Homeಮುಖಪುಟಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

- Advertisement -
- Advertisement -

ಪಾಟ್ನಾ: ಮಕ್ಕಳು ವಂಚಿತ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ ನೀಡುವ ಅಮಿಷವೊಡ್ಡಿ ಯುವಕರನ್ನು ವಂಚಿಸಿದ್ದಕ್ಕಾಗಿ ಬಿಹಾರ ಪೊಲೀಸರು ಶನಿವಾರ ಮೂವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಇಂತಹ ಕೊಡುಗೆಯ ಭರವಸೆಗಳನ್ನು ನೀಡಿ, ಇದನ್ನು ನಂಬಿ ಬಂದವರಿಂದಲೇ ಹಣವನ್ನು ಸುಲಿಗೆ ಮಾಡುವ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಾರೆಂದು ಶಂಕಿಸಲಾಗಿದೆ. ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು ಎಂದು ನವಾಡ ಡಿಎಸ್‌ಪಿ (ಪ್ರಧಾನ ಕಚೇರಿ) ಇಮ್ರಾನ್ ಪರ್ವೇಜ್ ತಿಳಿಸಿದರು.

ಸೈಬರ್ ಪೊಲೀಸ್ ಠಾಣೆಗೆ ಬಂದ ದೂರಿನ ಮೇರೆಗೆ ಬಲೆ ಬೀಸಲಾಯಿತು ಮತ್ತು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿದರೆ ಗ್ರಾಹಕ ಶುಲ್ಕವಾಗಿ ಭಾರಿ ಮೊತ್ತವನ್ನು ನೀಡುವ ಭರವಸೆ ನೀಡಿ ಯುವಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಬಂಧಿಸಲಾಯಿತು. ಅವರು ನಾದ್ರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು” ಎಂದು ಅವರು ಹೇಳಿದರು.

ಆರೋಪಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಹೀರಾತುಗಳನ್ನು ಪೋಸ್ಟ್ ಮಾಡಿ, ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ದೊಡ್ಡ ಮೊತ್ತದ ಹಣವನ್ನು ನೀಡುವುದಾಗಿ ಭರವಸೆ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಮ್ಮ ಈ ದಂಧೆಗೆ ಯುವಕರನ್ನು ಆಕರ್ಷಿಸಲು ಅವರು ವೆಬ್‌ಸೈಟ್ ಅನ್ನು ಸಹ ನಡೆಸುತ್ತಿದ್ದರು. ಯುವಕರಿಗೆ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ವಿಫಲವಾದರೂ ರೂ. 50,000 ಭರವಸೆ ನೀಡಲಾಗಿತ್ತು. ಅವರು ಮೊದಲು ತಮ್ಮ ಬಲಿಪಶುಗಳಿಂದ ಆಧಾರ್ ಕಾರ್ಡ್‌ಗೆ ಬೇಡಿಕೆ ಇಡುತ್ತಿದ್ದರು ಮತ್ತು ನಂತರ ನೋಂದಣಿ ಶುಲ್ಕವನ್ನು ಕೇಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಅವರು ‘All India Pregnant Job Service’ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು. ಅದರ ಮೂಲಕ ಅವರು ಸಂಭಾವ್ಯ ಗ್ರಾಹಕರನ್ನು ಆಕರ್ಷಿಸುತ್ತಿದ್ದರು. ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ಅವರು ಜನರಿಗೆ ರೂ. 5-10 ಲಕ್ಷ ನೀಡುವ, ವಿಫಲವಾದರೂ ಗ್ರಾಹಕರಿಗೆ ರೂ. 50,000 ಭರವಸೆ ನೀಡುತ್ತಿದ್ದರು ಎಂದು ಡಿಎಸ್‌ಪಿ ಹೇಳಿದರು.

ಆರಂಭದಲ್ಲಿ ಅವರು ತಮ್ಮ ಮೋಸದ ಜಾಲಕ್ಕೆ ಸಿಲುಕಿದ ಯುವಕರರಿಂದ ಪ್ಯಾನ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಅವರು ನೋಂದಣಿ ಮತ್ತು ಹೋಟೆಲ್‌ಗಳ ಬುಕಿಂಗ್ ಹೆಸರಿನಲ್ಲಿ ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇಂಡಿಯಾ ಬಣ ವಿಸರ್ಜನೆಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...