Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...