HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...