HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...