Homeಕರ್ನಾಟಕ5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

- Advertisement -
- Advertisement -

ಕರ್ನಾಟಕದಲ್ಲಿ ಉಪಚುನಾವಣೆ ಕಾವೇರುತ್ತಿದ್ದು ನಾಳೆ ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ನಡುವೆ ಬಿಜೆಪಿ ಪಕ್ಷದ RR ನಗರದ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. “ಕ್ಷೇತ್ರದ ಮತದಾರರಿಗೆ ಉಚಿತವಾಗಿ ಸೆಟ್‌ಟಾಪ್ ಬಾಕ್ಸ್‌ ಹಂಚಿದ್ದಾರೆ” ಎಂದು ಹೋರಾಟಗಾರ ಸಾಕೇತ್ ಗೋಖಲೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ ಡಿಪಿ ಸತೀಶ್‌, ತಮ್ಮ ಟ್ವಿಟರ್‌ ಖಾತೆಯಲ್ಲಿ, “RR ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಐದು ಕೋಟಿ ಬೆಲೆಬಾಳುವ 34,000 ಸೆಟ್‌ಟಾಪ್‌ ಬಾಕ್ಸ್‌ ಹಂಚಿದ್ದಾರೆ. ಒಂದು ವೇಳೆ ಅವರು ಗೆದ್ದರೂ ಚುನಾವಣಾ ವೆಚ್ಚ ಮಿತಿಯನ್ನು ಮೀರಿದ್ದಕ್ಕೆ ಅವರ ಸ್ಥಾನವನ್ನು ಅನರ್ಹಗೊಳಿಸಬಹುದೆಂದು ಕಾನೂನು ತಜ್ಞರು ಹೇಳುತ್ತಾರೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಈ ಕುರಿತು ರೀಟ್ವೀಟ್ ಮಾಡಿರುವ ಸಾಕೆತ್‌ ಗೋಖಲೆ, “ಈ ಪ್ರಕರಣದ ಕುರಿತಂತೆ ಆರ್‌ ಆರ್‌ ನಗರದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವುದಕ್ಕೆ RP Act, 1951 ಅಡಿಯಲ್ಲಿ 24 ಗಂಟೆಗಳೊಳಗೆ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಕ್ಷೇತ್ರದ ಮತದಾರರಿಗೆ ಮುನಿರತ್ನ ಅಕ್ರಮವಾಗಿ ಸೆಟ್‌ಟಾಪ್‌ ಬಾಕ್ಸ್‌ ಹಂಚಿ ಆಮಿಷ ಒಡ್ಡಿದ್ದಾರೆಂದು ವಿರೋಧ ಪಕ್ಷ ಕಾಂಗ್ರೆಸ್‌ ಕಳೆದ ವಾರ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. 1000 ಬೆಲೆ ಬಾಳುವ ಸುಮಾರು 50 ಸಾವಿರಕ್ಕೂ ಹೆಚ್ಚು ಟಿವಿ ಸೆಟ್‌ಟಾಪ್‌ ಬಾಕ್ಸ್‌ಗಳನ್ನು ಕ್ಷೇತ್ರದ ಮತದಾರರಿಗೆ ಹಂಚಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿದ್ದರೂ ಸಹ ಸೆಟ್‌ಟಾಪ್‌ ಬಾಕ್ಸ್‌ ಹಂಚಿರುವುದನ್ನು ಮುನಿರತ್ನ ಬಹಿರಂಗವಾಗಿ ಒಪ್ಪಿಕೊಂಡು, ಇದು ತನ್ನ ವ್ಯವಹಾರದ ಭಾಗ ಎಂದು ಸಮರ್ಥನೆ ನೀಡಿದ್ದರು.

ಕಳೆದ ಬಾರಿ ರಾಜ್ಯದ  12 ಕ್ಷೇತ್ರಗಳಲ್ಲಿ ಉಪಚುನಾವಣೆ ನಿಗದಿಯಾಗಿತ್ತು. ಆಗ ಮುನಿರತ್ನ ಅಕ್ರಮವಾಗಿ ಮತದಾರರ ಗುರುತು ಚೀಟಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದರೆಂಬ ಕಾರಣಕ್ಕೆ RR ನಗರದ ಉಪಚುನಾವಣೆ ರದ್ದಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈಗ ಇನ್ನೊಂದು ಪ್ರಕರಣದಲ್ಲಿ ಸಿಲುಕಿರುವ ಮುನಿರತ್ನ ಅವರ ವಿರುದ್ಧ ಚುನಾವಣಾ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...