ನಷ್ಟು ಸುಲಭಗೊಳಿಸಿ, ವ್ಯಾಪಾರಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಬಹುದು ಎಂಬುದಾಗಿತ್ತು.

ಈ ಪ್ರಸ್ತಾವನೆಯ ಪ್ರಕಾರ “ಚಿಕ್ಕಪುಟ್ಟ ಅಪರಾಧ”ಗಳನ್ನು ಕ್ರಿಮಿನಲ್ ಅಪರಾಧೀಕರಣದಿಂದ ಮುಕ್ತಗೊಳಿಸುವ ಮೂಲಕ ಸರಕಾರವು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಯ ಮೂಲಸ್ವರೂಪವನ್ನೇ ಬದಲಿಸಲು ಹೊರಟಿತ್ತು. “ಇಂತಹ ಕ್ರಿಮಿನಲ್ ಅಪರಾಧೀಕರಣ ಹಿಂಜರಿಕೆಗೆ ಕಾರಣವಾಗುತ್ತದೆ ಮತ್ತು ವಿದೇಶಿ ಮತ್ತು ದೇಶೀಯ ಹೂಡಿಕೆಗಳ ಮೇಲೆ ಅಡ್ಡಪರಿಣಾಮ ಬೀರುವ ಪ್ರಮುಖ ಅಂಶಗಳು” ಎಂದು ಸರಕಾರ ಹೇಳಿತ್ತು. ವಿದೇಶಿಯರಾಗಲೀ, ಭಾರತೀಯರೇ ಆಗಿರಲಿ, ಯಾವುದೇ ಹೂಡಿಕೆದಾರರು ತಾವು ಉದ್ಯಮ ನಡೆಸಬಯಸುವ ಈ ನೆಲದ ಕಾನೂನುಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ. ಅವುಗಳನ್ನು ಅವರ ಹಿತಾಸಕ್ತಿಗಳಿಗೆ ಸರಿಹೊಂದುವಂತೆ ಬದಲಿಸಲಾಗುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಈ ಕಾಯಿದೆಯಲ್ಲಿರುವ ಕಾನೂನು ಪರಿಪಾಲನೆ ಕುರಿತ ಅಧಿಕಾರವನ್ನೇ ಇಲ್ಲವಾಗಿಸುವ ಉದ್ದೇಶಗಳನ್ನು ಹೊಂದಿವೆ.

ಆರ್‍ಪಿಡಬ್ಲ್ಯೂಡಿ ಕಾಯಿದೆಗೆ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಕಮೀಷನರ್ ಅಥವ ಸರಕಾರಿ ಕಮೀಷನರ್‍ಗೆ ಕಸ್ಟಡಿಯಲ್ಲಿ ಇದ್ದಿರಬಹುದಾದ ಅಪರಾಧಿಯನ್ನು ಬಿಡುಗಡೆಗೊಳಿಸುವ ಅಧಿಕಾರ ನೀಡುವ ಉದ್ದೇಶ ಹೊಂದಿವೆ.

ಇವು ವಿಧಿ 89 (ಇಲ್ಲಿರುವ ನಿಯಮ ಮತ್ತು ನಿಯಂತ್ರಣಗಳ ಉಲ್ಲಂಘನೆಗೆ ಶಿಕ್ಷೆ ವಿಧಿಸುವುದು); ವಿಧಿ 92 (ಎ) (ಯಾರೊಬ್ಬರೇ ಆಗಿರಲಿ ಯಾವುದೇ ವಿಕಲಚೇತನ ವ್ಯಕ್ತಿಯನ್ನು ಯಾವುದೇ ಸ್ಥಳದಲ್ಲಿ ಸಾರ್ವಜನಿಕವಾಗಿ ಬೇಕಂತಲೇ ಅವಮಾನ ಮಾಡುವುದು, ನಿಂದಿಸುವುದು ಅಥವಾ ಬೆದರಿಕೆ ಹಾಕುವುದು) ಮತ್ತು ವಿಧಿ 93 (ಮಾಹಿತಿ ನೀಡಲು ತಪ್ಪಿದಲ್ಲಿ ಶಿಕ್ಷೆ ವಿಧಿಸುವುದು) ಇತ್ಯಾದಿಗಳಿಗೆ ಸಂಬಂಧಿಸಿದೆ.

