Homeಮುಖಪುಟಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಎದುರಿಸುತ್ತಿರುವ ಅಡೆತಡೆಗಳನ್ನು ಪರಿಗಣಿಸಿ ಅವರಿಗೆ ಟ್ಯಾಬ್ ಒದಗಿಸುವುದಾಗಿ ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿತ್ತು.

- Advertisement -
- Advertisement -

ಸರ್ಕಾರಿ, ಅನುದಾನಿತ, ಮತ್ತು ಮದರಸಾ ಶಾಲೆಗಳಲ್ಲಿ 12 ನೇ ತರಗತಿ ಕಲಿಯುತ್ತಿರುವ 9.5 ಲಕ್ಷ ವಿದ್ಯಾರ್ಥಿಗಳಿಗೆ ತಲಾ 10,000 ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಪಶ್ಚಿಮ ಬಂಗಾಳ ಸರ್ಕಾರ ನಿರ್ಧರಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದ ಶಾಲೆಗಳನ್ನು ಮುಚ್ಚಿದ್ದು, ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಡೆತಡೆಗಳನ್ನು ಪರಿಗಣಿಸಿ ಅವರಿಗೆ ಟ್ಯಾಬ್ ಒದಗಿಸುವುದಾಗಿ ಈ ಹಿಂದೆ ರಾಜ್ಯ ಸರ್ಕಾರ ಘೋಷಿಸಿತ್ತು.

ಬಂಗಾಳದ ಗ್ರಾಮೀಣ ಭಾಗಗಳಲ್ಲಿನ ಹೆಚ್ಚಿನ ವಿದ್ಯಾರ್ಥಿಗಳ ಕುಟುಂಬದಲ್ಲಿ ಒಂದು ಹ್ಯಾಂಡ್‌ಸೆಟ್ ಹೊಂದಿದ್ದಾರೆ. ಕೆಲವರು ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬೇಕಾದಂತ ಸ್ಮಾರ್ಟ್‌ಫೋನ್‌ ಕೂಡ ಹೊಂದಿಲ್ಲ ಎಂದು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು.

ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ಈಗ ಟ್ಯಾಬ್ ಬದಲು ಎಲ್ಲಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10,000 ರೂಪಾಯಿಗಳನ್ನು ಹಾಕುವುದಾಗಿ ತಿಳಿಸಿದೆ. ಇನ್ನು ಮೂರು ದಿನಗಳಲ್ಲಿ ಹಣವನ್ನು ವರ್ಗಾಯಿಸಲಾಗುವುದು. ವಿದ್ಯಾರ್ಥಿಗಳೇ ತಮಗೆ ಬೇಕಾದ ಸ್ಮಾರ್ಟ್‌ಪೋನ್ ಅಥವಾ ಟ್ಯಾಬ್ ತೆಗೆದುಕೊಳ್ಳಬಹುದು ಎಂದಿದೆ.

“ಟ್ಯಾಬ್‌ಗಳನ್ನು ವಿತರಿಸಲು ನಾವು ಟೆಂಡರ್ ಕರೆದಿದ್ದೆವು.  ಆದರೆ ಇಷ್ಟು ದೊಡ್ಡ ಪ್ರಮಾಣದ ಟ್ಯಾಬ್‌ಗಳನ್ನು ಪೂರೈಸಲು ಯಾರು ಮುಂದೆ ಬರಲಿಲ್ಲ. ಕೇಂದ್ರ ಸರ್ಕಾರ ಚೀನಾದಲ್ಲಿ ತಯಾರಿಸಿದ ಉತ್ಪನ್ನಗಳ ಮೇಲೆ ನಿರ್ಬಂಧ ಹೇರಿರುವುದರಿಂದ, ನಾವು ಇತರ ಬ್ರಾಂಡ್‌ಗಳನ್ನು ಅವಲಂಬಿಸಬೇಕಾಗಿದೆ. ಹೀಗಾಗಿ, ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲು ನಾವು ನಿರ್ಧರಿಸಿದ್ದೇವೆ. ಮೂರು ವಾರಗಳಲ್ಲಿ ವಿದ್ಯಾರ್ಥಿಗಳ ಖಾತೆಗೆ ಹಣ ತಲುಪಲಿದೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: IPS ಅಧಿಕಾರಿಗಳ ವರ್ಗಾವಣೆ: ಮಮತಾ ಬ್ಯಾನರ್ಜಿ ಬೆನ್ನಿಗೆ ನಿಂತ ಕೇಜ್ರೀವಾಲ್

ಶಿಕ್ಷಣ ಇಲಾಖೆ ಇತರ ಟ್ಯಾಬ್ ತಯಾರಕರೊಂದಿಗೆ ಮಾತುಕತೆ ನಡೆಸಿದೆ. ಆದರೆ ಅದು ಉಪಯೋಗಕ್ಕೆ ಬರಲಿಲ್ಲ  ಎಂದು ರಾಜ್ಯ ಸಚಿವಾಲಯದ ಮೂಲಗಳು ತಿಳಿಸಿವೆ. “ಟ್ಯಾಬ್ ತಯಾರಕರು, ವಾರಕ್ಕೆ ಗರಿಷ್ಠ 15,000 ದಿಂದ 20,000 ಟ್ಯಾಬ್‌ಗಳನ್ನು ಪೂರೈಸಬಹುದೆಂದು ಹೇಳಿದರು. ಆದರೆ ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಮಕ್ಕಳಿಗೆ ಟ್ಯಾಬ್ ವಿತರಿಸುವಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದಲೂ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ವರ್ಗಾಯಿಸಲು ಸರ್ಕಾರ ನಿರ್ಧರಿಸಿದೆ” ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆನ್‌ಲೈನ್ ಶಿಕ್ಷಣ ಆರಂಭವಾದಾಗಿನಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಮನೆಯ ಆರ್ಥಿಕ ಪರಿಸ್ಥಿತಿಯ ಕಾರಣದಿಂದ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ನೆಟ್‌ವರ್ಕ್‌ ಸಮಸ್ಯೆ ಕಾರಣದಿಂದಲೂ ಆನ್‌ಲೈನ್ ಶಿಕ್ಷಣಕ್ಕೆ ವಿರೋಧಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ಬಿಜೆಪಿ ನನ್ನ ಜೈಲಿಗೆ ಹಾಕಿದರೂ, ಅಲ್ಲಿಂದಲೇ ಪಕ್ಷವನ್ನು ಗೆಲ್ಲಿಸುವೆ-ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...