Homeಮುಖಪುಟಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ...

ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮತ್ತೆ ತಮ್ಮ ಪಕ್ಷದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ‘ಉಚಿತ ಕೊಡುಗೆ’ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜನರಿಗೆ ಉಚಿತ ಪಡಿತರವನ್ನು ಒದಗಿಸಿದ್ದಕ್ಕಾಗಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಬಿಜೆಪಿ ಸಂಸದರೊಬ್ಬರು ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು ತಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಐದು ವರ್ಷಗಳಲ್ಲಿ ಮನ್ನಾ ಮಾಡಿದ ಬೃಹತ್ ಮೊತ್ತದ ಸಾಲಗಳೊಂದಿಗೆ ಇದನ್ನು ಹೋಲಿಸಿದ ವರುಣ್‌ ಗಾಂಧಿ, “ಬಡವರಿಗೆ 5 ಕೆಜಿ ಪಡಿತರವನ್ನು ಒದಗಿಸಿದ್ದಕ್ಕಾಗಿ ‘ಧನ್ಯವಾದ’ ನಿರೀಕ್ಷಿಸುವ ಸದನವು, 5 ವರ್ಷಗಳಲ್ಲಿ 10 ಲಕ್ಷ ಕೋಟಿವರೆಗಿನ ಭ್ರಷ್ಟ ಹಣದ ಪ್ರಾಣಿಗಳ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಹೇಳುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಮೆಹುಲ್ ಚೋಕ್ಸಿ ಮತ್ತು ರಿಷಿ ಅಗರ್ವಾಲ್ ಅವರ ಹೆಸರುಗಳು ‘ಉಚಿತ ಕೊಡುಗೆ’ ಪಟ್ಟಿಯ ಅಗ್ರಸ್ಥಾನದಲ್ಲಿವೆ. ಸರ್ಕಾರದ ನಿಧಿಯಲ್ಲಿ ಮೊದಲ ಹಕ್ಕು ಯಾರಿಗಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಇಷ್ಟೆ ಅಲ್ಲದೆ, ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಅವರು ಮಂಡಿಸಿದ್ದ ಅಂಕಿ ಅಂಶಗಳನ್ನೂ ವರುಣ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಇತ್ತೀಚೆಗೆ ಲೋಕಸಭೆಯಲ್ಲಿ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಿದ ನರೇಂದ್ರ ಮೋದಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಹೇಳಿದ್ದರು.

ಪ್ರಧಾನಿ ಮೋದಿ ಅವರು ಕಳೆದ ತಿಂಗಳು “ಉಚಿತ ಕೊಡುಗೆ ಸಂಸ್ಕೃತಿ” ವಿರುದ್ಧ ಮಾತನಾಡಿದ್ದರು. ಜನರಿಗೆ ಉಚಿತ ಕೊಡುಗೆಗಳ ಭರವಸೆ ನೀಡುವ ಮೂಲಕ ಮತಗಳನ್ನು ಕೇಳಲಾಗುತ್ತದೆ ಎಂದು ಹೇಳಿದ್ದರು.

ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಉಚಿತ ಭರವಸೆಗಳ ಮೇಲೆ ಮತ ಕೇಳುವ ಪ್ರವೃತ್ತಿ ದೇಶಕ್ಕೆ ಅಪಾಯಕಾರಿ ಎಂದು ಹೇಳಿದ್ದರು.

ಬಿಜೆಪಿ ಸಂಸದರಾಗಿರುವ ವರುಣ್ ಗಾಂಧಿ ಅವರು ಕಳೆದ ಕೆಲವು ಸಮಯದಿಂದ ತಮ್ಮ ಪಕ್ಷದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ, ಅವರು ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಉತ್ತರ ಪ್ರದೇಶದ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದರು.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

ಇಷ್ಟೆ ಅಲ್ಲದೆ ವಯೋವೃದ್ಧರಿಗೆ ರೈಲ್ವೆ ರಿಯಾಯಿತಿಯನ್ನು ರದ್ದುಪಡಿಸುವ ಸರ್ಕಾರದ ಕ್ರಮ, ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ ಮತ್ತು ಸಶಸ್ತ್ರ ಪಡೆಗಳಿಗೆ ಕೇಂದ್ರದ ಹೊಸ ನೇಮಕಾತಿ ಯೋಜನೆ ‘ಅಗ್ನಿಪಥ್’ ಅನ್ನು ಅವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...