ಆದರೆ, ಕಡೆಗಣಿಸಲ್ಪಟ್ಟ ಸಮುದಾಯದ ಹಕ್ಕುಗಳನ್ನು ಪಡೆದುಕೊಳ್ಳಲು ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿ ಗೆಲುವು ಸಾಧಿಸಿರುವಾಗ, ವ್ಯಾಪಾರ ಮಾಡುವುದಕ್ಕೆ ಹೂಡಿಕೆದಾರರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ, ಉತ್ತಮ ವಾತಾವರಣ ನಿರ್ಮಾಣ ಮಾಡುವ ಸಲುವಾಗಿ ಆ ಹಕ್ಕುಗಳನ್ನು ಕಡೆಗಣಿಸಿ ಮೂಲೆಗೆ ತಳ್ಳಬೇಕು ಎಂದಾಗಬೇಕಿಲ್ಲ ಅಲ್ಲವೇ? ಆದರೆ, ದುರದೃಷ್ಟವಶಾತ್ ಸರಕಾರಕ್ಕೆ ಸಾಮಾನ್ಯ ಜನರ ಹಿತಾಸಕ್ತಿಗಳಿಗಿಂತ ವ್ಯಾಪಾರಿ, ಉದ್ಯಮಿಗಳ ಹಿತಾಸಕ್ತಿಗಳು ಹೆಚ್ಚು ಮುಖ್ಯವಾಗಿವೆ.

ಈ ಕಾನೂನುಗಳಲ್ಲಿರುವ ಶಿಕ್ಷೆಯ ಅವಕಾಶಗಳು ಕೇವಲ ಹಿಂಜರಿಕೆ ಉಂಟುಮಾಡುವಂತವುಗಳು ಅಲ್ಲ. ಸರಿಯಾಗಿ ಅನುಷ್ಟಾನ ಮಾಡಿದಲ್ಲಿ, ದೂರದೃಷ್ಟಿಯಿಂದ ನೋಡಿದಲ್ಲಿ ಕಾನೂನನ್ನು ಪಾಲಿಸುವ ಮತ್ತು ಎಲ್ಲರನ್ನೂ ಒಳಗೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಬಲ್ಲವು. ಅದಕ್ಕಿಂತ ಮಹತ್ವದ ವಿಷಯ ಎಂದರೆ, ಈ ಆರ್‍ಪಿಡಬ್ಲ್ಯೂಡಿ ಕಾಯಿದೆಯ ಅಡಿಯಲ್ಲಿ ದಾಖಲಾದ ಪ್ರಕರಣಗಳು ಅಥವಾ ಅವುಗಳಿಗೆ ಸಂಬಂಧಿಸಿ ಆದ ಶಿಕ್ಷೆ/ದಂಡಗಳ ಕುರಿತು ಅಂಕಿಅಂಶಗಳು ಇಲ್ಲವೇ ಇಲ್ಲ ಅನ್ನುವಷ್ಟು ಕಡಿಮೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಯಾವುದೇ ದತ್ತಾಂಶ ಇಲ್ಲದ ಸರಕಾರದ ವಿರುದ್ಧ ವಿಕಲಚೇತನ ವ್ಯಕ್ತಿಗಳು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಈ ಪ್ರಸ್ತಾಪಿತ ತಿದ್ದುಪಡಿಗಳ ಸಮರ್ಥನೆಗಾಗಿ ಸರಕಾರ ನೀಡಿದ ನಾಟಕೀಯ ನೆಪಗಳು ನಗೆಪಾಟಲಿಗೆ ಗುರಿಯಾದವು. ಕೊರೊನಾ ಪಿಡುಗು ಎಲ್ಲಾ ಕಡೆ ಹರಡಿರುವಾಗ ವಿಕಲಚೇತನ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುವುದು ಸಾಧ್ಯವಿಲ್ಲ. ಸುಮಾರು 125ರಷ್ಟು ವಿಕಲಚೇತನ ಹಕ್ಕುಗಳ, ನಾಗರಿಕ ಸಮಾಜ ಸಂಘಟನೆಗಳು ಮತ್ತು ಕಾರ್ಯಕರ್ತರು ಜಂಟಿಯಾಗಿ ಪತ್ರ ಬರೆದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆ, 2016 ರನ್ನು ತೆಳುಗೊಳಿಸುವ ಅಥವಾ ಇಲ್ಲದಂತೆ ಮಾಡುವ ಉದ್ದೇಶ ಹೊಂದಿರುವ ಈ ತಿದ್ದುಪಡಿಗಳಿಗೆ ಬಲವಾದ ವಿರೋಧ ವ್ಯಕ್ತಪಡಿಸಿವೆ. ಸ್ಥಳೀಯವಾಗಿಯೂ ಈ ಕ್ರಮದ ವಿರುದ್ಧ ಪ್ರತಿಭಟನೆಗಳು ನಡೆದಿವೆ.

