Homeಎಕಾನಮಿಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

ಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

- Advertisement -
- Advertisement -

ಆರ್ಥಿಕತೆಯ ಮೇಲೆ ದೀರ್ಘಕಾಲದ ಲಾಕ್‌ಡೌನ್‌ನ ಪರಿಣಾಮ ತೀವ್ರವಾಗಿದೆ ಮತ್ತು 15 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್‌ ಅಗತ್ಯವಿದೆ ಎಂದು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಶುಕ್ರವಾರ ತಿಳಿಸಿದೆ. ಇದು ಹಿಂದೆ ಅದು 4.5 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಅಂದಾಜಿಸಿತ್ತು.

ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮವು ಉದ್ಯಮವು ಈ ಹಿಂದೆ ನಿರೀಕ್ಷಿಸಿದ್ದಕ್ಕಿಂತಲೂ ಹೆಚ್ಚಾಗಿದೆ. ಹಾಗಾಗಿ ದೊಡ್ಡ ಹಣಕಾಸಿನ ಉತ್ತೇಜನದಿಂದ ಅದನ್ನು ಸರಿದೂಗಿಸಬೇಕಾಗಿದೆ ಎಂದು ಸಿಐಐ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ತಿಳಿಸಿದ್ದಾರೆ.

ಲಾಕ್‌ಡೌನ್‌ನ ಮೂರನೇ ಹಂತವು ಮುಗಿಯುವ ಹೊತ್ತಿಗೆ, ಆರ್ಥಿಕತೆಯು ಸುಮಾರು ಎರಡು ತಿಂಗಳ ಉತ್ಪಾದನೆಯನ್ನು ಕಳೆದುಕೊಳ್ಳುತ್ತದೆ. ಹಾಗಗಿ “ಸಿಐಐ 15 ಲಕ್ಷ ಕೋಟಿ ರೂ.ಗಳ ತಕ್ಷಣದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಇದು ಜಿಡಿಪಿಯ 7.5% (ಒಟ್ಟು ದೇಶೀಯ ಉತ್ಪನ್ನ) ಆಗಿದೆ” ಎಂದು ಅವರು ಹೇಳಿದ್ದಾರೆ.

ಇತರ ಉದ್ಯಮ ಸಂಘಗಳು ಸಹ ಆರ್ಥಿಕತೆಯನ್ನು ಮತ್ತೆ ಹಳಿಗೆ ತರಲು ದೊಡ್ಡ ಉದ್ದೀಪನ ಪ್ಯಾಕೇಜ್ ಕೇಳಿವೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಫಿಕ್ಕಿ) 10 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಕೇಳಿದ್ದರೆ, ಪಿಎಚ್‌ಡಿ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ 16 ಲಕ್ಷ ಕೋಟಿ ರೂಗಳ ನೆರವು ನೀರಿಕ್ಷಿಸಿದೆ.

ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ಅಸ್ಸೋಚಾಮ್) ಅಧ್ಯಕ್ಷ ನಿರಂಜನ್ ಹಿರಾನಂದಾನಿ ಅವರು ಪ್ರಚೋದಕ ಪ್ಯಾಕೇಜ್‌ನ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. “ನೀತಿ ಆಯೋಗವು 10 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್ ಅನ್ನು ಪ್ರಸ್ತಾಪಿಸಿದೆ ಮತ್ತು ನಾವು 14 ಲಕ್ಷ ಕೋಟಿ ರೂ.ಗೆ ಪ್ಯಾಕೇಜ್ ಅನ್ನು ಸೂಚಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಸರ್ಕಾರದ ಆರಂಭಿಕ ಪ್ರತಿಕ್ರಿಯೆಯನ್ನು ಉದ್ಯಮ ಸಂಸ್ಥೆಗಳು ಅನುಮೋದಿಸಿದ್ದು, ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸುವ ದೊಡ್ಡ ಪ್ರಚೋದಕ ಪ್ಯಾಕೇಜ್ ಬಗ್ಗೆ ಅವರು ಸರ್ವಾನುಮತದಿಂದ ಒತ್ತಾಯಿಸಿದ್ದಾರೆ. ಮಾರ್ಚ್ 26 ರಂದು ಪಿಎಂಜಿಕೆವೈ ಅಡಿಯಲ್ಲಿ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿತು, ಇದು ಜಿಡಿಪಿಯ ಸುಮಾರು 0.8%. ಬಡವರಿಗೆ ಮೂರು ತಿಂಗಳ ಪಡಿತರ ಮತ್ತು ಅಡುಗೆ ಅನಿಲವನ್ನು ಉಚಿತ ಮತ್ತು ನೇರ ನಗದು ವರ್ಗಾವಣೆಗೆ ದೀನದಲಿತ ಮಹಿಳೆಯರು, ವೃದ್ಧರು ಮತ್ತು ಅಂಗವಿಕಲರಿಗೆ ಒದಗಿಸುವ ಮೂಲಕ ಕಲ್ಯಾಣ ಪ್ಯಾಕೇಜ್ ಉದ್ದೇಶಿಸಲಾಗಿದೆ. ಅಂದಿನಿಂದ, ಉದ್ಯಮಕ್ಕಾಗಿ ಶೀಘ್ರದಲ್ಲೇ ಹಣಕಾಸಿನ ಪ್ಯಾಕೇಜ್ ಘೋಷಿಸಲಾಗುತ್ತದೆ ಎಂಬ ವರದಿಗಳು ಬಂದವು, ಆದರೆ ಇದುವರೆಗೆ ಯಾವುದೂ ಆಗಿಲ್ಲ.

ಬಡವರು ಮತ್ತು ಉದ್ಯಮ ಇಬ್ಬರಿಗೂ ವಿಶೇಷವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸರ್ಕಾರದಿಂದ ತಕ್ಷಣದ ಸಬ್ಸ್ಟಾಂಟಿವ್ ಪ್ರಚೋದನೆ ಅಗತ್ಯವಾಗಿದೆ ಎಂದು ಸಿಐಐ ತಿಳಿಸಿದೆ.

“ಸ್ಪಷ್ಟವಾಗಿ, ಆರ್ಥಿಕತೆಯನ್ನು ರಕ್ಷಿಸಲು ಹಣಕಾಸಿನ ಪ್ರಚೋದಕ ಪ್ಯಾಕೇಜ್ ಘೋಷಿಸುವ ಸಮಯ ಮೀರಿದೆ. ಲಾಕ್‌ಡೌನ್ ಅಡಿಯಲ್ಲಿ ಕುಸಿತದಲ್ಲಿರುವ ಉದ್ಯಮಗಳಿಗೆ ಹಣಕಾಸಿನ ಪರಿಹಾರ ವಿಳಂಬವಾಗುವುದು ಅವರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ ”ಎಂದು ಸಿಐಐ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ.

1.7 ಲಕ್ಷ ರೂ.ಗಳ ಪಿಎಂಜಿಕೆವೈ ಪ್ಯಾಕೇಜ್ ಜೊತೆಗೆ ಜಾಮ್ ಟ್ರಿನಿಟಿ (ಜನ-ಧನ್, ಆಧಾರ್ ಮತ್ತು ಮೊಬೈಲ್) ಮೂಲಕ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಬಡವರಿಗೆ 2 ಲಕ್ಷ ಕೋಟಿ ರೂ.ಗಳ ನೇರ ನಗದು ವರ್ಗಾವಣೆಯನ್ನು ಅದು ಪ್ರಸ್ತಾಪಿಸಿದೆ. ವಲಸೆ ಕಾರ್ಮಿಕರನ್ನು ಉದ್ದೇಶಿತ ನಗದು ವರ್ಗಾವಣೆಯ ವ್ಯಾಪ್ತಿಯಲ್ಲಿ ಇರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

Also read: Canada: Indian man loses his job over Islamophobic Tweet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...