Homeಎಕಾನಮಿಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

ಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

- Advertisement -
- Advertisement -

ಆರ್ಥಿಕತೆಯ ಮೇಲೆ ದೀರ್ಘಕಾಲದ ಲಾಕ್‌ಡೌನ್‌ನ ಪರಿಣಾಮ ತೀವ್ರವಾಗಿದೆ ಮತ್ತು 15 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್‌ ಅಗತ್ಯವಿದೆ ಎಂದು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಶುಕ್ರವಾರ ತಿಳಿಸಿದೆ. ಇದು ಹಿಂದೆ ಅದು 4.5 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಅಂದಾಜಿಸಿತ್ತು.

ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮವು ಉದ್ಯಮವು ಈ ಹಿಂದೆ ನಿರೀಕ್ಷಿಸಿದ್ದಕ್ಕಿಂತಲೂ ಹೆಚ್ಚಾಗಿದೆ. ಹಾಗಾಗಿ ದೊಡ್ಡ ಹಣಕಾಸಿನ ಉತ್ತೇಜನದಿಂದ ಅದನ್ನು ಸರಿದೂಗಿಸಬೇಕಾಗಿದೆ ಎಂದು ಸಿಐಐ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ತಿಳಿಸಿದ್ದಾರೆ.

ಲಾಕ್‌ಡೌನ್‌ನ ಮೂರನೇ ಹಂತವು ಮುಗಿಯುವ ಹೊತ್ತಿಗೆ, ಆರ್ಥಿಕತೆಯು ಸುಮಾರು ಎರಡು ತಿಂಗಳ ಉತ್ಪಾದನೆಯನ್ನು ಕಳೆದುಕೊಳ್ಳುತ್ತದೆ. ಹಾಗಗಿ “ಸಿಐಐ 15 ಲಕ್ಷ ಕೋಟಿ ರೂ.ಗಳ ತಕ್ಷಣದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಇದು ಜಿಡಿಪಿಯ 7.5% (ಒಟ್ಟು ದೇಶೀಯ ಉತ್ಪನ್ನ) ಆಗಿದೆ” ಎಂದು ಅವರು ಹೇಳಿದ್ದಾರೆ.

ಇತರ ಉದ್ಯಮ ಸಂಘಗಳು ಸಹ ಆರ್ಥಿಕತೆಯನ್ನು ಮತ್ತೆ ಹಳಿಗೆ ತರಲು ದೊಡ್ಡ ಉದ್ದೀಪನ ಪ್ಯಾಕೇಜ್ ಕೇಳಿವೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಫಿಕ್ಕಿ) 10 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಕೇಳಿದ್ದರೆ, ಪಿಎಚ್‌ಡಿ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ 16 ಲಕ್ಷ ಕೋಟಿ ರೂಗಳ ನೆರವು ನೀರಿಕ್ಷಿಸಿದೆ.

ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ಅಸ್ಸೋಚಾಮ್) ಅಧ್ಯಕ್ಷ ನಿರಂಜನ್ ಹಿರಾನಂದಾನಿ ಅವರು ಪ್ರಚೋದಕ ಪ್ಯಾಕೇಜ್‌ನ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. “ನೀತಿ ಆಯೋಗವು 10 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್ ಅನ್ನು ಪ್ರಸ್ತಾಪಿಸಿದೆ ಮತ್ತು ನಾವು 14 ಲಕ್ಷ ಕೋಟಿ ರೂ.ಗೆ ಪ್ಯಾಕೇಜ್ ಅನ್ನು ಸೂಚಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಸರ್ಕಾರದ ಆರಂಭಿಕ ಪ್ರತಿಕ್ರಿಯೆಯನ್ನು ಉದ್ಯಮ ಸಂಸ್ಥೆಗಳು ಅನುಮೋದಿಸಿದ್ದು, ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸುವ ದೊಡ್ಡ ಪ್ರಚೋದಕ ಪ್ಯಾಕೇಜ್ ಬಗ್ಗೆ ಅವರು ಸರ್ವಾನುಮತದಿಂದ ಒತ್ತಾಯಿಸಿದ್ದಾರೆ. ಮಾರ್ಚ್ 26 ರಂದು ಪಿಎಂಜಿಕೆವೈ ಅಡಿಯಲ್ಲಿ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿತು, ಇದು ಜಿಡಿಪಿಯ ಸುಮಾರು 0.8%. ಬಡವರಿಗೆ ಮೂರು ತಿಂಗಳ ಪಡಿತರ ಮತ್ತು ಅಡುಗೆ ಅನಿಲವನ್ನು ಉಚಿತ ಮತ್ತು ನೇರ ನಗದು ವರ್ಗಾವಣೆಗೆ ದೀನದಲಿತ ಮಹಿಳೆಯರು, ವೃದ್ಧರು ಮತ್ತು ಅಂಗವಿಕಲರಿಗೆ ಒದಗಿಸುವ ಮೂಲಕ ಕಲ್ಯಾಣ ಪ್ಯಾಕೇಜ್ ಉದ್ದೇಶಿಸಲಾಗಿದೆ. ಅಂದಿನಿಂದ, ಉದ್ಯಮಕ್ಕಾಗಿ ಶೀಘ್ರದಲ್ಲೇ ಹಣಕಾಸಿನ ಪ್ಯಾಕೇಜ್ ಘೋಷಿಸಲಾಗುತ್ತದೆ ಎಂಬ ವರದಿಗಳು ಬಂದವು, ಆದರೆ ಇದುವರೆಗೆ ಯಾವುದೂ ಆಗಿಲ್ಲ.

ಬಡವರು ಮತ್ತು ಉದ್ಯಮ ಇಬ್ಬರಿಗೂ ವಿಶೇಷವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸರ್ಕಾರದಿಂದ ತಕ್ಷಣದ ಸಬ್ಸ್ಟಾಂಟಿವ್ ಪ್ರಚೋದನೆ ಅಗತ್ಯವಾಗಿದೆ ಎಂದು ಸಿಐಐ ತಿಳಿಸಿದೆ.

“ಸ್ಪಷ್ಟವಾಗಿ, ಆರ್ಥಿಕತೆಯನ್ನು ರಕ್ಷಿಸಲು ಹಣಕಾಸಿನ ಪ್ರಚೋದಕ ಪ್ಯಾಕೇಜ್ ಘೋಷಿಸುವ ಸಮಯ ಮೀರಿದೆ. ಲಾಕ್‌ಡೌನ್ ಅಡಿಯಲ್ಲಿ ಕುಸಿತದಲ್ಲಿರುವ ಉದ್ಯಮಗಳಿಗೆ ಹಣಕಾಸಿನ ಪರಿಹಾರ ವಿಳಂಬವಾಗುವುದು ಅವರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ ”ಎಂದು ಸಿಐಐ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ.

1.7 ಲಕ್ಷ ರೂ.ಗಳ ಪಿಎಂಜಿಕೆವೈ ಪ್ಯಾಕೇಜ್ ಜೊತೆಗೆ ಜಾಮ್ ಟ್ರಿನಿಟಿ (ಜನ-ಧನ್, ಆಧಾರ್ ಮತ್ತು ಮೊಬೈಲ್) ಮೂಲಕ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಬಡವರಿಗೆ 2 ಲಕ್ಷ ಕೋಟಿ ರೂ.ಗಳ ನೇರ ನಗದು ವರ್ಗಾವಣೆಯನ್ನು ಅದು ಪ್ರಸ್ತಾಪಿಸಿದೆ. ವಲಸೆ ಕಾರ್ಮಿಕರನ್ನು ಉದ್ದೇಶಿತ ನಗದು ವರ್ಗಾವಣೆಯ ವ್ಯಾಪ್ತಿಯಲ್ಲಿ ಇರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

Also read: Canada: Indian man loses his job over Islamophobic Tweet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...