Homeಮುಖಪುಟಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

- Advertisement -
- Advertisement -

ಪಾಟ್ನಾ: ಮಕ್ಕಳು ವಂಚಿತ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ ನೀಡುವ ಅಮಿಷವೊಡ್ಡಿ ಯುವಕರನ್ನು ವಂಚಿಸಿದ್ದಕ್ಕಾಗಿ ಬಿಹಾರ ಪೊಲೀಸರು ಶನಿವಾರ ಮೂವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಇಂತಹ ಕೊಡುಗೆಯ ಭರವಸೆಗಳನ್ನು ನೀಡಿ, ಇದನ್ನು ನಂಬಿ ಬಂದವರಿಂದಲೇ ಹಣವನ್ನು ಸುಲಿಗೆ ಮಾಡುವ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಾರೆಂದು ಶಂಕಿಸಲಾಗಿದೆ. ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು ಎಂದು ನವಾಡ ಡಿಎಸ್‌ಪಿ (ಪ್ರಧಾನ ಕಚೇರಿ) ಇಮ್ರಾನ್ ಪರ್ವೇಜ್ ತಿಳಿಸಿದರು.

ಸೈಬರ್ ಪೊಲೀಸ್ ಠಾಣೆಗೆ ಬಂದ ದೂರಿನ ಮೇರೆಗೆ ಬಲೆ ಬೀಸಲಾಯಿತು ಮತ್ತು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿದರೆ ಗ್ರಾಹಕ ಶುಲ್ಕವಾಗಿ ಭಾರಿ ಮೊತ್ತವನ್ನು ನೀಡುವ ಭರವಸೆ ನೀಡಿ ಯುವಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಬಂಧಿಸಲಾಯಿತು. ಅವರು ನಾದ್ರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು” ಎಂದು ಅವರು ಹೇಳಿದರು.

ಆರೋಪಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಹೀರಾತುಗಳನ್ನು ಪೋಸ್ಟ್ ಮಾಡಿ, ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ದೊಡ್ಡ ಮೊತ್ತದ ಹಣವನ್ನು ನೀಡುವುದಾಗಿ ಭರವಸೆ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಮ್ಮ ಈ ದಂಧೆಗೆ ಯುವಕರನ್ನು ಆಕರ್ಷಿಸಲು ಅವರು ವೆಬ್‌ಸೈಟ್ ಅನ್ನು ಸಹ ನಡೆಸುತ್ತಿದ್ದರು. ಯುವಕರಿಗೆ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ವಿಫಲವಾದರೂ ರೂ. 50,000 ಭರವಸೆ ನೀಡಲಾಗಿತ್ತು. ಅವರು ಮೊದಲು ತಮ್ಮ ಬಲಿಪಶುಗಳಿಂದ ಆಧಾರ್ ಕಾರ್ಡ್‌ಗೆ ಬೇಡಿಕೆ ಇಡುತ್ತಿದ್ದರು ಮತ್ತು ನಂತರ ನೋಂದಣಿ ಶುಲ್ಕವನ್ನು ಕೇಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಅವರು ‘All India Pregnant Job Service’ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು. ಅದರ ಮೂಲಕ ಅವರು ಸಂಭಾವ್ಯ ಗ್ರಾಹಕರನ್ನು ಆಕರ್ಷಿಸುತ್ತಿದ್ದರು. ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ಅವರು ಜನರಿಗೆ ರೂ. 5-10 ಲಕ್ಷ ನೀಡುವ, ವಿಫಲವಾದರೂ ಗ್ರಾಹಕರಿಗೆ ರೂ. 50,000 ಭರವಸೆ ನೀಡುತ್ತಿದ್ದರು ಎಂದು ಡಿಎಸ್‌ಪಿ ಹೇಳಿದರು.

ಆರಂಭದಲ್ಲಿ ಅವರು ತಮ್ಮ ಮೋಸದ ಜಾಲಕ್ಕೆ ಸಿಲುಕಿದ ಯುವಕರರಿಂದ ಪ್ಯಾನ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಅವರು ನೋಂದಣಿ ಮತ್ತು ಹೋಟೆಲ್‌ಗಳ ಬುಕಿಂಗ್ ಹೆಸರಿನಲ್ಲಿ ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇಂಡಿಯಾ ಬಣ ವಿಸರ್ಜನೆಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...