Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...