HomeಮುಖಪುಟRR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

RR ನಗರ ಉಪಚುನಾವಣೆ: ಮತದಾರರ ಹಾಟ್ ಫೇವರಿಟ್ ಯಾರು ಎಂಬುದು ಇನ್ನೂ ನಿಗೂಢ!

ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

- Advertisement -
- Advertisement -

ಆರ್.ಆರ್. ನಗರ ಕ್ಷೇತ್ರದ ಉಪಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿ ಪರಿಣಮಿಸಿದೆ. ಈ ಹಿಂದೆ ಬೆಂಗಳೂರಿನ ಹೊರವಲಯದಲ್ಲಿ ಇದ್ದ ಈ ಕ್ಷೇತ್ರ ಬೆಂಗಳೂರು ಬೆಳೆಯುತ್ತಿದ್ದಂತೆ ನಗರದೊಳಗೆ ಸೇರಿದೆ. ಹೊಸ ಬಡಾವಣೆ, ಅಪಾರ್ಟ್ಮೆಂಟ್‌ಗಳು ಸೇರಿದಂತೆ ನಿರ್ಮಾಣ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆಯಾದ್ದರಿಂದ ಸ್ಲಂಗಳು, ವಲಸಿಗರು, ಕೂಲಿಕಾರ್ಮಿಕರ ಜನಸಂಖ್ಯೆ ಕೂಡಾ ಹೆಚ್ಚಿರುವ ಕ್ಷೇತ್ರ ಇದು.

ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹೊಸ ಮುಖವಾದ ಕುಸುಮಾ ಹನುಮಂತರಾಯಪ್ಪ ಅವರಿಗೆ ಟಿಕೆಟ್ ನೀಡಿದ್ದರೆ, ಮಾಜಿ ಕಾಂಗ್ರೆಸ್ ಶಾಸಕ, ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರು ಬಿಜಪಿಯೊಳಗಿನ ಎಲ್ಲಾ ಅಸಮಧಾನಗಳನ್ನು ಬದಿಗೆ ತಳ್ಳಿ ಟಿಕಟ್ ಗಿಟ್ಟಿಸಿಕೊಂಡಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿ ಅವರಿಗೆ ಟಿಕೆಟ್ ನೀಡಿದ್ದರೂ ಕ್ಷೇತ್ರದಲ್ಲಿ ಜೆಡಿಎಸ್ ಬಗ್ಗೆ ಒಲವಿಲ್ಲ.

