Homeಕರ್ನಾಟಕ‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ...!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್...

‘1 ಲಕ್ಷ ರೂ., ಚಿನ್ನ ಮತ್ತು ಬೆಳ್ಳಿ…!’; ಸಚಿವ ಆನಂದ್ ಸಿಂಗ್‌‌ ಕಡೆಯಿಂದ ಪ್ರತಿ ವಾರ್ಡ್ ಸದಸ್ಯರಿಗೆ ದೀಪಾವಳಿ ಉಡುಗೊರೆ

- Advertisement -
- Advertisement -

ವಿಜಯನಗರ ಜಿಲ್ಲೆಯ ಹೊಸಪೇಟೆ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದ ಚುನಾಯಿತ ಸದಸ್ಯರಿಗೆ ದುಬಾರಿ ದೀಪಾವಳಿ ಉಡುಗೊರೆಗಳನ್ನು ನೀಡಿ ವಿವಾದವೆಬ್ಬಿಸಿದ್ದಾರೆ.

ತಮ್ಮ ಮನೆಯಲ್ಲಿ ನಡೆಯುವ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಪೆಟ್ಟಿಗೆಯಲ್ಲಿ ಚಿನ್ನ, ಬೆಳ್ಳಿ, ಬಟ್ಟೆ, ನಗದುಗಳನ್ನು ಅವರು ನೀಡಿದ್ದಾರೆ. ಉಡುಗೊಡೆ ಬಾಕ್ಸ್ ಮತ್ತು ಅದರಲ್ಲಿರುವ ಫೋಟೋಗಳು ಈಗ ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಚಿವ ಆನಂದ್ ಸಿಂಗ್‌ ಎರಡು ಸೆಟ್ ಉಡುಗೊರೆ ಬಾಕ್ಸ್‌ಗಳನ್ನು ನಗರಸಭೆ ಸದಸ್ಯರಿಗೆ ಮತ್ತು ಇನ್ನೊಂದು ಗ್ರಾಮ ಪಂಚಾಯಿತಿ ಸದಸ್ಯರಿಗೆ ವಿತರಿಸಿದ್ದಾರೆ ಎಂದು ವರದಿಯಾಗಿದೆ. ಪುರಸಭೆ ಸದಸ್ಯರಿಗೆ 1 ಲಕ್ಷ ರೂ.ನಗದು, 144 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ, ರೇಷ್ಮೆ ಸೀರೆ, ಧೋತಿ, ಡ್ರೈ ಫ್ರೂಟ್ ಬಾಕ್ಸ್ ನೀಡಿದರೆ, ಪಂಚಾಯ್ತಿ ಸದಸ್ಯರಿಗೆ ಇದಕ್ಕಿಂತಲೂ ಕಡಿಮೆ ನಗದು, ಚಿನ್ನಾಭರಣ ಮತ್ತು ಉಳಿದ ವಸ್ತುಗಳನ್ನು ನೀಡಿದ್ದಾಗಿ ವರದಿ ಹೇಳಿವೆ.

ಇದನ್ನೂ ಓದಿ: ಅರಣ್ಯ ಕಾಯ್ದೆಯಡಿ ಹಲವು ಗಂಭೀರ ಪ್ರಕರಣಗಳಿರುವ ಆನಂದ್ ಸಿಂಗ್‌ಗೆ ಅರಣ್ಯ ಸಚಿವ ಸ್ಥಾನ!

ಹೊಸಪೇಟೆ ಕ್ಷೇತ್ರವು 35 ಚುನಾಯಿತ ಮತ್ತು ಐದು ನಾಮನಿರ್ದೇಶಿತ ಸದಸ್ಯರ ಒಂದು ನಗರಸಭೆಯನ್ನು ಹೊಂದಿದೆ. ಜೊತೆಗೆ 182 ಸದಸ್ಯರನ್ನು ಹೊಂದಿರುವ 10 ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಕೆಲವು ಪುರಸಭೆಯ ಚುನಾಯಿತ ಸದಸ್ಯರು ಉಡುಗೊರೆ ಪೆಟ್ಟಿಗೆಗಳನ್ನು ತೆಗೆದುಕೊಳ್ಳಲು ನಿರಾಕರಿಸಿದ್ದು, ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಆನಂದ್‌ ಸಿಂಗ್‌ ಸೋಗಿನ ಸಜ್ಜನಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆನಂದ್ ಸಿಂಗ್ ಅವರ ಬೆಂಬಲಿಗರು ಇದನ್ನು ನಿರಾಕರಿಸಿದ್ದು, ಪ್ರತಿ ದೀಪಾವಳಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಅವರು ಉಡುಗೊರೆಗಳನ್ನು ಕಳುಹಿಸುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಚುನಾವಣೆ ಇರುವುದರಿಂದ ಈ ವರ್ಷ ವಿವಾದವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳಿಗೂ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸಲಾಗಿದೆ ಎಂದು ಬೆಂಬಲಿಗರು ಹೇಳಿದ್ದಾರೆ.

