Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...