Homeಮುಖಪುಟಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ...

ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ: ಮೋದಿ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮತ್ತೆ ತಮ್ಮ ಪಕ್ಷದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ‘ಉಚಿತ ಕೊಡುಗೆ’ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭ್ರಷ್ಟ ಉದ್ಯಮಿಗಳ 10 ಲಕ್ಷ ಕೋಟಿ ರೂ.ವರೆಗಿನ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜನರಿಗೆ ಉಚಿತ ಪಡಿತರವನ್ನು ಒದಗಿಸಿದ್ದಕ್ಕಾಗಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಬಿಜೆಪಿ ಸಂಸದರೊಬ್ಬರು ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು ತಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ಐದು ವರ್ಷಗಳಲ್ಲಿ ಮನ್ನಾ ಮಾಡಿದ ಬೃಹತ್ ಮೊತ್ತದ ಸಾಲಗಳೊಂದಿಗೆ ಇದನ್ನು ಹೋಲಿಸಿದ ವರುಣ್‌ ಗಾಂಧಿ, “ಬಡವರಿಗೆ 5 ಕೆಜಿ ಪಡಿತರವನ್ನು ಒದಗಿಸಿದ್ದಕ್ಕಾಗಿ ‘ಧನ್ಯವಾದ’ ನಿರೀಕ್ಷಿಸುವ ಸದನವು, 5 ವರ್ಷಗಳಲ್ಲಿ 10 ಲಕ್ಷ ಕೋಟಿವರೆಗಿನ ಭ್ರಷ್ಟ ಹಣದ ಪ್ರಾಣಿಗಳ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಹೇಳುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

“ಮೆಹುಲ್ ಚೋಕ್ಸಿ ಮತ್ತು ರಿಷಿ ಅಗರ್ವಾಲ್ ಅವರ ಹೆಸರುಗಳು ‘ಉಚಿತ ಕೊಡುಗೆ’ ಪಟ್ಟಿಯ ಅಗ್ರಸ್ಥಾನದಲ್ಲಿವೆ. ಸರ್ಕಾರದ ನಿಧಿಯಲ್ಲಿ ಮೊದಲ ಹಕ್ಕು ಯಾರಿಗಿದೆ?” ಎಂದು ಅವರು ಪ್ರಶ್ನಿಸಿದ್ದಾರೆ. ಇಷ್ಟೆ ಅಲ್ಲದೆ, ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕೆ ಕರದ್ ಅವರು ಮಂಡಿಸಿದ್ದ ಅಂಕಿ ಅಂಶಗಳನ್ನೂ ವರುಣ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಇದನ್ನೂ ಓದಿ: ಅಗ್ನಿಪಥ : ವರುಣ್ ಗಾಂಧಿ ಪ್ರತಿದಿನ ವೈಯಕ್ತಿಕ ಅಭಿಪ್ರಾಯ ನೀಡಲು ಇಷ್ಟಪಡುತ್ತಾರೆ ಎಂದ ಕೇಂದ್ರ ಸಚಿವ

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಇತ್ತೀಚೆಗೆ ಲೋಕಸಭೆಯಲ್ಲಿ 80 ಕೋಟಿ ಜನರಿಗೆ ಉಚಿತ ಪಡಿತರವನ್ನು ಒದಗಿಸಿದ ನರೇಂದ್ರ ಮೋದಿ ಸರ್ಕಾರವನ್ನು ಅಭಿನಂದಿಸಬೇಕು ಎಂದು ಹೇಳಿದ್ದರು.

ಪ್ರಧಾನಿ ಮೋದಿ ಅವರು ಕಳೆದ ತಿಂಗಳು “ಉಚಿತ ಕೊಡುಗೆ ಸಂಸ್ಕೃತಿ” ವಿರುದ್ಧ ಮಾತನಾಡಿದ್ದರು. ಜನರಿಗೆ ಉಚಿತ ಕೊಡುಗೆಗಳ ಭರವಸೆ ನೀಡುವ ಮೂಲಕ ಮತಗಳನ್ನು ಕೇಳಲಾಗುತ್ತದೆ ಎಂದು ಹೇಳಿದ್ದರು.

ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಉಚಿತ ಭರವಸೆಗಳ ಮೇಲೆ ಮತ ಕೇಳುವ ಪ್ರವೃತ್ತಿ ದೇಶಕ್ಕೆ ಅಪಾಯಕಾರಿ ಎಂದು ಹೇಳಿದ್ದರು.

ಬಿಜೆಪಿ ಸಂಸದರಾಗಿರುವ ವರುಣ್ ಗಾಂಧಿ ಅವರು ಕಳೆದ ಕೆಲವು ಸಮಯದಿಂದ ತಮ್ಮ ಪಕ್ಷದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ, ಅವರು ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಗ್ಗೆ ಉತ್ತರ ಪ್ರದೇಶದ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದರು.

ಇದನ್ನೂ ಓದಿ: 60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ವಿದ್ಯಾವಂತ ಯುವಕರು ಇ-ರಿಕ್ಷಾ ಓಡಿಸುತ್ತಿದ್ದಾರೆ: BJP ಸಂಸದ ವರುಣ್ ಗಾಂಧಿ ಆಕ್ರೋಶ

ಇಷ್ಟೆ ಅಲ್ಲದೆ ವಯೋವೃದ್ಧರಿಗೆ ರೈಲ್ವೆ ರಿಯಾಯಿತಿಯನ್ನು ರದ್ದುಪಡಿಸುವ ಸರ್ಕಾರದ ಕ್ರಮ, ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆ ಮತ್ತು ಸಶಸ್ತ್ರ ಪಡೆಗಳಿಗೆ ಕೇಂದ್ರದ ಹೊಸ ನೇಮಕಾತಿ ಯೋಜನೆ ‘ಅಗ್ನಿಪಥ್’ ಅನ್ನು ಅವರು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...