ಇದನ್ನೂ ಓದಿ: ತನಗೆ ಸಿಕ್ಕ ಖಾತೆಗೆ ಕ್ಯಾತೆ ತೆಗೆದ ಸಚಿವ ಆನಂದ್ ಸಿಂಗ್!

“ಸಚಿವ ಆನಂದ್ ಸಿಂಗ್ ಅವರು ಪ್ರತಿ ಗಣೇಶ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಆಹ್ವಾನದ ಭಾಗವಾಗಿ ಉಡುಗೊರೆ ಪೆಟ್ಟಿಗೆಗಳನ್ನು ಕಳುಹಿಸುತ್ತಾರೆ. ಅವರು ಅವುಗಳನ್ನು ತನ್ನ ಆಪ್ತ ಸ್ನೇಹಿತರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಕಳುಹಿಸುತ್ತಾರೆ. ಇದನ್ನು ಯಾಕೆ ವಿವಾದ ಮಾಡುತ್ತಿದ್ದಾರೆ ಎಂಬುದು ನಮಗೆ ಖಚಿತವಿಲ್ಲ” ಎಂದು ಹೊಸಪೇಟೆಯ ಬೆಂಬಲಿಗರೊಬ್ಬರು ಹೇಳಿದ್ದಾರೆ.

ಆಸ್ತಿ ವಿವಾದದ ಕುರಿತು ಕುಟುಂಬವೊಂದಕ್ಕೆ ಬೆದರಿಕೆ ಹಾಕಿದ್ದಕ್ಕಾಗಿ ಆನಂದ್ ಸಿಂಗ್ ವಿರುದ್ಧ ಪೊಲೀಸರು ಸೆಪ್ಟೆಂಬರ್‌‌‌ನಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ದಲಿತ ವ್ಯಕ್ತಿ ಡಿ. ಪೋಲಪ್ಪ ನೀಡಿದ ದೂರಿನ ಮೇರೆಗೆ ಸಚಿವರು ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿ ಗಣಿ ಉದ್ಯಮಿಯಾಗಿದ್ದು, ಅವರ ಚರ ಮತ್ತು ಸ್ಥಿರ ಆಸ್ತಿಗಳ ಒಟ್ಟು ಮೊತ್ತ 70 ಕೋಟಿ ರೂ. ಆಗಿದೆ. 2009 ರಲ್ಲಿ ಬಳ್ಳಾರಿ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆನಂದ್ ಸಿಂಗ್‌ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಕ್ರಿಮಿನಲ್ ಅತಿಕ್ರಮಣ ಮತ್ತು ಫೋರ್ಜರಿ ಆರೋಪವಿದೆ.

ಇದನ್ನೂ ಓದಿ: ಎಸ್‌ಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತ ಕುಟುಂಬ; ಸಚಿವ ಆನಂದ್‌ ಸಿಂಗ್ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

ರಾಜ್ಯದ ಬೇಲಿಕೇರಿ ಕೋಟೆಯಿಂದ ಕಬ್ಬಿಣವನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಲ್ಲಿ 2013 ರಲ್ಲಿ ಸಿಬಿಐ ಅವರನ್ನು ಎರಡನೇ ಬಾರಿಗೆ ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಇಷ್ಟೊಂದು ದುಬಾರಿ ಹಣ ಎಲ್ಲಿಂದ ಬಂತು ಇಲ್ಲಿಗೆ ಯಾಕೆ ಐಟಿ ಯವರು ಯಾಕೆ ರೈಡ್ ಮಾಡ್ಲಿಲ್ಲ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...