HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...