HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...