ಇದುವರೆಗಿನ ಲೆಕ್ಕಾಚಾರದಂತೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನಂ ಅವರೇ ಫೇವರೆಟ್ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುದಕ್ಕೆ ಕಾರಣಕರ್ತರು ಮತ್ತು ಈ ಹಿಂದೆ ಗೆದ್ದಿದ್ದ ಪಕ್ಷಕ್ಕೆ ಮುನಿರತ್ನ ಮೋಸ ಮಾಡಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಪದೇ ಪದೇ ನೆನಪಿಸುತ್ತಿದ್ದರೂ ಜನರಿಗೆ ಇದೆ ಸಮಸ್ಯೆಯಂತೆ ಕಾಣುತ್ತಿದೆಯೇ ಎಂಬ ಪ್ರಶ್ನೆ ಉಳಿದಿದೆ. ಕ್ಷೇತ್ರದ ಜನರಿಗೆ ಬಿಜೆಪಿಯ ಕಾರ್ಪೋರೇಟರ್‌ಗಳ ಮೇಲೆ ಕೋಪವಿದ್ದರೂ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಮುನಿರತ್ನ ಜನರೊಂದಿಗೆ ನಿಂತು ನೀಡಿರುವ ಕಿಟ್‌ಗಳು ಈ ಸಮಯದಲ್ಲಿ ಕೈಹಿಡಿಯಲಿವೆ ಎಂಬುದೊಂದು ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಕುಸುಮ ಅವರನು ಮತದಾರರಿಗೆ ಪರಿಚಯಿಸುವಲ್ಲಿ ಒಂದು ಮಟ್ಟಿಗೆ ಯಶಸ್ವಿಯಾಗಿದೆ. ಬಿಜೆಪಿಗಿಂತ ಮುಂಚೆಯೆ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ ಕಾಂಗ್ರೆಸ್ ಈ ಕ್ಷೇತ್ರವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಹಿಂದೆ ಎರಡು ಭಾರಿ ಗೆದ್ದಿರುವುದಲ್ಲದೆ, ಕಳೆದ ಲೋಕಸಭಾ ಕ್ಷೇತ್ರದಲ್ಲಿ ಇಡೀ ಕರ್ನಾಟಕವೆ ಬಿಜೆಪಿಮಯವಾದಾಗ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದೊಳಗೆ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರವಿದೆ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಅದ್ಯಕ್ಷರಾಗಿ ನಡೆಯುತ್ತಿರುವ ಮೊದಲ ಚುನಾವಣೆ ಆಗಿರುವುದರಿಂದ ಇದು ಅವರಿಗೂ ಪ್ರತಿಷ್ಟೆಯ ಕಣವಾಗಿದೆ. ಡಿಕೆ ಸಹೋದದರು ಖುದ್ದಾಗಿ ನಿಂತು ನಿರಂತರವಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರತಿ ವಾರ್ಡ್‌ಗೆ ಒಬ್ಬ ಕಾಂಗ್ರೆಸ್ ಶಾಸಕನನ್ನು ಪ್ರಚಾರಕ್ಕೆ ನೇಮಿಸಿದೆ. ಅಷ್ಟೇ ಅಲ್ಲದೆ ಕನಕಪುರ ಹಾಗೂ ಕುಣಿಗಲ್‌ನಿಂದ ಕೂಡಾ ಪ್ರಚಾರಕ್ಕೆಂದು ಕಾರ್ಯಕರ್ತರನ್ನು ಕರೆಸಿ ಕೆಲಸ ಮಾಡಿಸುತ್ತಿದೆ.