ಈ ಕಾಯಿದೆಯ ಅಂಶಗಳು ವಿಕಲಚೇತನ ವ್ಯಕ್ತಿಗಳ ಹಕ್ಕುಗಳ ರಕ್ಷಣೆಗೆ ಪೂರಕವಾಗಿದೆ ಎಂದು ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುವ ಬೇರೆಬೇರೆ ಮೂಲಗಳು ಪ್ರತಿಸ್ಪಂದಿಸಿರುವಂತೆ ಈ ಕಾಯಿದೆಯ ಪರಿಣಾಮಕಾರಿ ಅನುಷ್ಟಾನ ಅಗತ್ಯ ಇದೆ ಎಂದು ವಿಕಲ ಚೇತನ ವ್ಯಕ್ತಿಗಳ ಸಬಲೀಕರಣ ಸಚಿವಾಲಯವೇ ಈಗ ಒಪ್ಪಿಕೊಂಡಿದೆ. “ಈ ಸಂಬಂಧವಾಗಿ ಹಲವು ವಲಯಗಳಿಂದ ಮೂಡಿರುವ ಭಾವನೆಗಳನ್ನು ಪರಿಗಣಿಸಿ, ಅಪರಾಧೀಕರಣವನ್ನು ದುರ್ಬಲಗೊಳಿಸುವ ಪ್ರಸ್ತಾಪಿತ ತಿದ್ದುಪಡಿಗಳು ವಿಕಲಚೇತನ ವ್ಯಕ್ತಿಗಳ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂಬ ಅಭಿಪ್ರಾಯವನ್ನು ಇಲಾಖೆ ತಳೆದಿದೆ” ಎಂದು ಹೇಳಿಕೆ ಕೊಟ್ಟಿದ್ದು, ಆದುದರಿಂದ, ಈ ತಿದ್ದುಪಡಿಯನ್ನು ಮುಂದುವರಿಸದಿರುವ ನಿರ್ಧಾರವನ್ನು ಕೈಕೊಂಡಿದೆ. ವಿಕಲ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯಿದೆಗೆ ತಿದ್ದುಪಡಿ ತರುವ ಸರ್ಕಾರದ ಪ್ರತಿಗಾಮಿ ನಿರ್ಧಾರವನ್ನು ಸರ್ಕಾರ ಕೈಬಿಟ್ಟಿರುವುದು ವಿಕಲಚೇತನ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡುವ ಹೋರಾಟಕ್ಕೆ ಸಂದ ಜಯವಾಗಿದೆ.

ಜಿ. ರವಿ, ವಿಕಲಚೇತನ ಹಕ್ಕುಗಳ ಚಳವಳಿಯಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರು


ಇದನ್ನು ಓದಿ: ಸ್ತ್ರೀಮತಿ- 2: ಲಾಕ್ – ಅನ್ ಲಾಕ್ ಗಳ ನಡುವೆ ಕಳೆದುಹೋದ ಕೀಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...