ಜೆಡಿಎಸ್ ಪಕ್ಷವು ಆರ್.ಆರ್. ನಗರಕ್ಕಿಂತ ಹೆಚ್ಚಾಗಿ ಶಿರಾದಲ್ಲೇ ಗಮನವನ್ನು ನೆಟ್ಟಿದೆ. ಅಷ್ಟೊಂದು ವರ್ಚಸ್ಸು ಇಲ್ಲದ ಮುಖವನ್ನು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲಿಸಿದ್ದು, ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಸದ್ಯಕ್ಕೆ ಜೆಡಿಎಸ್ ತನ್ನ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದು, ವಿಧಾನಸಭಾ ಉಪಚುನಾವಣೆಗಿಂತಲೂ ಮುಂಬರುವ ಬಿಬಿಎಂಪಿ ಚುನಾವಣೆ ಕಡೆಗೆ ದೃಷ್ಟಿ ನೆಟ್ಟಂತಿದೆ. ಮುಖ್ಯವಾಗಿ ತಮ್ಮ ಪರವಾಗಿ ಇರುವ ಮತಗಳನ್ನು ಹಾಗೂ ತಮ್ಮ ಕಾರ್ಯಕರ್ತರನ್ನು ತಮ್ಮಲ್ಲೇ ಉಸಿಕೊಳ್ಳುವ ಪ್ರಯತ್ನವನ್ನು ಜೆಡಿಎಸ್ ಇಲ್ಲಿ ಮಾಡುತ್ತಿದೆ. ಈ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಥಾನ ನಿಗದಿಯಾಗುತ್ತದೆ ಎನ್ನಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಹಣಾಹಣಿಯಿದ್ದರೂ ಜೆಡಿಎಸ್‌ಅನ್ನು ಅಲ್ಲಗೆಳೆಯುವಂತಿಲ್ಲ. ಜೆಡಿಎಸ್ ಎಷ್ಟು ಮತವನ್ನು ಪಡೆಯುತ್ತದೆ ಎನ್ನುವುದಕ್ಕಿಂತ ಹೆಚ್ಚಾಗಿ, ಯಾರ ಮತವನ್ನು ಪಡೆಯುತ್ತದೆ ಎನ್ನುವುದು ಮುಖ್ಯವಾಗುತ್ತದೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ ಪಕ್ಷ ಟಿಕೆಟ್ ನೀಡುವವರೆಗೂ ಜೆಡಿಎಸ್‌ನಲ್ಲೇ ಇದ್ದ ಅವರ ತಂದೆ ಹನುಮಂತರಾಯಪ್ಪ ಈ ಹಿಂದೆ ಅಲ್ಲಿ ಸ್ಫರ್ಧಿಸಿದ್ದವರು. ಆರ್.ಆರ್. ನಗರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಚುನಾವಣೆ ಎದುರಿಸಬೇಕು ಎಂದು ಅವರು ಓಡಾಡಿದ್ದರೂ ಅದು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ತಂದೆಯ ಬೆಂಬಲಿಗ ಮತದಾರರು ಕುಸುಮಾಗೆ ಸಹಕರಿಸಲಿದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ಹೆಚ್ಚಿರುವುದು ಕಾಂಗ್ರೆಸ್‌ಗೆ ಸಮಾಧಾನಕರವಾದ ವಿಷಯವಾಗಿದ್ದರೂ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ನಾಯ್ಡು ಸಮುದಾಯದ ಸುಮಲತಾ ಅವರ ಕೈಹಿಡಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಇದೆಲ್ಲದರ ನಡುವೆ ಈ ಚುನಾವಣೆಗೆ ಕಾರಣವಾಗಿರುವ ಆಪರೇಷನ್ ಕಮಲದ ಮೂಲಕ ಯಶಸ್ವಿಯಾಗಿ ಅಧಿಕಾರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುನಿರತ್ನ ಪರವಾಗಿ ಪ್ರಚಾರಕ್ಕೆ ಬಂದಿಲ್ಲ! ಈ ಬಗ್ಗೆ ಅವರ ಲೆಕ್ಕಾಚಾರಗಳು ಮತ್ತು ಮುಂದಿನ ನಡೆಗಳು ನಿಗೂಢವಾಗಿದೆ. ಮುನಿರತ್ನಗೆ ಬಿಜೆಪಿಯಿಂದ ಟಿಕೆಟ್ ನೀಡಬಾರದು ಎಂಬ ಬಿಎಲ್ ಸಂತೋಷ್ ಹಠವನ್ನು ತೊಡೆದುಹಾಕಿ ವಿಜಯಿಯಾಗಿದ್ದ ಯಡಿಯೂರಪ್ಪನವರು ಈಗ ಪ್ರಚಾರಕ್ಕೆ ತೆರಳದೆ ಇರುವುದು ಅಚ್ಚರಿ ತಂದಿದೆ.

ಈ ಹಿಂದೆ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ ಅವರಿಗೆ ಟಿಕೆಟ್ ತಪ್ಪಿರುವುದು ಅವರ ಬೆಂಬಲಿಗರಿಗೆ ಕೆರಳಿಸಿದೆ. ಕ್ಷೇತ್ರದ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ರಾಜಿನಾಮೆ ನೀಡಿದ್ದಾರೆ. ಮೂಲತಃ ಆರೆಸ್ಸೆಸ್ಸಿಗರಾದ ಮುನಿರಾಜು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದ್ದರೂ ಇದುವರೆಗೂ ಯಾವುದೇ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಿಲ್ಲ.

ಜೆಡಿಎಸ್‌ನ ಅಭ್ಯರ್ಥಿ ಯಾವ ಕಡೆಯ ಮತವನ್ನು ಒಡೆಯುತ್ತಾರೆ ಮತ್ತು ಪಡೆಯುತ್ತಾರೆ, ಬಿಜೆಪಿಯ ಮುನಿರಾಜು ಗೌಡ ಅವರು ಏನು ಮಾಡುತ್ತಾರೆ ಹಾಗೂ ಕೊನೆಗೆ ಮತದಾರರ ಒಲವು ಯಾರ ಕಡೆಗಿದೆ ಎಂಬುದರ ಮೇಲೆ ಈ ಪ್ರತಿಷ್ಟಿತ ಕ್ಷೇತ್ರದ ಆಭ್ಯರ್ಥಿಗಳ ಚುನಾವಣಾ ಭವಿಷ್ಯ ಅಡಗಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...